Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸ ಪಕ್ಷದ ಹೆಸರು ಘೋಷಿಸಿದ ಅಮರಿಂದರ್...

ಹೊಸ ಪಕ್ಷದ ಹೆಸರು ಘೋಷಿಸಿದ ಅಮರಿಂದರ್ ಸಿಂಗ್

ವಾರ್ತಾಭಾರತಿವಾರ್ತಾಭಾರತಿ2 Nov 2021 12:48 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಹೊಸ ಪಕ್ಷದ ಹೆಸರು ಘೋಷಿಸಿದ ಅಮರಿಂದರ್ ಸಿಂಗ್

ಹೊಸದಿಲ್ಲಿ,ನ.2: ಪಂಜಾಬಿನ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್(78) ಅವರು ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಸಿಂಗ್ ಪತ್ರದಲ್ಲಿ ಪಕ್ಷ ಮತ್ತು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ,ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ಕಾಂಗ್ರೆಸ್ ನಾಯಕರ ವಿರುದ್ಧ ಸರಣಿ ಆರೋಪಗಳನ್ನು ಹೊರಿಸಿದ್ದಾರೆ.

ತನ್ನ ಏಳು ಪುಟಗಳ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿರುವ ಅವರು ತನ್ನ ಹೊಸ ಪಕ್ಷವನ್ನು ‘ಪಂಜಾಬ ಲೋಕ ಕಾಂಗ್ರೆಸ್’ಎಂದು ಹೆಸರಿಸಲಾಗುವುದು ಎಂದು ಪ್ರಕಟಿಸಿದ್ದಾರೆ.

ರಾಹುಲ್ ಮತ್ತು ಪ್ರಿಯಾಂಕಾ ‘ಅಸ್ಥಿರ ವ್ಯಕ್ತಿ’ ಮತ್ತು ‘ಪಾಕಿಸ್ತಾನದ ಹಿಂಬಾಲಕ ’ರಾಗಿರುವ ನವಜೋತ ಸಿಂಗ್ ಸಿಧು ಅವರನ್ನು ನಿಯಂತ್ರಿಸುವ ಬದಲು ಅವರನ್ನು ಬೆಂಬಲಿಸಿದ್ದರು ಎಂದು ದಶಕಗಳಿಂದಲೂ ಕಾಂಗ್ರೆಸ್‌ನೊಂದಿಗೆ ಗುರುತಿಸಿಕೊಂಡಿದ್ದ ಸಿಂಗ್ ಹೇಳಿದ್ದಾರೆ.

ಪಕ್ಷದ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ಹರೀಶ ರಾವತ್ ಅವರ ಕುಮ್ಮಕ್ಕು ಹೊಂದಿದ್ದ ಈ ವ್ಯಕ್ತಿಯ ಕುತಂತ್ರಗಳ ಬಗ್ಗೆ ನೀವು ಕುರುಡಾಗಿದ್ದೀರಿ ಎಂದು ಸಿಂಗ್ ಸೋನಿಯಾರನ್ನು ದೂಷಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಉಲ್ಲೇಖಿಸಿರುವ ಸಿಂಗ್,ತನ್ನನ್ನು ತೃಣೀಕರಿಸುವ ಮತ್ತು ಅವಹೇಳನಗೊಳಿಸುವ ಉದ್ದೇಶ ತನಗೆ ಅರ್ಥವಾಗಿತ್ತು. ಮರುದಿನವೇ ಸೋನಿಯಾ ತನಗೆ ಕರೆ ಮಾಡಿ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು ಎಂದು ಬರೆದಿದ್ದಾರೆ.

‘1975 ಜೂನ್‌ನಲ್ಲಿ ಹೇರಲಾಗಿದ್ದ ತುರ್ತು ಸ್ಥಿತಿಯಂತಹ ಸರ್ಕಸ್ ಮಾಡದಿದ್ದರೆ ನಾನು ಶಾಸಕರನ್ನು ಯಾವುದಾದರೂ ರೆಸಾರ್ಟ್‌ಗೆ ಸಾಗಿಸುತ್ತೇನೆ ಎಂದು ನೀವು ಬಹುಶಃ ಭಾವಿಸಿದ್ದೀರಿ. ನನ್ನ ಸಾರ್ವಜನಿಕ ಬದುಕಿನ 52 ವರ್ಷಗಳ ಕಾಲ ನನ್ನನ್ನು,ಅದೂ ವೈಯಕ್ತಿಕ ಮಟ್ಟದಲ್ಲಿ ಚೆನ್ನಾಗಿ ಅರಿತಿದ್ದ ನೀವು ಎಂದೂ ನನ್ನನ್ನಾಗಲೀ ನನ್ನ ವ್ಯಕ್ತಿತ್ವವನ್ನಾಗಲೀ ಅರ್ಥ ಮಾಡಿಕೊಂಡಿರಲಿಲ್ಲ. ನಾನು ವರ್ಷಗಳಿಂದಲೂ ಅಧಿಕಾರದಲ್ಲಿದ್ದೇನೆ ಮತ್ತು ನನಗೆ ವಿಶ್ರಾಂತಿ ನೀಡಬೇಕೆಂದು ನೀವು ಯೋಚಿಸಿದ್ದಿರಿ’ ಎಂದು ಸಿಂಗ್ ಸೋನಿಯಾರನ್ನುದ್ದೇಶಿಸಿ ಹೇಳಿದ್ದಾರೆ.

ರಾಜೀವ ಗಾಂಧಿಯವರನ್ನು ಉಲ್ಲೇಖಿಸಿರುವ ಅವರು, ನಿಮ್ಮ ಮತ್ತು 67 ವರ್ಷಗಳ ಹಿಂದೆ 1954ರಿಂದ ಶಾಲಾದಿನಗಳಿಂದಲೂ ನಾನು ಮತ್ತು ರಾಜೀವ ಜೊತೆಯಾಗಿಯೇ ಇದ್ದ ಹಿನ್ನೆಲೆಯಲ್ಲಿ ನನ್ನ ಸ್ವಂತ ಮಕ್ಕಳಂತೆ ಈಗಲೂ ನಾನು ಪ್ರೀತಿಸುವ ನಿಮ್ಮ ಮಕ್ಕಳ ವರ್ತನೆ ನನಗೆ ಆಳವಾದ ನೋವನ್ನುಂಟು ಮಾಡಿದೆ. ಕಳೆದ ಕೆಲವು ತಿಂಗಳುಗಳಲ್ಲಿ ನನಗೆ ಆಗಿರುವ ಅವಮಾನದ ಸ್ಥಿತಿ ಇತರ ಯಾವುದೇ ಹಿರಿಯ ಕಾಂಗ್ರೆಸ್ ನಾಯಕರಿಗೆ ಬರದಿರಲಿ ಎಂದು ನಾನು ಆಶಿಸುತ್ತೇನೆ ’ಎಂದು ಸಿಂಗ್ ಪತ್ರದಲ್ಲಿ ಬರೆದಿದ್ದಾರೆ.

I have today sent my resignation to @INCIndia President Ms Sonia Gandhi ji, listing my reasons for the resignation.

‘Punjab Lok Congress’ is the name of the new party. The registration is pending approval with the @ECISVEEP. The party symbol will be approved later. pic.twitter.com/Ha7f5HKouq

— Capt.Amarinder Singh (@capt_amarinder) November 2, 2021
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X