Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೊಡ್ಡ ರಾಜ್ಯಗಳ ಪೈಕಿ ಉ.ಪ್ರ.ದಲ್ಲಿ...

ದೊಡ್ಡ ರಾಜ್ಯಗಳ ಪೈಕಿ ಉ.ಪ್ರ.ದಲ್ಲಿ ಅತ್ಯಂತ ಕಳಪೆ ಆಡಳಿತ, ಉತ್ತಮ ಆಡಳಿತದಲ್ಲಿ ಕೇರಳ ನಂ.1

ಬೆಂಗಳೂರು ಥಿಂಕ್ ಟ್ಯಾಂಕ್ ವರದಿ

ವಾರ್ತಾಭಾರತಿವಾರ್ತಾಭಾರತಿ4 Nov 2021 10:06 PM IST
share
ದೊಡ್ಡ ರಾಜ್ಯಗಳ ಪೈಕಿ ಉ.ಪ್ರ.ದಲ್ಲಿ ಅತ್ಯಂತ ಕಳಪೆ ಆಡಳಿತ, ಉತ್ತಮ ಆಡಳಿತದಲ್ಲಿ ಕೇರಳ ನಂ.1

ಹೊಸದಿಲ್ಲಿ, ನ.4: ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಆರು ತಿಂಗಳಿಗೂ ಕಡಿಮೆ ಸಮಯ ಬಾಕಿಯಿರುವಂತೆಯೇ ಆದಿತ್ಯನಾಥ ಸರಕಾರಕ್ಕೆ ಇರಿಸುಮುರಿಸು ಉಂಟು ಮಾಡುವ ಸಮೀಕ್ಷೆಯೊಂದು ಪ್ರಕಟವಾಗಿದೆ. ಅತ್ಯಂತ ಕಳಪೆ ಆಡಳಿತವಿರುವ ದೊಡ್ಡ ರಾಜ್ಯವೆಂಬ ಅಪಖ್ಯಾತಿ ಉತ್ತರಪ್ರದೇಶಕ್ಕೆ ದೊರೆತಿದೆ. 

ರಾಜ್ಯಗಳ ಆಡಳಿತವನ್ನು ಮೌಲ್ಯಮಾಪನ ಮಾಡುವ ಬೆಂಗಳೂರು ಮೂಲದ ‘ಥಿಂಕ್ ಟ್ಯಾಂಕ್ ಪಬ್ಲಿಕ್ ಎಫೇರ್ಸ್ ಸೆಂಟರ್’ ಸಿದ್ಧಪಡಿಸಿರುವ ಸೂಚ್ಯಂಕದಲ್ಲಿ ಆಡಳಿತ ಗುಣಮಟ್ಟದಲ್ಲಿ ಉತ್ತರ ಪ್ರದೇಶವು ಕೊನೆಯ ರ‍್ಯಾಂಕ್ ಪಡೆದಿದ್ದು, 18ನೇ ಸ್ಥಾನದಲ್ಲಿದೆ.

ಬೆಳವಣಿಗೆ,ನೀತಿ ಹಾಗೂ ಸುಸ್ಥಿರತೆ ಈ ಮೂರು ವಿಸ್ತೃತವಾದ ಅಂಶಗಳನ್ನು ಆಧರಿಸಿ ರಾಜ್ಯಗಳಿಗೆ ಸಮಗ್ರ ಅಂಕಗಳನ್ನು ನೀಡಲಾಗಿದೆ. ಆಡಳಿತದ 43 ಸೂಚಕಗಳನ್ನು ಆಧರಿಸಿ ರ‍್ಯಾಂಕಿಂಗ್ ನೀಡಲಾಗುತ್ತಿದೆ.

ಕೇರಳವು ಮತ್ತೊಮ್ಮೆ ದೇಶದಲ್ಲೇ ಅತ್ಯುತ್ತಮ ಆಡಳಿತವಿರುವ ರಾಜ್ಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ನಂ.1 ರ‍್ಯಾಂಕ್ ಪಡೆದಿದೆ. ಐದು ವರ್ಷಗಳಿಂದ ಹಿಂದೆ ಪಿಎಸಿಯು ಈ ರ‍್ಯಾಂಕಿಂಗ್ ಅನ್ನು ಪ್ರಕಟಿಸಲು ಆರಂಭಿಸಿದಾಗಿನಿಂದ ಕೇರಳವು ಸತತವಾಗಿ ಪ್ರಥಮ ಸ್ಥಾನವನ್ನು ಉಳಿಸಿಕೊಳ್ಳುತ್ತಲೇ ಬಂದಿದೆ. ಈ ಪೈಕಿ ಕರ್ನಾಟಕ ನಾಲ್ಕನೇ ಸ್ಥಾನ ಪಡೆದಿದೆ ಎಂದು ವರದಿ ಉಲ್ಲೇಖಿಸಿದೆ.

2016ರಲ್ಲಿ ಪಿಎಸಿಯು ರ‍್ಯಾಂಕಿಂಗ್ ಪ್ರಥಮ ಆವೃತ್ತಿಯನ್ನು ಆರಂಭಿಸಿದಾಗ ಉತ್ತರಪ್ರದೇಶ 12ನೇ ಸ್ಥಾನದಲ್ಲಿತ್ತು. ಮಧ್ಯಪ್ರದೇಶ, ಅಸ್ಸಾಂ, ಒಡಿಶಾ, ಜಾರ್ಖಂಡ್ ಹಾಗೂ ಬಿಹಾರ ರಾಜ್ಯಗಳಿಗಿಂತ ಅದರ ರ‍್ಯಾಂಕಿಂಗ್ ಉತ್ತಮವಾಗಿತ್ತು. ಆದರೆ 2017ರಲ್ಲಿ ಆ ರಾಜ್ಯದ ರ‍್ಯಾಂಕಿಂಗ್ 16ನೇ ಸ್ಥಾನಕ್ಕೆ ಜಾರಿತ್ತು. 2019ರಲ್ಲಿ ಅದು 17 ಸ್ಥಾನಕ್ಕೆ ಕುಸಿಯಿತು ಮತ್ತು ಒಡಿಶಾಕ್ಕಿಂತ ಮಾತ್ರವೇ ಮುಂದಿತ್ತು. ಆದರೆ 2020ರಲ್ಲಿ 18 ನೇ ರ‍್ಯಾಂಕ್ ಗೆ ಕುಸಿಯುವ ಮೂಲಕ ಕಳಪೆ ನಿರ್ವಹಣೆ ಪ್ರದರ್ಶಿಸಿದೆ.

ಯೋಗಿ ಆದಿತ್ಯನಾಥ್ ಸರಕಾರದ ಆಳ್ವಿಕೆಯಲ್ಲಿ ಉತ್ತರಪ್ರದೇಶಲ್ಲಿ ಅಭಿವೃದ್ಧಿಯ ಪರ್ವ ಆರಂಭಗೊಂಡಿದೆಯೆಂದು ಬಿಜೆಪಿಯು ಬಿಂಬಿಸಲು ಯತ್ನಿಸುತ್ತಿರುವಂತೆಯೇ ಆ ರಾಜ್ಯವು ಆಡಳಿತ ರ್ಯಾಂಕಿಂಗ್ ಕಳಪೆ ಸ್ಥಾನದಲ್ಲಿರುವುದು ಕಮಲ ಪಕ್ಷಕ್ಕೆ ನುಂಗಲಾರದ ತುತ್ತಾಗಿದೆಯೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X