Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ.19ರಿಂದ `ಜನಸ್ವರಾಜ್ ಸಮಾವೇಶ': ಪ್ರಧಾನ...

ನ.19ರಿಂದ `ಜನಸ್ವರಾಜ್ ಸಮಾವೇಶ': ಪ್ರಧಾನ ಕಾರ್ಯದರ್ಶಿ ರವಿಕುಮಾರ್

ವಾರ್ತಾಭಾರತಿವಾರ್ತಾಭಾರತಿ7 Nov 2021 9:14 PM IST
share
ನ.19ರಿಂದ `ಜನಸ್ವರಾಜ್ ಸಮಾವೇಶ: ಪ್ರಧಾನ ಕಾರ್ಯದರ್ಶಿ ರವಿಕುಮಾರ್

ಬೆಂಗಳೂರು, ನ. 7: `ರಾಜ್ಯದ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ನ.19ರಿಂದ ಪ್ರತಿ ಜಿಲ್ಲೆಗೆ ಒಂದರಂತೆ `ಜನಸ್ವರಾಜ್ ಸಮಾವೇಶ' ನಡೆಸಲಾಗುವುದು' ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್ ತಿಳಿಸಿದ್ದಾರೆ.

ರವಿವಾರ ಇಲ್ಲಿನ ಮಲ್ಲೇಶ್ವರದ `ಭಾವುರಾವ್ ದೇಶಪಾಂಡೆ ಭವನ'ದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ರಾಜ್ಯದಲ್ಲಿ ವಿಧಾನ ಪರಿಷತ್ 25 ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಬಹುತೇಕ ಡಿಸೆಂಬರ್ ತಿಂಗಳಿನಲ್ಲಿ ನಡೆಯುವ ಈ ಚುನಾವಣೆಗೆ ಪೂರ್ವತಯಾರಿ ನಡೆಯಲಿದೆ. ಗ್ರಾಮ ಪಂಚಾಯತ್ ಸದಸ್ಯರು, ಪರಿಷತ್ ಸದಸ್ಯರು, ಶಾಸಕರು ಮತ್ತು ಸಂಸದರ ಸಮಾವೇಶವನ್ನು ನಡೆಸಲು ಪಕ್ಷ ಉದ್ದೇಶಿಸಿದೆ ಎಂದು ಹೇಳಿದರು.

`ಈ ಚುನಾವಣೆಯಲ್ಲಿ ಅತಿ ಹೆಚ್ಚು ಸೀಟುಗಳನ್ನು ಬಿಜೆಪಿ ಗೆಲ್ಲಲು ನ.19ರಿಂದ 23ರ ವರೆಗೆ ಈ ಸಮಾವೇಶಗಳನ್ನು ಆಯೋಜಿಸಲಾಗುವುದು. ಒಂದು ದಿನಕ್ಕೆ ಎರಡು ತಂಡ ಸಮಾವೇಶದಲ್ಲಿ ಭಾಗವಹಿಸಲಿದೆ. ಒಂದನೇ ತಂಡ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಇರುತ್ತದೆ. ಎರಡನೆ ತಂಡ ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ, ಮೂರನೆ ತಂಡವು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಮತ್ತು ನಾಲ್ಕನೇ ತಂಡವು ಮಾಜಿ ಸಿಎಂ ಜಗದೀಶ ಶೆಟ್ಟರ್ ನೇತೃತ್ವದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ವಿವರ ನೀಡಿದರು.

ಮೊದಲನೇ ತಂಡವು ನ.19, 20, 21ರಂದು ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ಬೀದರ್ ಜಿಲ್ಲೆಗಳ ಪ್ರವಾಸ ಮಾಡಲಿದೆ. ಇದರ ಸಂಚಾಲಕರಾಗಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಹ ಸಂಚಾಲಕರಾಗಿ ಕೇಶವಪ್ರಸಾದ್ ಇರುತ್ತಾರೆ. ಎರಡನೇ ತಂಡವು ನನ್ನ (ರವಿಕುಮಾರ್) ಸಂಚಾಲಕತ್ವ ಹೊಂದಿದ್ದು, ರಾಜ್ಯ ಕಾರ್ಯದರ್ಶಿ ಕೆ.ಎಸ್.ನವೀನ್ ಸಹ ಸಂಚಾಲಕತ್ವದಲ್ಲಿ 4 ದಿನಗಳ ಕಾಲ ಉತ್ತರ ಕನ್ನಡ, ಹಾವೇರಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ ಮತ್ತು ಚಿಕ್ಕೋಡಿ, ಬೆಳಗಾವಿಗಳಲ್ಲಿ ಸಂಚರಿಸಲಿದೆ. ಉತ್ತರ ಕನ್ನಡದಿಂದ ಈ ಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದರು.

