Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್ಲರಿಗೂ ನ್ಯಾಯ ತಲುಪಲು ಮಾಧ್ಯಮಗಳು...

ಎಲ್ಲರಿಗೂ ನ್ಯಾಯ ತಲುಪಲು ಮಾಧ್ಯಮಗಳು ನ್ಯಾಯಾಂಗದ ಜೊತೆ ಕೈಜೋಡಿಸಬೇಕಿದೆ: ನ್ಯಾ. ವೀರಪ್ಪ

ವಾರ್ತಾಭಾರತಿವಾರ್ತಾಭಾರತಿ7 Nov 2021 10:32 PM IST
share
ಎಲ್ಲರಿಗೂ ನ್ಯಾಯ ತಲುಪಲು ಮಾಧ್ಯಮಗಳು ನ್ಯಾಯಾಂಗದ ಜೊತೆ ಕೈಜೋಡಿಸಬೇಕಿದೆ: ನ್ಯಾ. ವೀರಪ್ಪ

ತುಮಕೂರು,ನ.07:ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಸಂವಿಧಾನದ ಆಶಯಗಳ ಈಡೇರಬೇ ಕಾದರೆ,ಎಲ್ಲರಿಗೂ ಸಮರ್ಪಕವಾಗಿ ನ್ಯಾಯ ದೊರೆಯುವಂತೆ ಮಾಡಲು ಮಾಧ್ಯಮಗಳು,ನ್ಯಾಯಾಂಗ ದೊಂದಿಗೆ ಕೈಜೋಡಿಸಿ ಕೆಲಸ ಮಾಡಬೇಕಾಗಿದೆ ಎಂದು ಕಾನೂನು ಸೇವಾ ಪ್ರಾಧಿಕಾರದ ಮುಖ್ಯಸ್ಥ ಹಾಗೂ ಹೈಕೋರ್ಟ ನ್ಯಾಯಾಧೀಶರಾದ ಬಿ.ವೀರಪ್ಪ ತಿಳಿಸಿದ್ದಾರೆ.

ನಗರದ ಗಾಜಿನಮನೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್,  ಜಿಲ್ಲಾ ವಕೀಲರ ಸಂಘದ ಸಹಯೋಗದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಪ್ಯಾನ್ ಇಂಡಿಯಾ ಕಾನೂನು ಅರಿವು ಅಭಿಯಾನ ಉದ್ಘಾಟಿಸಿ ಮಾತನಾಡುತಿದ್ದ ಅವರು,ಶಾಸಕಾಂಗ ಮತ್ತು ಕಾರ್ಯಾಂಗಗಳು  ಶೀಥಿಲವಾಗಿದ್ದು,ನ್ಯಾಯಾಂಗದ ಜೊತೆಗೆ ಪತ್ರಿಕಾರಂಗ ಕೈಜೋಡಿಸಿದರೆ ಜನರಿಗೆ ಹೆಚ್ಚಿನ ನೆರವು ನೀಡಬಹುದೆಂದರು.

ಸರ್ವರಿಗೂ ನ್ಯಾಯ ಪಡೆಯುವ ಸೌಲಭ್ಯ ಕಲ್ಪಿಸುವುದು ಸಂವಿಧಾನ ಹಕ್ಕು, ತಾರತಮ್ಯಕ್ಕೆ ಒಳಗಾಗದೇ ನ್ಯಾಯ ಒದಗಿಸಲು ಕಾನೂನಿನ ಅರಿವು ಮತ್ತು ನೆರವು ಇದೆ.ನ್ಯಾಯದಾನ ಪ್ರತಿಯೊಬ್ಬರಿಗೂ ತಲುಪಲು ಹಳ್ಳಿ  ಹಳ್ಳಿಯಲ್ಲಿಯೂ ಅರಿವು ಮೂಡಿಸುತ್ತಿರುವುದು ಹೆಮ್ಮೆಯ ವಿಷಯ, ದೇಶದ ರಕ್ಷಿಸಲು ಸೈನಿಕರಿದ್ದಂತೆ, ಅನ್ಯಾಯ, ಅಕ್ರಮ, ದಬ್ಬಾಳಿಕೆ ಸರಿಪಡಿಸಲು ನ್ಯಾಯಾಂಗ ಇಲಾಖೆ ಕಾರ್ಯನಿರ್ವಹಿಸುತ್ತಿದೆ, ನ್ಯಾಯದಾನದ ಜೊತೆಗೆ ಅರಿವು ಮೂಡಿಸುತ್ತಿದೆ, ಜಿಲ್ಲೆಗೆ ಲೋಕ ಅದಾಲತ್ ನಲ್ಲಿ ನಾಲ್ಕು ಬಾರಿ ಪ್ರಥಮ ಸ್ಥಾನ ದೊರೆತಿದೆ ಎಂದು ನ್ಯಾ.ಬಿ.ವೀರಪ್ಪ ಶ್ಲಾಘಿಸಿದರು.

