ಅಕ್ರಮ ದಾಸ್ತಾನು ಆರೋಪ : ಅನ್ನಭಾಗ್ಯದ ಅಕ್ಕಿ ವಶ
ಬೈಂದೂರು, ನ.3: ಉಪ್ಪುಂದ ಗ್ರಾಮದ ಫಿಶರಿಶ್ ಕಾಲನಿಯಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಲಾದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಧಿಕಾರಿಗಳ ತಂಡ ನ.2ರಂದು ಬೆಳಗ್ಗೆ ವಶಪಡಿಸಿಕೊಂಡಿದೆ.
ಖಚಿತ ಮಾಹಿತಿಯಂತೆ ಬೈಂದೂರು ಆಹಾರ ನಿರೀಕ್ಷಕ ವಿನಯ ಕುಮಾರ್ ಪೊಲೀಸರೊಂದಿಗೆ ದಾಳಿ ನಡೆಸಿದಾಗ ಕಾರಿನಲ್ಲಿ ಅನ್ನಭಾಗ್ಯದ ಅಕ್ಕಿ ಚೀಲವನ್ನು ಲೋಡ್ ಮಾಡಿರುವುದು ಕಂಡುಬಂದಿದೆ. ಕಾರಿನಲ್ಲಿ 31 ಪ್ಲಾಸ್ಟಿಕ್ ಚೀಲಗಳಲ್ಲಿದ್ದ ಒಟ್ಟು 1000 ಕಿ.ಲೋ ಅಕ್ಕಿ, ತೂಕದ ಯಂತ್ರ ಹಾಗೂ ಕಾರು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story