Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾನಗಲ್, ಸಿಂದಗಿ ಉಪಚುನಾವಣೆ: ಮಂಗಳವಾರ...

ಹಾನಗಲ್, ಸಿಂದಗಿ ಉಪಚುನಾವಣೆ: ಮಂಗಳವಾರ ಮತ ಎಣಿಕೆ

ವಾರ್ತಾಭಾರತಿವಾರ್ತಾಭಾರತಿ1 Nov 2021 7:55 PM IST
share
ಹಾನಗಲ್, ಸಿಂದಗಿ ಉಪಚುನಾವಣೆ: ಮಂಗಳವಾರ ಮತ ಎಣಿಕೆ

ಬೆಂಗಳೂರು, ನ. 1: ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಪೈಪೋಟಿ ಸೃಷ್ಟಿಸಿರುವ ಹಾವೇರಿ ಜಿಲ್ಲೆಯ ಹಾನಗಲ್ ಮತ್ತು ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಕಾರ್ಯವು ನಾಳೆ(ನ.2) ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಫಲಿತಾಂಶ ಪ್ರಕಟಗೊಳ್ಳುವ ಸಾಧ್ಯತೆಗಳಿವೆ.

ಹಾನಗಲ್ ಕ್ಷೇತ್ರದಲ್ಲಿ ಶೇ.83.72ರಷ್ಟು ಮತ್ತು ಸಿಂದಗಿ ಕ್ಷೇತ್ರದಲ್ಲಿ ಶೇ.69.41ರಷ್ಟು ಮತದಾನವಾಗಿದ್ದು ರಾಜಕೀಯ ಪಕ್ಷಗಳ ಮಧ್ಯೆ ಸೋಲು-ಗೆಲುವಿನ ಲೆಕ್ಕಾಚಾರ ನಡೆಯುತ್ತಿದೆ. ಈ ನಡುವೆಯೇ ಚುನಾವಣಾ ಆಯೋಗ ಎರಡು ಕ್ಷೇತ್ರಗಳಲ್ಲಿ ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಅಗತ್ಯ ಸಿಬ್ಬಂದಿ ಹಾಗೂ ಸೂಕ್ತ ಭದ್ರತೆಗೆ ಕ್ರಮ ಕೈಕೊಂಡಿದೆ.

ಸಿ.ಎಂ.ಉದಾಸಿ ನಿಧನದಿಂದ ತೆರವಾಗಿರುವ ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನರ್, ಕಾಂಗ್ರೆಸಿನ ಶ್ರೀನಿವಾಸ ಮಾನೆ ಹಾಗೂ ಜೆಡಿಎಸ್‍ನ ನಿಯಾಝ್ ಶೇಖ್ ಸಹಿತ 13 ಮಂದಿ ಕಣದಲ್ಲಿದ್ದರೆ, ಅತ್ತ ಎಂ.ಸಿ.ಮನಗೂಳಿ ನಿಧನದಿಂದ ತೆರವಾದ ಸಿಂದಗಿ ಕ್ಷೇತ್ರದಲ್ಲಿ ಕಾಂಗ್ರೆಸ್‍ನ ಅಶೋಕ್ ಮನಗೂಳಿ, ಬಿಜೆಪಿಯ ರಮೇಶ್ ಬೂಸನೂರ ಹಾಗೂ ಜೆಡಿಎಸ್‍ನ ನಾಝಿಯಾ ಅಂಗಡಿ ಸೇರಿದಂತೆ 6 ಮಂದಿ ಅಖಾಡದಲ್ಲಿದ್ದು, ನಾಳೆ ಘಟಾನುಘಟಿ ಅಭ್ಯರ್ಥಿಗಳ ಭವಿಷ್ಯ ಬಹಿರಂಗವಾಗಲಿದೆ.

ಹಾನಗಲ್ ಕ್ಷೇತ್ರದ ಮತ ಎಣಿಕೆ ಕಾರ್ಯವು ಹಾವೇರಿ ನಗರದ ಸರಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಲಿದ್ದು, ಸಿಂದಗಿ ಕ್ಷೇತ್ರದ ಮತ ಎಣಿಕೆ ಕಾರ್ಯ ವಿಜಯಪುರ ನಗರದ ಸೈನಿಕ ಶಾಲೆಯಲ್ಲಿ ಜರುಗಲಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎರಡು ಪ್ರತ್ಯೇಕ ಕೋಣೆಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು, 16 ಟೇಬಲ್‍ಗಳಲ್ಲಿ ಒಟ್ಟು 22 ಸುತ್ತು ಮತ ಎಣಿಕೆ ಕಾರ್ಯ ನಡೆಯಲಿದೆ.