ದೇಶದಲ್ಲಿ ಶಿಕ್ಷಿತರಿದ್ದರು ಕಾನೂನಿನ ಅರಿವಿಲ್ಲ ಹಾಗಾಗಿಯೇ ಕಟ್ಟಕಡೆಯ ವ್ಯಕ್ತಿಗೆ ನ್ಯಾಯ ಒದಗಿಸಲು ಸಾಧ್ಯವಿಲ್ಲ ಇದನ್ನು ಮನಗಂಡು ಪ್ರಾರಂಭವಾದ ಕಾನೂನು ಸೇವಾ ಪ್ರಾಧಿಕಾರದಿಂದ ನ್ಯಾಯ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ, ಜೀವನದಲ್ಲಿ ಎದುರಾಗುವ ಸಮಸ್ಯೆ ಎದುರಿಸಲು ಕಾನೂನಿನ ಅರಿವು ಹೊಂದುವುದು ಅವಶ್ಯಕ ಎಂದು ಸಲಹೆ ನೀಡಿದರು.

ಹಣ, ಅಧಿಕಾರದ ವ್ಯಾಮೋಹಕ್ಕಾಗಿ ಪೋಷಕರನ್ನು ತೊರೆದಿರುವ ಮಕ್ಕಳಿಂದ ಆಗುವ ತೊಂದರೆ ತಪ್ಪಿಸಲು ಹಿರಿಯ ನಾಗರೀಕರ ಕಾಯ್ದೆ ಜಾರಿಗೆ ತಂದಿದ್ದು,ಮಕ್ಕಳು ತಮ್ಮನ್ನು ನೋಡಿಕೊಳ್ಳದಿದ್ದರೆ ನಿಮ್ಮ ಆಸ್ತಿಯನ್ನು ಪಡೆದುಕೊಳ್ಳ ಬಹುದಾಗಿದೆ ಎಂದ ಅವರು,ಹಿರಿಯ ನಾಗರೀಕರು ಈ ಸೌಲಭ್ಯ ಪಡೆದುಕೊಳ್ಳಬೇಕು.ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗುವ, ಹೆಣ್ಣು ಮಕ್ಕಳ ಮೇಲೆ ಆಸಿಡ್ ದಾಳಿ ಮಾಡುವವರನ್ನು ಗಲ್ಲಿಗೇರಿಸಬೇಕು ಎಂದು ಭಾರತ ಸರಕಾರಕ್ಕೆ ಶಿಫಾರಸು ಮಾಡಿದ್ದೇನೆ, ಕಾನೂನು ಎದುರಿಸುವ ಧೈರ್ಯ ಬೇಕಾದರೆ ಕಾನೂನು ಅರಿವು ಪಡೆಯುವುದು ಅವಶ್ಯಕವಾಗಿದೆ. ಕಾನೂನಿನ ಜಾಗೃತಿ ಮೂಡಿಸುತ್ತಿದ್ದರು ಅದರ ಉಪಯೋಗ ಪಡೆದೇ ಇರುವುದು ದುರದೃಷ್ಟಕರ ಎಂದು ನ್ಯಾ.ಬಿ.ವೀರಪ್ಪ  ಹೇಳಿದರು.

