ಕಾಪು ಪತ್ರಕರ್ತರ ಸಂಘದಲ್ಲಿ ದೀಪಾವಳಿ ಆಚರಣೆ
![ಕಾಪು ಪತ್ರಕರ್ತರ ಸಂಘದಲ್ಲಿ ದೀಪಾವಳಿ ಆಚರಣೆ ಕಾಪು ಪತ್ರಕರ್ತರ ಸಂಘದಲ್ಲಿ ದೀಪಾವಳಿ ಆಚರಣೆ](https://www.varthabharati.in/sites/default/files/images/articles/2021/11/3/312550-1635948506.jpg)
ಕಾಪು : ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಕಾಪು ಸಂಘದ ಕಚೇರಿಯಲ್ಲಿ ಮಂಗಳವಾರ ಸಂಜೆ ದೀಪಾವಳಿ ಆಚರಣೆ ಕಾರ್ಯಕ್ರಮ ನೆರವೇರಿತು.
ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯಕುಮಾರ್ ಸೊರಕೆ ಉದ್ಘಾಟಿಸಿ, ಕಾಪು ಪತ್ರಕರ್ತರ ಸಂಘದಲ್ಲಿ ಹಬ್ಬ ಆಚರಣೆ ಉತ್ತಮ ಬೆಳವಣಿಗೆಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಲ್ಕನೇ ಅಂಗವಾಗಿ ಪತ್ರಿಕಾ ರಂಗಕ್ಕೆ ಅತಿ ಹೆಚ್ಚಿನ ಒತ್ತಡ ಇದೆ. ವಸ್ತು ನಿಷ್ಠೆ ಶ್ರದ್ಧೆಯನ್ನು ಜನರಿಗೆ ತಲುಪಿಸುವಲ್ಲಿ ಪತ್ರಕರ್ತರು ಹೆಚ್ಚಿನ ಒತ್ತು ನೀಡಬೇಕೆಂದರು.
ಇದೇ ಸಂದರ್ಭ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಫಾರೂಕ್ ಅಹಮದ್ ಮತ್ತು ಗುರುಚರಣ್ ರವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಜ್ಯೋತಿಷ್ಯ ವಿದ್ವಾನ್ ಪ್ರಕಾಶ್ ಅಮ್ಮಣ್ಣಾಯ, ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಬಾಲಾಜಿ, ದೀಪಕ್ ಕುಮಾರ್ ಎರ್ಮಾಳ್, ಕೆ. ಲೀಲಾಧರ್ ಶೆಟ್ಟಿ, ದಿವಾಕರ್ ಡಿ ಶೆಟ್ಟಿ, ದಿವಾಕರ ಬಿ ಶೆಟ್ಟಿ ಫಾರೂಕ್ ಅಹಮ್ಮದ್, ಗುರುಚರಣ್ ಪೊಲಿಪು, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್, ಪುರಸಭಾಧಿಕಾರಿ ವೆಂಕಟೇಶ್ ನಾವಡ, ಕಾಪು ಪತ್ರಕರ್ತರ ಸಂಘದ ಕಾಯಾದರ್ಶಿ ಶಫಿ ಉಚ್ಚಿಲ ಮತ್ತಿತರರು ಉಪಸ್ಥಿತರಿದ್ದರು.
ಕಾಪು ಪತ್ರಕರ್ತರ ಸಂಘದ ಅಧ್ಯಕ್ಷ ರಾಕೇಶ್ ಕುಂಜೂರು ಸ್ವಾಗತಿಸಿದರು. ಪುಂಡಲೀಕ ಮರಾಠೆ ನಿರೂಪಿಸಿದರು. ಹರೀಶ್ ಹೆಜಮಾಡಿ ವಂದಿಸಿದರು.