ಮತ ಎಣಿಕೆ ಕಾರ್ಯಕ್ಕೆ ಪ್ರತಿ ಟೇಬಲ್‍ಗೆ ತಲಾ ಒಬ್ಬ ಮೈಕ್ರೋ ಅಬ್ಸರ್ವರ್ ಒಬ್ಬ ಮತ ಎಣಿಕೆ ಮೇಲ್ವಿಚಾರಕ, ಒಬ್ಬ ಮತ ಎಣಿಕೆ ಸಹಾಯಕರು ಸೇರಿದಂತೆ ಒಟ್ಟು 60 ಸಿಬ್ಬಂದಿ ನೇಮಿಸಲಾಗಿದ್ದು, ಆರಂಭದಲ್ಲಿ ಅಂಚೆ ಮತಪತ್ರಗಳ ಎಣಿಕೆ ಕಾರ್ಯವು ಚುನಾವಣಾಧಿಕಾರಿಗಳ ಸಮ್ಮುಖದಲ್ಲಿ ನಡೆಯಲಿದೆ. ಗುರುತಿನ ಚೀಟಿ ಪಾಸ್ ಹೊಂದಿದವರಿಗೆ ಮಾತ್ರ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗುತ್ತದೆ.

ಎಣಿಕೆ ಕೇಂದ್ರಕ್ಕೆ ಮೊಬೈಲ್ ಫೆÇೀನ್, ಎಲೆ, ಅಡಿಕೆ, ಗುಟ್ಕಾ, ಪಾನ್‍ಮಸಾಲ, ತಿಂಡಿ-ತಿನಿಸು, ಕುಡಿಯುವ ನೀರು ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ಆಯೋಗದಿಂದ ಪ್ರವೇಶ ಅನುಮತಿ ಹೊಂದಿದ ವಾಹನಗಳಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶವಿರುತ್ತದೆ ಹಾಗೂ ಅಭ್ಯರ್ಥಿಗಳಿಗೆ ಮತ್ತು ಚುನಾವಣಾ ಏಜೆಂಟರುಗಳಿಗೆ ಮಾತ್ರ ನಿಗದಿತ ಸ್ಥಳದಲ್ಲಿ ವಾಹನ ನಿಲುಗಡೆಗೆ ಅವಕಾಶ ಇರುತ್ತದೆ ಎಂದು ಹೇಳಿದರು.

ಇವಿಎಂ ಮತಯಂತ್ರಗಳ ಎಣಿಕೆ ಕೊನೆ ಸುತ್ತಿನ ನಂತರ 5 ವಿವಿಪ್ಯಾಟ್ ಮತಯಂತ್ರಗಳಲ್ಲಿ ವಿವಿಪ್ಯಾಟ್ ಸ್ಲೀಪ್‍ಗಳನ್ನು ಎಣಿಕೆ ತಾಳೆ ಮಾಡಲಾಗುತ್ತದೆ. ನಿಗದಿತ ಮತ ಎಣಿಕೆ ಟೇಬಲ್‍ಗೆ ನಿಗದಿತ ಏಜೆಂಟ್ ಇರಬೇಕು. ಬೇರೆ ಟೇಬಲ್‍ಗೆ ಹೋಗಿಬರಲು ಅವಕಾಶವಿರುವುದಿಲ್ಲ. ಈಗಾಗಲೇ ಚುನಾವಣಾ ಅಧಿಕಾರಿಗಳು ಭಾವಚಿತ್ರವಿರುವ ಗುರುತಿನ ಚೀಟಿ ನೀಡಿದ್ದು, ಅದರಂತೆ ಏಜೆಂಟರು ಎಣಿಕೆ ಕೊಠಡಿಯಲ್ಲಿ ಬೆಳಗ್ಗೆ 7.30ಕ್ಕೆ ಹಾಜರಿರಬೇಕೆಂದು ಸೂಚಿಸಲಾಗಿದೆ.

ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಿದ್ದು, ಮುನ್ನಚ್ಚರಿಕೆ ಕ್ರಮವಾಗಿ ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀ.ವ್ಯಾಪ್ತಿಯಲ್ಲಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದಂತೆ ಸುಗಮ ಮತ ಎಣಿಕೆ ಎಲ್ಲ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಗೆಲವು' ಪ್ರತಿಷ್ಠೆ: ಎರಡೂ ಕ್ಷೇತ್ರಗಳ ಉಪಚುನಾವಣೆಯ ಗೆಲುವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯಾಗಿದ್ದರೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ತಮ್ಮ ಅಸ್ತಿತ್ವದ ಉಳಿವಿನ ಪ್ರಶ್ನೆಯಾಗಿದೆ. ಹೀಗಾಗಿ ಈ ಉಪಚುನಾವಣೆ ರಾಜಕೀಯದಲ್ಲಿ ತೀವ್ರ ಕುತೂಹಲ ಸೃಷ್ಟಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X