ನ್ಯಾಯಮೂರ್ತಿ ಜಿ.ನರೇಂದರ್ ಮಾತನಾಡಿ, ಸರಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ವಸ್ತು ಪ್ರದರ್ಶನ ಏರ್ಪಡಿಸಿರುವುದು ಉತ್ತಮ ವಿಚಾರವಾಗಿದ್ದು, ತುಮಕೂರು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯ ಶ್ಲಾಘನೀಯ.ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಪ್ರಾರಂಭಿಸಿರುವ ಲೀಗಲ್ ಸರ್ವಿಸ್ ಕ್ರೆಡಿಟ್ ಕಾರ್ಪ್ ಸ್ವಯಂ ಸೇವಕರ ತಂಡ,ವಿದ್ಯಾರ್ಥಿಗಳ ತಂಡದ ಮೂಲಕ ಕಾನೂನು ಸೇವೆತ ಅರಿವು ಮೂಡಿಸುತ್ತಿರುವುದು ಮಾದರಿಯಾಗಿದ್ದು, ನ್ಯಾಯಾಂಗದ ಆಡಳಿತ ವ್ಯವಸ್ಥೆಯಲ್ಲಿ ತುಮಕೂರು ಸದಾ ಮುಂದಿದೆ ಎಂದು ಪ್ರಶಂಸಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಹೆಚ್.ಶಶಿಧರ ಶೆಟ್ಟಿ ಮಾತನಾಡಿ,ನ್ಯಾಯಾಲಯಗಳಲ್ಲಿ ಕಾನೂನು ಸೇವಾ ಪ್ರಾಧಿಕಾರದ ನೆರವು ಪಡೆದವರು ಶೇ.1ರಷ್ಟು,ಕಾನೂನು ಸೇವಾ ಪ್ರಾಧಿಕಾರದ ಬಗ್ಗೆ ಅರಿವು ಮೂಡಿಸಲು ಪ್ಯಾನ್ ಇಂಡಿಯಾ ಅಭಿಯಾನ ಹಮ್ಮಿಕೊಳ್ಳಲಾಗಿದೆ.ರಾಜ್ಯದಲ್ಲಿರುವ 29 ಸಾವಿರ ಹಳ್ಳಿಗಳಲ್ಲಿಯೂ ಕಾನೂನಿನ ಸೇವಾ ಪ್ರಾಧಿಕಾರದ ಅರಿವು ಮೂಡಿಸಲು ಅಭಿಯಾನದಲ್ಲಿ ಯೋಜನೆ ರೂಪಿಸಲಾಗಿದೆ,ಉಚಿತವಾಗಿ ಕಾನೂನು ಸೇವೆ ಪಡೆಯಬಹುದೆಂಬ ಅರಿವು ಮೂಡಿಸಬೇಕಾದ ಅನಿವಾರ್ಯತೆ ಇದೆ, ಮಹಿಳೆ, ಮಕ್ಕಳು, ಹಿರಿಯನಾಗರೀಕರು ಸೇರಿದಂತೆ ಎಲ್ಲರಿಗೂ ಉಚಿತವಾದ ನೆರವು ಪಡೆದುಕೊಳ್ಳಲು ಕಾನೂನು ಸೇವಾ ಪ್ರಾಧಿಕಾರದ ನೆರವು ಪಡೆದುಕೊಳ್ಳಬಹುದಾಗಿದೆ ಎಂದರು.

ಜಿ.ಪಂ.ಸಿಇಒ ಡಾ.ವಿದ್ಯಾಕುಮಾರಿ ಮಾತನಾಡಿ,ನ್ಯಾಯಾಂಗ ಮತ್ತು ಕಾರ್ಯಾಂಗದ ಮುಖ್ಯ ಉದ್ದೇಶ ದುರ್ಬಲರಿಗೆ ನೆರವು ನೀಡುವುದು, ಸರಕಾರ ಮನೆಬಾಗಿಲಿಗೆ ಸೇವೆ ದೊರಕಿಸುವ ನಿಟ್ಟಿನಲ್ಲಿ ಸಕಾಲದಂತಹ ಯೋಜನೆಗಳನ್ನು ಜಾರಿಗೆ ತಂದಿದೆ, ಜನರು ಸಹಭಾಗಿತ್ವ ವಹಿಸಿದಾಗ ಮಾತ್ರ ಯೋಜನೆ ಯಶಸ್ವಿಯಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ನ್ಯಾಯಾಧೀಶರಾದ ಜಿ.ಎಸ್.ಸಂಗ್ರೇಶಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ,ರಾಘವೇಂದ್ರ ಶೆಟ್ಟಿಗಾರ್, ಎಸ್ಪಿ ರಾಹುಲ್ ಕುಮಾರ್ ಶಹಾಪೂರವಾಡ್,ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ದೊಡ್ಮನೆ ಗೋಪಾಲಗೌಡ ಸೇರಿದಂತೆ ಜಿಲ್ಲೆ ಮತ್ತು ತಾಲೂಕು ನ್ಯಾಯಾಲಯಗಳ ನ್ಯಾಯಾಧೀಶರು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X