Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿಪುರಾ ಹಿಂಸಾಚಾರ: ಸತ್ಯಶೋಧನಾ ತಂಡದ...

ತ್ರಿಪುರಾ ಹಿಂಸಾಚಾರ: ಸತ್ಯಶೋಧನಾ ತಂಡದ ಇಬ್ಬರ ವಿರುದ್ಧ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯಿದೆ ಹೇರಿದ ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ4 Nov 2021 8:27 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತ್ರಿಪುರಾ ಹಿಂಸಾಚಾರ: ಸತ್ಯಶೋಧನಾ ತಂಡದ ಇಬ್ಬರ ವಿರುದ್ಧ ಅಕ್ರಮ ಚಟುವಟಿಕೆಗಳ ನಿಯಂತ್ರಣ ಕಾಯಿದೆ ಹೇರಿದ ಪೊಲೀಸರು

ಹೊಸದಿಲ್ಲಿ,ನ.4: ಕಳೆದ ತಿಂಗಳು ರಾಜ್ಯದಲ್ಲಿ ನಡೆದಿದ್ದ ಕೋಮು ಹಿಂಸಾಚಾರದ ಬಗ್ಗೆ ತನಿಖೆಗಾಗಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದ ಸತ್ಯಶೋಧನಾ ತಂಡದ ಭಾಗವಾಗಿದ್ದ ಇಬ್ಬರು ವಕೀಲರಿಗೆ ತ್ರಿಪುರಾ ಪೊಲೀಸರು ಬುಧವಾರ ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆ (ಯುಎಪಿಎ)ಯಡಿ ನೋಟಿಸ್‌ಗಳನ್ನು ಕಳುಹಿಸಿದ್ದಾರೆ.

ಹಿಂಸಾಚಾರದ ಸಂದರ್ಭದಲ್ಲಿ ಕನಿಷ್ಠ 12 ಮಸೀದಿಗಳು,ಮುಸ್ಲಿಮರಿಗೆ ಸೇರಿದ ಒಂಭತ್ತು ಅಂಗಡಿಗಳು ಮತ್ತು ಮೂರು ಮನೆಗಳನ್ನು ಗುರಿಯಾಗಿಸಿಕೊಳ್ಳಲಾಗಿತ್ತು ಎಂದು ಮಂಗಳವಾರ ಬಿಡುಗಡೆಗೊಳಿಸಿದ್ದ ವರದಿಯಲ್ಲಿ ಪಿಯುಸಿಎಲ್ ಪರ ದಿಲ್ಲಿಯ ವಕೀಲ ಮುಕೇಶ ಮತ್ತು ಮಾನವ ಹಕ್ಕುಗಳ ರಾಷ್ಟ್ರೀಯ ಒಕ್ಕೂಟದ ವಕೀಲ ಅನ್ಸಾರ್ ಇಂದೋರಿ ಹೇಳಿದ್ದರು.

ಪೊಲೀಸರು ಈ ವಕೀಲರ ವಿರುದ್ಧ ಐಪಿಸಿಯ ವಿವಿಧ ಕಲಮ್‌ಗಳಡಿ ಆರೋಪಗಳನ್ನು ಹೊರಿಸಿದ್ದಾರೆ.

ಕಳೆದ ತಿಂಗಳು ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ದಾಳಿಗಳ ಬಳಿಕ ವಿಹಿಂಪ ಅ.26ರಂದು ತ್ರಿಪುರಾದಲ್ಲಿ ಪ್ರತಿಭಟನಾ ರ್ಯಾಲಿಯನ್ನು ನಡೆಸಿತ್ತು. ಈ ಸಂದರ್ಭ ಹಿಂಸಾಚಾರ ಮತ್ತು ಮಸೀದಿಗಳು,ಮುಸ್ಲಿಮರ ಅಂಗಡಿಗಳು ಮತ್ತು ಮನೆಗಳ ಮೇಲೆ ದಾಳಿಗಳು ನಡೆದಿದ್ದವು. ಆದರೆ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸ್ಥಿತಿ ಅತ್ಯಂತ ಸಹಜವಾಗಿದೆ ಎಂದು ಪದೇ ಪದೇ ಹೇಳಿಕೊಂಡಿದ್ದ ಪೊಲೀಸರು,ಯಾವುದೇ ಮಸೀದಿಗೆ ಬೆಂಕಿ ಹಚ್ಚಲಾಗಿಲ್ಲ ಎಂದು ಪ್ರತಿಪಾದಿಸಿದ್ದರು.

