Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಲೆ ಏರಿಕೆ ತಡೆಗೆ ಪರ್ಯಾಯ ನೀತಿಗಳು...

ಬೆಲೆ ಏರಿಕೆ ತಡೆಗೆ ಪರ್ಯಾಯ ನೀತಿಗಳು ಅಗತ್ಯ: ಬಾಲಕೃಷ್ಣ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ1 Nov 2021 7:47 PM IST
share
ಬೆಲೆ ಏರಿಕೆ ತಡೆಗೆ ಪರ್ಯಾಯ ನೀತಿಗಳು ಅಗತ್ಯ: ಬಾಲಕೃಷ್ಣ ಶೆಟ್ಟಿ

ಬೈಂದೂರು, ನ.1: ಕೇಂದ್ರ ಸರಕಾರದ ನೀತಿಗಳಿಂದಾಗಿ ದಿನೇ ದಿನೇ ಬೆಲೆ ಏರಿಕೆ ತೀವ್ರವಾಗುತ್ತಿದೆ. ಬೆಲೆ ಏರಿಕೆ ತಡೆಗಟ್ಟಲು ಪರ್ಯಾಯ ನೀತಿಗಳು ಅಗತ್ಯವಾಗಿವೆ ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಹೇಳಿದ್ದಾರೆ.

ಗುಲ್ವಾಡಿ ಪ್ರಭಾಕಿರಣ ಟೈಲ್ಸ್ ಕಾರ್ಖಾನೆ ಆವರಣದಲ್ಲಿ ಕಾಂ.ವಿಠಲ ಪೂಜಾರಿ ವೇದಿಕೆಯ ಕಾಂ.ಗೋವಿಂದ ಶೆಟ್ಟಿಗಾರ್ ಸಭಾಂಗಣದಲ್ಲಿ ಇಂದು ನಡೆದ ಬೈಂದೂರು ವಲಯ ಮೂರನೇ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜನರಿಗೆ ಲಸಿಕೆ ಕೊಡಲು ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ಅನಿವಾರ್ಯ ಎಂದು ಜನರನ್ನು ನಂಬಿಸಲಾಗುತ್ತಿದೆ. ಆದರೆ ಬಹುತೇಕ ತೈಲ ಕಂಪೆನಿಗಳು ಇಂದು ಖಾಸಗಿ ಒಡೆತನದಲ್ಲಿದ್ದು ಆ ಕಂಪೆನಿಗಳ ಲಾಭ ಹೆಚ್ಚಿಸಲು ಸರಕಾರ ಪ್ರಯತ್ನಿಸುತ್ತಿದೆ. ಅಡುಗೆ ಅನಿಲ ಸೇರಿದಂತೆ ಎಲ್ಲಾ ಆಹಾರ ವಸ್ತುಗಳ ಬೆಲೆ ಏರಿಕೆ ವಿರುದ್ಧ ಈ ಸಮ್ಮೇಳನವು ಮುಂದಿನ ದಿನದಲ್ಲಿ ತೀವ್ರ ಹೋರಾಟ ನಡೆಸಲು ನಿರ್ಣಯಿಸಬೇಕೆಂದು ಅವರು ಕರೆ ನೀಡಿದರು.

ಕೇಂದ್ರ ಸರಕಾರ ಅನುಸರಿಸುತ್ತಿರುವ ಕೆಟ್ಟ ಆರ್ಥಿಕ ನೀತಿಯಿಂದ ದೇಶದಲ್ಲಿ 70 ಲಕ್ಷ ಕಾರ್ಖಾನೆಗಳು ಮುಚ್ಚಿವೆ. ಇದರಿಂದ ಕೋಟ್ಯಾಂತರ ಉದ್ಯೋಗಗಳು ನಷ್ಟವಾಗಿವೆ. ನಮ್ಮ ಸಂಘಟನೆಗಳು ಇಂತಹ ಕಾರ್ಖಾನೆಗಳನ್ನು ಉಳಿಸಲು ಪರ್ಯಾಯ ಆರ್ಥಿಕ ನೀತಿಗಳಿಗಾಗಿ ಹೋರಾಟ ನಡೆಸುತ್ತಿದ್ದರು. ಸರಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಅವರು ದೂರಿದರು.

ಅಧ್ಯಕ್ಷತೆ ಜಿ.ಡಿ.ಪಂಜು ವಹಿಸಿದ್ದರು. ಧ್ವಜಾರೋಹಣವನ್ನು ಪಕ್ಷದ ಹಿರಿಯ ಸದಸ್ಯ ಜಿ.ಬಿ.ಮುಹಮ್ಮದ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಿಪಿಎಂ ಪಕ್ಷದ ರಾಜ್ಯ ಮುಖಂಡ ಕೆ.ಶಂಕರ್, ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಎಚ್.ನರಸಿಂಹ, ಮಹಾಬಲ ವಡೇರಹೋಬಳಿ ಮಾತನಾಡಿದರು.

ಪ್ರತಿನಿಧಿ ಅಧಿವೇಶನವನ್ನು ವೆಂಕಟೇಶ್ ಕೋಣಿ, ಶೀಲಾವತಿ, ಸಂತೋಷ ಹೆಮ್ಮಾಡಿ ನಡೆಸಿಕೊಟ್ಟರು. ಶ್ರದ್ಧಾಂಜಲಿ ಠರಾವು ಮನೋರಮ ಭಂಡಾರಿ ಮಂಡಿಸಿದರು. ಪಕ್ಷದ ವಲಯ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಕರಡು ವರದಿ ಮಂಡಿಸಿದರು. ರಮೇಶ್ ಗುಲ್ವಾಡಿ ವಂದಿಸಿದರು.

ಬೆಲೆ ಏರಿಕೆ ವಿರೋಧಿಸಿ, ರೈತ ಕಾರ್ಮಿಕ ಕಾಯ್ದೆ ತಿದ್ದುಪಡಿ ವಿರೋಧಿಸಿ, ಸೇಪಾಪುರದಲ್ಲಿ ಎಲ್ಲಾ ರೈಲುಗಳು ನಿಲುಗಡೆಗೆ ಆಗ್ರಹಿಸಿ, ಕರಾವಳಿ ನಿಯಂತ್ರಣ ವಲಯ ಕಠಿಣ ನಿಯಮಾವಳಿ ಸಡಿಲಗೊಳಿಸಲು, ಬೈಂದೂರು ಪ್ರವಾಸೋದ್ಯಮ ಅಭಿವೃದ್ಧಿ, ಸೌಕೂರು ಏತ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿ ಸಲು, ಗಂಗೊಳ್ಳಿ ಕೋಡಿ ಸೇತುವೆ ಸೇರಿದಂತೆ ಮೊದಲಾದ ನಿರ್ಣಯಗಳನ್ನು ಸಮ್ಮೇಳನ ಕೈಗೊಂಡಿತು. ನೂತನ ಕಾರ್ಯದರ್ಶಿಯಾಗಿ ಸುರೇಶ್ ಕಲ್ಲಾಗರ ಮರು ಆಯ್ಕೆಯಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X