Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2020ರಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರತಿ...

2020ರಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರತಿ ಹತ್ತು ಜನರಲ್ಲಿ ಆರು ಜನರ ವಾರ್ಷಿಕ ಆದಾಯ ಒಂದು ಲ.ರೂ.ಗೂ ಕಡಿಮೆಯಿತ್ತು

ಎನ್‌ಸಿಆರ್‌ಬಿ ಅಂಕಿಅಂಶಗಳಲ್ಲಿ ಉಲ್ಲೇಖ

ವಾರ್ತಾಭಾರತಿವಾರ್ತಾಭಾರತಿ4 Nov 2021 8:18 PM IST
share
2020ರಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರತಿ ಹತ್ತು ಜನರಲ್ಲಿ ಆರು ಜನರ ವಾರ್ಷಿಕ ಆದಾಯ ಒಂದು ಲ.ರೂ.ಗೂ ಕಡಿಮೆಯಿತ್ತು

ಹೊಸದಿಲ್ಲಿ, ನ. 4: ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡವರ ಪೈಕಿ ಶೇ.63ರಷ್ಟು ಅಥವಾ ಪ್ರತಿ 10ರಲ್ಲಿ ಆರು ಜನರು ಒಂದು ಲ.ರೂ.ಗೂ ಕಡಿಮೆ ವಾರ್ಷಿಕ ಆದಾಯವನ್ನು ಹೊಂದಿದ್ದರು ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಘಟಕ (ಎನ್ ಸಿಆರ್ ಬಿ)ದ ಅಂಕಿಅಂಶಗಳು ತೋರಿಸಿವೆ.

ಕೋವಿಡ್ ಪಿಡುಗಿಗೆ ತುತ್ತಾಗಿದ್ದ 2020ರಲ್ಲಿ ದೇಶದಲ್ಲಿ ಒಟ್ಟು 1,53,052 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು,2019ಕ್ಕೆ ಹೋಲಿಸಿದರೆ ಶೇ.10ರಷ್ಟು ಏರಿಕೆಯಾಗಿದೆ. ಶೇ.32ರಷ್ಟು ಪ್ರಕರಣಗಳಲ್ಲಿ ಅಥವಾ 49,270 ಜನರು ಒಂದು ಲ.ರೂ. ಮತ್ತು ಐದು ಲ.ರೂ.ವಾರ್ಷಿಕ ಆದಾಯವನ್ನು ಹೊಂದಿದ್ದ ಗುಂಪಿಗೆ ಸೇರಿದ್ದರು.

ವೃತ್ತಿಗೆ ಸಂಬಂಧಿಸಿದಂತೆ ಹೇಳುವುದಾದರೆ ಆತ್ಮಹತ್ಯೆ ಮಾಡಿಕೊಂಡವರಲ್ಲಿ 37,666 (ಶೇ.24.6)ಜನರು ದಿನಗೂಲಿ ಕಾರ್ಮಿಕರಾಗಿದ್ದರು. 22,374 (ಶೇ.14.6)ಗೃಹಿಣಿಯರು ಆತ್ಮಹತ್ಯೆಗೆ ಶರಣಾಗಿದ್ದರು. ನಂತರದ ಸ್ಥಾನಗಳಲ್ಲಿ ಸ್ವೋದ್ಯೋಗಿಗಳು (ಶೇ.11.3) ಮತ್ತು ವೃತ್ತಿಪರರು/ವೇತನದಾರ ವರ್ಗದವರು (ಶೇ.9.7) ಇದ್ದಾರೆ.

ಕಳೆದ ವರ್ಷ ಆತ್ಮಹತ್ಯೆ ಮಾಡಿಕೊಂಡವರಲ್ಲಿ 10,677 (ಶೇ.7) ಜನರು ಕೃಷಿಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು. ಈ ಪೈಕಿ 5,579 ಕೃಷಿಕರು ಮತ್ತು 5,098 ಕೃಷಿ ಕಾರ್ಮಿಕರು ಸೇರಿದ್ದಾರೆ.

ಕೌಟುಂಬಿಕ ಸಮಸ್ಯೆಗಳು (ಶೇ.33.6) ಮತ್ತು ಅನಾರೋಗ್ಯ (ಶೇ.18) ಆತ್ಮಹತ್ಯೆಗೆ ಪ್ರಮುಖ ಕಾರಣಗಳಾಗಿದ್ದವು. ಮಾದಕ ದ್ರವ್ಯ ವ್ಯಸನ (ಶೇ.6), ವಿವಾಹ ಸಂಬಂಧಿ ಸಮಸ್ಯೆಗಳು (ಶೇ.5),ಪ್ರೇಮ ವ್ಯವಹಾರಗಳು (ಶೇ.4.4),ದಿವಾಳಿತನ ಅಥವಾ ಸಾಲ (ಶೇ.3.4),ನಿರುದ್ಯೋಗ (ಶೇ.2.3),ಪರೀಕ್ಷೆಯಲ್ಲಿ ವೈಫಲ್ಯ (ಶೇ.1.4),ವೃತ್ತಿ ಸಮಸ್ಯೆ (ಶೇ.1.2) ಮತ್ತು ಬಡತನ (ಶೇ.1.2) ಇವು ಆತ್ಮಹತ್ಯೆಗೆ ಇತರ ಕಾರಣಗಳಾಗಿವೆ ಎಂದು ಎನ್ಸಿಆರ್ಬಿ ತನ್ನ ವರದಿಯಲ್ಲಿ ಹೇಳಿದೆ.

ಅತ್ಯಧಿಕ ಆತ್ಮಹತ್ಯೆಗಳು ಮಹಾರಾಷ್ಟ್ರ (19,909)ದಲ್ಲಿ ಸಂಭವಿಸಿದ್ದರೆ,ನಂತರದ ಸ್ಥಾನಗಳಲ್ಲಿ ತಮಿಳುನಾಡು (16,883), ಮಧ್ಯಪ್ರದೇಶ (14,578),ಪ.ಬಂಗಾಳ (13,103) ಮತ್ತು ಕರ್ನಾಟಕ(12,259) ಇವೆ. ದೇಶದಲ್ಲಿಯ ಒಟ್ಟು ಆತ್ಮಹತ್ಯೆಗಳ ಪೈಕಿ ಶೇ.50ರಷ್ಟು ಈ ಐದು ರಾಜ್ಯಗಳಲ್ಲಿಯೇ ಸಂಭವಿಸಿವೆ.

ಕಳೆದ ವರ್ಷ ದೇಶದಲ್ಲಿ ಆತ್ಮಹತ್ಯೆ ದರ (ಪ್ರತಿ ಒಂದು ಲಕ್ಷ ಜನಸಂಖ್ಯೆಗೆ ಆತ್ಮಹತ್ಯೆಗಳ ಸಂಖ್ಯೆ) 11.3 ಆಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X