ಆಡಳಿತ,ತೀವ್ರವಾದಿ ಸಂಘಟನೆಗಳ ಹೊಣೆಗೇಡಿತನ ಮತ್ತು ರಾಜಕಾರಣಿಗಳ ಪಟ್ಟಭದ್ರ ಹಿತಾಸಕ್ತಿಗಳು ಹಿಂಸೆಗೆ ಕಾರಣವಾಗಿದ್ದವು ಎಂದು ಸತ್ಯಶೋಧನಾ ಸಮಿತಿಯ ವರದಿಯು ತಿಳಿಸಿದೆ. ಸರ್ವೋಚ್ಚ ನ್ಯಾಯಾಲಯದ ವಕೀಲರಾದ ಎಹ್ತೆಶಾಮ್ ಹಾಶ್ಮಿ ಮತ್ತು ಅಮಿತ್ ಶ್ರೀವಾಸ್ತವ ಅವರು ವರದಿಯ ಸಹಲೇಖಕರಾಗಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿಕೊಂಡಿರುವ ಕಪೋಲಕಲ್ಪಿತ ಮತ್ತು ಸುಳ್ಳು ಹೇಳಿಕೆಗಳು/ಟೀಕೆಗಳನ್ನು ತಕ್ಷಣವೇ ಅಳಿಸುವಂತೆ ಮುಕೇಶ ಮತ್ತು ಇಂದೋರಿಯವರಿಗೆ ಕಳುಹಿಸಿರುವ ನೋಟಿಸ್‌ನಲ್ಲಿ ಸೂಚಿಸಲಾಗಿದೆ. ನ.10ರಂದು ಪಶ್ಚಿಮ ಅಗರ್ತಲಾ ಪೊಲೀಸ್ ಠಾಣೆಯಲ್ಲಿ ಹಾಜರಾಗುವಂತೆಯೂ ಅವರಿಗೆ ನಿರ್ದೇಶ ನೀಡಲಾಗಿದೆ.

‘ನಾವು ನೋಡಿದ್ದನ್ನು ಮಾತ್ರ ನಾನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿಕೊಂಡಿದ್ದೆ. ವರದಿಯ ಬಿಡುಗಡೆ ಸಂದರ್ಭ ದಿಲ್ಲಿಯಲ್ಲಿ ಸುದ್ದಿಗೋಷ್ಠಿಯನ್ನು ಹಮ್ಮಿಕೊಂಡಿದ್ದೆವು ಮತ್ತು ಬಳಿಕ ಕಾರ್ಯಕ್ರಮದ ಫೇಸ್‌ಬುಕ್ ಲೈವ್ ಮಾಡಿದ್ದೆವು. ಈ ಫೇಸ್‌ಬುಕ್ ಲೈವ್ ಬಗ್ಗೆ ಅವರಿಗೆ ಸಮಸ್ಯೆಯಿದೆ ಎಂದು ನಾನು ಭಾವಿಸಿದ್ದೇನೆ’ಎಂದು ಮುಕೇಶ ಸುದ್ದಿಸಂಸ್ಥೆಗೆ ತಿಳಿಸಿದರು.

‘ನಮ್ಮ ವಿರುದ್ಧ ಇಂತಹ ಆರೋಪಗಳನ್ನು ಹೊರಿಸುವ ಮೂಲಕ ರಾಜ್ಯ ಸರಕಾರವು ತನ್ನ ಅದಕ್ಷತೆಯನ್ನು ಮುಚ್ಚಿಟ್ಟುಕೊಳ್ಳಲು ಪ್ರಯತ್ನಿಸುತ್ತಿದೆ. ಇದು ಮುಖ್ಯವಾಹಿನಿಯೊಂದಿಗೆ ಸತ್ಯವನ್ನು ಹಂಚಿಕೊಳ್ಳುವುದನ್ನು ತಡೆಯುವ ಪ್ರಯತ್ನವಾಗಿದೆ. ಅದಕ್ಕೂ ಮಿಗಿಲಾಗಿ ನಮ್ಮ ಧ್ವನಿಗಳನ್ನು ಅಡಗಿಸುವ ಪ್ರಯತ್ನವಾಗಿದೆ ’ಎಂದು ಇಂದೋರಿ ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X