Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರವಾದಿವರ್ಯರ ಜೀವನದ ಮಾದರಿಯನ್ನು...

ಪ್ರವಾದಿವರ್ಯರ ಜೀವನದ ಮಾದರಿಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ: ಶಬ್ಬೀರ್ ಅಹ್ಮದ್ ಖಾನ್

ವಾರ್ತಾಭಾರತಿವಾರ್ತಾಭಾರತಿ1 Nov 2021 10:35 PM IST
share
ಪ್ರವಾದಿವರ್ಯರ ಜೀವನದ ಮಾದರಿಯನ್ನು ನಾವೆಲ್ಲರೂ ಅಳವಡಿಸಿಕೊಳ್ಳಬೇಕಿದೆ: ಶಬ್ಬೀರ್ ಅಹ್ಮದ್ ಖಾನ್

ಕಾಪು: ಪ್ರವಾದಿವರ್ಯರ ಜೀವನಸಂದೇಶವನ್ನು ನಮ್ಮ ಬಾಳಿನಲ್ಲಿ ಅಳವಡಿಸಿಕೊಂಡು, ಸಮಾಜದಲ್ಲಿ ಮಾದರಿ ವ್ಯಕ್ತಿಗಳಾಗಿ ರೂಪುಗೊಳ್ಳಬೇಕು. ಹಾಗೂ ನಾವು ಇತರರಿಗೆ ಬೋಧಿಸುವವರು ಆಗದೆ  ನಡೆದು ತೋರಿಸುವವರು ಆಗಬೇಕು ಹಾಗಾದಾಗ ಮಾತ್ರ ನಾವು ಪ್ರವಾದಿವರ್ಯರ ನೈಜ ಸಂದೇಶವನ್ನು ಜನರ ಮುಂದೆ ಸಾರಿದಂತಾಗುವುದು  ಎಂದು ಜಮಾಅತೆ ಇಸ್ಲಾಮೀ ಹಿಂದ್  ಕರ್ನಾಟಕ ಇದರ ಕರ್ನಾಟಕ  ರಾಜ್ಯ ಸಲಹಾ ಸಮಿತಿ ಸದಸ್ಯರಾದ ಶಬ್ಬೀರ್ ಅಹ್ಮದ್ ಖಾನ್ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಜಮಾಅತೆ ಇಸ್ಲಾಮಿ ಹಿಂದ್ ಕಾಪು ವರ್ತುಲದ ವತಿಯಿಂದ ಸೋಮವಾರ ಇಲ್ಲಿನ ಕೆಒನ್ ಹೋಟೆಲ್‍ನ ಸಭಾಂಗಣದಲ್ಲಿ ನಡೆದ ಸಮುದಾಯದ ನಾಯಕರೊಂದಿಗೆ ಸ್ನೇಹಕೂಟ ಎಂಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಪ್ರವಾದಿ ಮುಹಮ್ಮದರು (ಸ) ಜನಿಸಿದ ಮಾಸದಲ್ಲಿ ನಾವು ಕೇವಲ ಪ್ರವಾದಿವರ್ಯರ ಜೀವನವನ್ನು ಸಾರುವ ಪುಸ್ತಕವನ್ನು ಹಂಚಿ ಸುಮ್ಮನಾಗುತ್ತೇವೆ. ಆದರೆ, ಪ್ರವಾದಿವರ್ಯರ ಸಂದೇಶವನ್ನು ನಾವು ಖುದ್ದು ಜೀವನದಲ್ಲಿ ಅಳವಡಿಸಿಕೊಳ್ಳುವ ಗೋಜಿಗೆ ಹೋಗುವುದಿಲ್ಲ. ಜಮಾಅತೆ ಇಸ್ಲಾಮಿ ಹಿಂದ್, ದ.ಕ ಜಿಲ್ಲೆಯ ಸಂಚಾಲಕರಾದ ಅಮೀನ್ ಅಹ್ಸನ್ ಮಾತನಾಡಿ, ಜಮಾಅತೆ ಇಸ್ಲಾಮಿ ಹಿಂದ್ ಕಳೆದ 70 ವರ್ಷಗಳಿಂದ ಈ ದೇಶದಲ್ಲಿ ಜಾತಿ, ಮತ ಬೇಧವಿಲ್ಲದೆ ಕುರ್ ಆನ್ ಮತ್ತು ಪ್ರವಾದಿ ಚರ್ಯೆಯ ಅಡಿಯಲ್ಲಿ ಸೇವೆ ಸಲ್ಲಿಸುತ್ತಾ ಬರುತ್ತಿದೆ. ಕೆಡುಕನ್ನು ಅಳಿಸಿ ಒಳಿತನ್ನು ಸ್ಥಾಪಿಸುವುದರೊಂದಿಗೆ, ಸಮುದಾಯದ ನಾಯಕತ್ವ ವಹಿಸುವವರು ಸಮಾಜದ ಒಳಿತಿಗಾಗಿ ಹಗಲಿರುಳು ದುಡಿಯುವಂತರಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಸಮಾಜಸೇವೆಗಾಗಿ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಮುಹಮ್ಮದ್ ಫಾರೂಕ್ ಚಂದ್ರ ನಗರ ಅವರನ್ನು ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಇದರ ಕಾಪು ತಾಲೂಕಿನ ಅಧ್ಯಕ್ಷರಾದ ಶಬಿ ಅಹ್ಮದ್ ಖಾಝಿ ಸನ್ಮಾನಿಸಿದರು.

ಸಭಿಕರಿಂದ ವಿಚಾರ ವಿನಿಮಯ ನಡೆಯಿತು. ಜಮಾಅತೆ ಇಸ್ಲಾಮ್ ಕಾಪು ವರ್ತುಲದ ಕಾರ್ಯದರ್ಶಿಯಾದ ಮುಹಮ್ಮದ್ ಇಕ್ಬಾಲ್ ಸಾಹೇಬ್ ಧನ್ಯವಾದವಿತ್ತರು. ಇಬ್ರಾಹೀಂ ಸಯೀದ್ ಉಮರಿ ಕಿರಾಅತ್ ಪಠಿಸಿ,  ಕಾರ್ಯಕ್ರಮ ನಿರೂಪಿಸಿದರು.  ಜಮಾಅತೆ ಇಸ್ಲಾಮ್ ಉಡುಪಿ ಜಿಲ್ಲಾಧ್ಯಕ್ಷ ಡಾ,ಅಬ್ದುಲ್ ಅಝೀಝ್ ಮಣಿಪಾಲ, ಕಾಪು ಜಮಾಅತೆ ಇಸ್ಲಾಮಿ ಹಿಂದ್ ನ ಸ್ಥಾನೀಯ ಅಧ್ಯಕ್ಷ ಅನ್ವರ್ ಅಲಿ ಕಾಪು, ಆಸಿಫ್ ಜಿಡಿ, ಮುಹಮ್ಮದ್ ಅಲಿ, ಮುಹಮ್ಮದ್ ಫಾರೂಕ್, ಮುಹಮ್ಮದ್ ಹಾಶಿಮ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X