Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನರಿಂದ ಲೂಟಿ ಮಾಡಿದ ಹಣ ಕಾರ್ಪೊರೇಟ್...

ಜನರಿಂದ ಲೂಟಿ ಮಾಡಿದ ಹಣ ಕಾರ್ಪೊರೇಟ್ ಕಂಪೆನಿಗಳಿಗೆ: ಬಾಲಕೃಷ್ಣ ಶೆಟ್ಟಿ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Nov 2021 6:28 PM IST
share
ಜನರಿಂದ ಲೂಟಿ ಮಾಡಿದ ಹಣ ಕಾರ್ಪೊರೇಟ್ ಕಂಪೆನಿಗಳಿಗೆ: ಬಾಲಕೃಷ್ಣ ಶೆಟ್ಟಿ ಆರೋಪ

ಉಡುಪಿ, ನ.7: ಕೇಂದ್ರ ಸರಕಾರ ಜನರನ್ನು ಲೂಟಿ ಮಾಡುವ ಉದ್ದೇಶ ದಿಂದ ತೈಲ ಬೆಲೆ ಏರಿಕೆ ಮಾಡುತ್ತಿದ್ದು, ಹೀಗೆ ಜನರಿಂದ ಲೂಟಿ ಮಾಡಿರುವ ಹಣವನ್ನು ಕಾರ್ಪೊರೇಟ್ ಕಂಪೆನಿಗಳಿಗೆ ನೀಡುತ್ತಿವೆ. ಇದರಿಂದ ಅಂಬಾನಿ, ಅದಾನಿಯಂತಹ ಉದ್ಯಮಿಗಳ ಆಸ್ತಿಯು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ ಎಂದು ಸಿಪಿಐಎಂ ಉಡುಪಿ ಜಿಲ್ಲಾ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಆರೋಪಿಸಿದ್ದಾರೆ.

ಉಡುಪಿಯ ಹೊಟೇಲ್ ಸಾಯಿ ರೆಸಿಡೆನ್ಸಿ ಸಭಾಂಗಣದಲ್ಲಿ ರವಿವಾರ ನಡೆದ ಭಾರತ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ) ಉಡುಪಿ ತಾಲೂಕು ಸಮಿತಿಯ 23ನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಕೋವಿಡ್ ಲಸಿಕೆಗಾಗಿ ಕಳೆದ ಬಜೆಟ್‌ನಲ್ಲಿ 35 ಸಾವಿರ ಕೋಟಿ ರೂ. ಅನು ದಾನವನ್ನು ಮೀಸರಿಸಲಾಗಿತ್ತು. ಕೇಂದ್ರ ಸರಕಾರ 100 ಕೋಟಿ ಲಸಿಕೆ ವಿತರಣೆ ಮಾಡಿದೆ ಎಂದು ಹೇಳುತ್ತಿದೆ. ಆದರೆ ಇದರಲ್ಲಿ ರಾಜ್ಯಗಳ ಪಾಲು ಕೂಡ ಇದೆ ಹಲವಾರು ಮಂದಿ ಖಾಸಗಿಯಾಗಿ ಲಸಿಕೆ ಪಡೆದುಕೊಂಡಿದ್ದಾರೆ. ಉಚಿತ ಲಸಿಕೆ ವಿತರಣೆಗೂ ತೈಲ ಬೆಲೆ ಏರಿಕೊ ಯಾವುದೇ ಸಂಬಂಧವಿಲ್ಲ ಎಂದರು.

ಬಿಜೆಪಿ ಸರಕಾರ 2014ರಲ್ಲಿ ಅಧಿಕಾರಕ್ಕೆ ಬಂದ ಅನಂತರ ಕೇಂದ್ರ ಅಬಕಾರಿ ಸುಂಕವನ್ನು 30ರೂ. ಹೆಚ್ಚಳ ಮಾಡಿದೆ. ದೇಶದಲ್ಲಿ 7ಲಕ್ಷದ 73 ಸಾವಿರ ಸಣ್ಣ ಕೈಗಾರಿಕೆಗಳು ಹಾಗೂ ಸಂಸ್ಥೆಗಳು ಮುಚ್ಚುಗಡೆಯಾಗಿದ್ದು, ಇದರಿಂದ ನಿರು ದ್ಯೋಗ ಸಮಸ್ಯೆ ಸೃಷ್ಟಿಯಾಗಿದೆ. ಭಾರತದಲ್ಲಿ ಪ್ರಸ್ತುತ 100 ಮಂದಿಯಲ್ಲಿ 8 ಮಂದಿಗೆ ಉದ್ಯೋಗವಿಲ್ಲಂತಾಗಿದೆ ಎಂದು ಅವರು ದೂರಿದರು.

ಕೇರಳ ಸರಕಾರ ಭತ್ತದ ಬೆಂಬಲ ಬೆಲೆಯನ್ನು 2740ರೂ.ಗೆ ನಿಗದಿಪಡಿಸಿದೆ. ಇದನ್ನೇ ಮಾದರಿಯಾಗಿಟ್ಟುಕೊಂಡು ರಾಜ್ಯದ ರೈತರು 2500ರೂ. ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದಕ್ಕೆ ಕಾನೂನಾತ್ಮಕ ಬೆಂಬಲ ಸಿಗಬೇಕು. ಈ ಬಗ್ಗೆ ಸೂಕ್ತ ಕಾನೂನು ತಂದು ಪ್ರತೀ ಗ್ರಾಮದಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಬೇಕು. ರೈತರ ಈ ಹೋರಾಟಕ್ಕೆ ಸಿಪಿಐಎಂ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಸಿಪಿಐಎಂ ಹಿರಿಯ ಮುಖಂಡ ಪಿ.ವಿಶ್ವನಾಥ ರೈ ವಹಿಸಿದ್ದರು. ಸಿಪಿಐಎಂ ರಾಜ್ಯ ಉಪಾಧ್ಯಕ್ಷ ಕೆ.ಶಂಕರ್, ಜಿಲ್ಲಾ ಸಮಿತಿ ಸದಸ್ಯ ವೆಂಕಟೇಶ ಕೋಣಿ ಉಪಸ್ಥಿತರಿದ್ದರು. ಪಕ್ಷದ ಸದಸ್ಯ ವಾದಿರಾಜ ಬುದ್ಯ ಧ್ವಜ ಅನಾವರಣ ಗೊಳಿಸಿದರು.

ಸಮ್ಮೇಳನದಲ್ಲಿ ಬೆಲೆ ಏರಿಕೆ ವಿರುದ್ಧ, ಕಾರ್ಪೊರೇಟ್ ಕಂಪೆನಿ ಪರವಾದ ಕಾಯಿದೆ ವಾಪಾಸ್ಸು ಪಡೆಯುವಂತೆ, ವಸತಿ ರಹಿತರಾಗಿ ನಿವೇಶನ ನೀಡುವಂತೆ, ಉಡುಪಿಯಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ, ರೈತರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಒಟ್ಟು ಏಳು ನಿರ್ಣಯಗಳನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಸಿಪಿಎಂ ಉಡುಪಿ ತಾಲೂಕು ಕಾರ್ಯದರ್ಶಿ ಶಶಿಧರ ಗೊಲ್ಲ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಲೂಕು ಸವಿುತಿ ಸದಸ್ಯ ಕವಿರಾಜ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X