Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತಕ್ಕೆ ಮುಂದಿನ ದಾರಿ ಯಾವುದು?

ಭಾರತಕ್ಕೆ ಮುಂದಿನ ದಾರಿ ಯಾವುದು?

ಅಫ್ಘಾನ್ ಆಪತ್ಬಾಂಧವವಾಗಹುದೇ

ವಾರ್ತಾಭಾರತಿವಾರ್ತಾಭಾರತಿ1 Nov 2021 11:57 PM IST
share
ಭಾರತಕ್ಕೆ ಮುಂದಿನ ದಾರಿ ಯಾವುದು?

ದುಬೈ, ನ. 1: ದುಬೈನಲ್ಲಿ ರವಿವಾರ ಭಾರತ ಮತ್ತು ನ್ಯೂಝಿಲ್ಯಾಂಡ್ ಕ್ರಿಕೆಟ್ ತಂಡಗಳ ನಡುವೆ ನಡೆದ ಐಸಿಸಿ ಟ್ವೆಂಟಿ-20 ವಿಶ್ವಕಪ್ ಪಂದ್ಯವು ಯತಾರ್ಥ ಕ್ವಾರ್ಟರ್ ಫೈನಲ್ ಪಂದ್ಯವಾಗಿತ್ತು. ದುರದೃಷ್ಟವಶಾತ್ ಭಾರತ ಈ ಪಂದ್ಯವನ್ನು 8 ವಿಕೆಟ್‌ಗಳಿಂದ ಸೋತಿತ್ತು. ಇದಕ್ಕಿಂತ ಒಂದು ವಾರದ ಮೊದಲು ಭಾರತವು ತನ್ನ ಆರಂಭಿಕ ವಿಶ್ವಕಪ್ ಪಂದ್ಯವನ್ನು ಪಾಕಿಸ್ತಾನದ ವಿರುದ್ಧ 10 ವಿಕೆಟ್‌ಗಳಿಂದ ಸೋತಿತ್ತು.

ಹಾಲಿ ವಿಶ್ವಕಪ್‌ನಲ್ಲಿ ಸೂಪರ್ 12ರ ಎರಡು ಗುಂಪುಗಳಿಂದ ತಲಾ ಎರಡು ತಂಡಗಳು ಸೆಮಿಫೈನಲ್‌ಗೆ ಹೋಗುವ ಅರ್ಹತೆಯನ್ನು ಪಡೆಯಲಿವೆ. ಭಾರತ ಇರುವ ಗುಂಪು 2ರಲ್ಲಿ ಈಗಾಗಲೇ ಮೂರು ಪಂದ್ಯಗಳನ್ನು ಗೆದ್ದಿರುವ ಪಾಕಿಸ್ತಾನ 6 ಅಂಕಗಳೊಂದಿಗೆ ಅಗ್ರ ಸ್ಥಾನದಲ್ಲಿದ್ದು ಸೆಮಿಫೈನಲ್‌ಗೆ ತಲುಪುವುದು ನಿಶ್ಚಿತವಾಗಿದೆ. ಪಾಕಿಸ್ತಾನದ ವಿರುದ್ಧ ಸೋತು, ಭಾರತದ ವಿರುದ್ಧ ಗೆದ್ದಿರುವ ನ್ಯೂಝಿಲ್ಯಾಂಡ್ 2 ಅಂಕಗಳನ್ನು ಹೊಂದಿದೆ. ಪಾಕಿಸ್ತಾನದ ವಿರುದ್ಧ ಸೋತು ಸ್ಕಾಟ್ಲೆಂಡ್ ಮತ್ತು ನಮೀಬಿಯ ವಿರುದ್ಧ ಗೆದ್ದಿರುವ ಅಫ್ಘಾನಿಸ್ತಾನ 4 ಅಂಕಗಳನ್ನು ಹೊಂದಿದೆ. ಭಾರತ ತನ್ನ ಖಾತೆಯನ್ನು ಇನ್ನಷ್ಟೇ ಆರಂಭಿಸಬೇಕಿದೆ.

ಹಾಗಾದರೆ, ಇನ್ನು ಭಾರತಕ್ಕೆ ಸೆಮಿಫೈನಲ್‌ಗೆ ತೇರ್ಗಡೆಯಾಗುವ ಯಾವುದಾದರೂ ಅವಕಾಶವಿದೆಯೇ?