ಮೂರನೇ ತಂಡವು ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ ಸಂಚಾಲಕತ್ವ, ರಾಜ್ಯ ಕಾರ್ಯದರ್ಶಿ ವಿನಯ ಬಿದರೆ ಸಹ ಸಂಚಾಲಕತ್ವ ಹೊಂದಿದೆ. ಈ ತಂಡವು ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಮಂಗಳೂರು, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ಹಾಸನ ಪ್ರವಾಸ ಮಾಡಲಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಸಂಚಾಲಕರಾಗಿ, ಮುನಿರಾಜು ಗೌಡ ಸಂಚಾಲಕರಾಗಿರುವ ನಾಲ್ಕನೆ ತಂಡವು ದಾವಣಗೆರೆ, ಚಿತ್ರದುರ್ಗ, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಸೇರಿ 7 ಜಿಲ್ಲೆಗಳನ್ನು ಒಳಗೊಂಡಿದೆ ಎಂದು ಮಾಹಿತಿ ನೀಡಿದರು.

ಹಿಂದಿನ ಬಾರಿ 7 ಸೀಟುಗಳನ್ನು ನಾವು ಗೆದ್ದಿದ್ದೆವು. ಈ ಬಾರಿ ಅತಿಹೆಚ್ಚು ಸೀಟು ಗೆಲ್ಲಲು ಪಕ್ಷ ಮುಂದಾಗಿದೆ. ಇದಕ್ಕಾಗಿ ಮುಂಚಿತವಾಗಿ ಸಮಾವೇಶ ನಡೆಸಲಾಗುತ್ತಿದೆ. ಮೊದಲನೇ ಸಮಾವೇಶದ ಆರಂಭದಲ್ಲಿ 4 ತಂಡಗಳು ಒಬ್ಬ ಗ್ರಾಮ ಪಂಚಾಯತ್ ಅಧ್ಯಕ್ಷನ ಮನೆಯಲ್ಲಿ ಉಪಾಹಾರ ಮಾಡಿ ಅಲ್ಲಿಂದ ಸಮಾವೇಶಕ್ಕೆ ಹೋಗುವ ಯೋಚನೆ ಮಾಡಿದ್ದೇವೆ. ಗ್ರಾಮ ಪಂಚಾಯತ್ ಸದಸ್ಯರಿಗೆ ಹೆಚ್ಚು ಮಹತ್ವ ಕೊಡಲಾಗುತ್ತಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚಿಸಲಾಗುವುದು. ಅಭ್ಯರ್ಥಿಗಳ ಕುರಿತು ಕೇಂದ್ರದ ನಾಯಕರು ನಿರ್ಧರಿಸಲಿದ್ದಾರೆ ಎಂದು ವಿವರಿಸಿದರು. ಮೈಸೂರಿಗೆ ಸಂದೇಶ್ ನಾಗರಾಜ್ ಅವರು ಟಿಕೆಟ್ ಕೇಳಿದ್ದಾರೆ. ಅದರ ಬಗ್ಗೆ ನಮ್ಮ ಕೋರ್ ಕಮಿಟಿಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದ ಅವರು, ಜೆಡಿಎಸ್‍ನ ಮನೋಹರ್ ಬಿಜೆಪಿ ಸೇರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಆ ರೀತಿ ಚರ್ಚೆ ನಡೆಯುತ್ತಿದೆ. ಇನ್ನೂ ಅನೇಕರು ಹೇಳುತ್ತಿದ್ದಾರೆ. ಕೊಟ್ಟ ಅರ್ಜಿಗಳನ್ನು ಪಕ್ಷ ಪರಿಶೀಲಿಸಲಿದೆ ಎಂದು ತಿಳಿಸಿದರು. ಇದರ ಅರ್ಥವೇ ಬಿಜೆಪಿ ಅತಿಹೆಚ್ಚು ಸೀಟು ಗೆಲ್ಲಲಿದೆ ಎಂಬುದಾಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X