ಅವಕಾಶವಂತೂ ಇದೆ. ಭಾರತವು ಸ್ಕಾಟ್ಲೆಂಡ್, ನಮೀಬಿಯ ಮತ್ತು ಅಫ್ಘಾನಿಸ್ತಾನಗಳ ವಿರುದ್ಧದ ತನ್ನ ಮುಂದಿನ ಎಲ್ಲ ಮೂರು ಪಂದ್ಯಗಳನ್ನು ಗೆಲ್ಲಬೇಕು. ಅದೇ ವೇಳೆ, ನ್ಯೂಝಿಲ್ಯಾಂಡ್ ಕೂಡ ಇವೇ ತಂಡಗಳ ವಿರುದ್ಧ ತನ್ನ ಉಳಿದ ಮೂರು ಪಂದ್ಯಗಳನ್ನು ಆಡಲಿದೆ. ಈ ಪೈಕಿ ಇದ್ದುದರಲ್ಲಿ ಬಲಿಷ್ಠವೆಂದು ಪರಿಗಣಿಸಲ್ಪಟ್ಟಿರುವ ಅಫ್ಘಾನಿಸ್ತಾನವು ನ್ಯೂಝಿಲ್ಯಾಂಡ್ ತಂಡವನ್ನು ಸೋಲಿಸಿದರೆ ಭಾರತದ ಸೆಮಿಫೈನಲ್ ಆಸೆ ಜೀವಂತವಾಗಿರುತ್ತದೆ.

ನಮೀಬಿಯ ಮತ್ತು ಸ್ಕಾಟ್ಲೆಂಡ್ ವಿರುದ್ಧದ ತನ್ನ ಪಂದ್ಯಗಳನ್ನು ನ್ಯೂಝಿಲ್ಯಾಂಡ್ ಗೆದ್ದರೂ, ಆಗ ಭಾರತ ಮತ್ತು ನ್ಯೂಝಿಲ್ಯಾಂಡ್‌ಗಳು ತಲಾ 6 ಅಂಕಗಳೊಂದಿಗೆ ಸಮಬಲವಾಗಿರುತ್ತವೆ. ಆಗ ನೆಟ್‌ ರನ್‌ರೇಟ್ ಆಧಾರದಲ್ಲಿ ಭಾರತ ಸೆಮಿಫೈನಲ್ ತಲುಪಬಹುದು. ಯಾಕೆಂದರೆ ತನ್ನ ಸೂಪರ್ 12 ಹಂತದ ಕೊನೆಯ ಪಂದ್ಯವನ್ನು ಭಾರತ ನಮೀಬಿಯ ವಿರುದ್ಧ ಆಡಲಿದೆ. ಆ ಪಂದ್ಯದಲ್ಲಿ ತನ್ನ ನೆಟ್ ರನ್‌ರೇಟನ್ನು ಹೆಚ್ಚಿಸುವ ಅವಕಾಶವೊಂದು ಭಾರತಕ್ಕೆ ಇದೆ.

ಆದರೆ, ಅಫ್ಘಾನಿಸ್ತಾನಕ್ಕೆ ನ್ಯೂಝಿಲ್ಯಾಂಡ್ ತಂಡವನ್ನು ಸೋಲಿಸಲು ಸಾಧ್ಯವಾಗಬಹುದೇ? ಸಾಧ್ಯವಾಗಬಹುದು! ಯಾಕೆಂದರೆ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನವು ಗೆಲುವಿನ ಸನಿಹಕ್ಕೆ ಬಂದಿತ್ತು. ಆದರೆ 19ನೇ ಓವರ್‌ನಲ್ಲಿ ಅಸಿಫ್ ಅಲಿಯ ನಾಲ್ಕು ಸಿಕ್ಸರ್‌ಗಳು ಜಯವನ್ನು ಅದರಿಂದ ಕಸಿದುಕೊಂಡವು.

ಆದರೆ, ನ್ಯೂಝಿಲ್ಯಾಂಡ್‌ನ್ನು ಸೋಲಿಸಲು ಅಫ್ಘಾನಿಸ್ತಾನಕ್ಕೆ ಸಾಧ್ಯವಾಗಬಹುದಾದರೆ ಅದು ಭಾರತವನ್ನೂ ಸೋಲಿಸಬಹುದಾಗಿದೆ ಹಾಗೂ ತಾನೇ ಸೆಮಿಫೈನಲ್ ತಲುಪಬಹುದಾಗಿದೆ!

ನ್ಯೂಝಿಲ್ಯಾಂಡ್ ವಿರುದ್ಧದ ಸೋಲು ಭಾರತವನ್ನು ಲೀಗ್ ಹಂತದ ನಿರ್ಗಮನದತ್ತ ದೂಡಿದೆ.

ಪಾಕಿಸ್ತಾನ ಈಗಾಗಲೇ ಬಲಿಷ್ಠವೆಂದು ಪರಿಗಣಿಸಲ್ಪಟ್ಟಿರುವ ತಂಡಗಳನ್ನು ಸೋಲಿಸಿದೆ ಹಾಗೂ ಇನ್ನುಳಿದ ಎರಡು ದುರ್ಬಲವೆಂದು ಪರಿಗಣಿಸಲ್ಪಟ್ಟಿರುವ ತಂಡಗಳ (ನಮೀಬಿಯ, ಸ್ಕಾಟ್ಲೆಂಡ್) ವಿರುದ್ಧ ಸುಲಭ ಜಯದ ನಿರೀಕ್ಷೆಯಲ್ಲಿದೆ. ಸೂಪರ್ 12 ಹಂತದ ಆರು ತಂಡಗಳ ಗುಂಪು 2ರಲ್ಲಿ ಭಾರತ ಈಗ ಐದನೇ ಸ್ಥಾನದಲ್ಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X