Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಯುಎಇ: ಮುಸ್ಲಿಮೇತರರಿಗೆ ಹೊಸ ಕಾನೂನು...

ಯುಎಇ: ಮುಸ್ಲಿಮೇತರರಿಗೆ ಹೊಸ ಕಾನೂನು ಜಾರಿ

ವಾರ್ತಾಭಾರತಿವಾರ್ತಾಭಾರತಿ7 Nov 2021 11:12 PM IST
share
ಯುಎಇ: ಮುಸ್ಲಿಮೇತರರಿಗೆ ಹೊಸ ಕಾನೂನು ಜಾರಿ

ಅಬುಧಾಬಿ, ನ.7: ಯುಎಇಯಲ್ಲಿ ಮುಸ್ಲಿಮೇತರ ವ್ಯಕ್ತಿಗಳು ಮದುವೆಯಾಗಲು, ವಿಚ್ಛೇದನ ನೀಡಲು ಮತ್ತು ಮಗುವಿನ ಪಾಲನೆಯನ್ನು ಜಂಟಿಯಾಗಿ ಮಾಡಲು ಅವಕಾಶ ನೀಡುವ ನೂತನ ಕಾನೂನು ಜಾರಿಗೊಳಿಸಿರುವ ಬಗ್ಗೆ ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ರವಿವಾರ ರಾಜಾಜ್ಞೆ ಜಾರಿಗೊಳಿಸಿದ್ದಾರೆ.

ಇಸ್ಲಾಮಿಕ್ ಶರಿಯದ ಸಿದ್ಧಾಂತದ ಆಧಾರದಲ್ಲಿ ಮದುವೆ ಮತ್ತು ವಿಚ್ಛೇದನ ಮುಂತಾದ ವೈಯಕ್ತಿಕ ವಿಷಯಗಳ ಕಾನೂನು ಇರುವ ಯುಎಇ, ಇದೀಗ ಪ್ರಾದೇಶಿಕ ವೈಜ್ಞಾನಿಕ ಕೇಂದ್ರವಾಗಿ ಸಾಧಿಸಿರುವ ಸ್ಪರ್ಧಾತ್ಮಕ ಮೇಲುಗೈಯನ್ನು ಉಳಿಸಿಕೊಂಡು ಬರುವ ನಿಟ್ಟಿನಲ್ಲಿ ಕೈಗೊಂಡಿರುವ ಮತ್ತೊಂದು ಮಹತ್ವದ ಕ್ರಮ ಇದಾಗಿದೆ. ಸಭ್ಯ ಮದುವೆ(ಗಂಡು ಮತ್ತು ಹೆಣ್ಣಿನ ಮಧ್ಯೆ ನಡೆಯುವ ವಿವಾಹ), ವಿಚ್ಛೇದನ, ಜೀವನಾಂಶ, ಜಂಟಿಯಾಗಿ ಮಗುವಿನ ಪಾಲನೆ, ಉತ್ತರಾಧಿಕಾರ, ಪಿತೃತ್ವದ ಪುರಾವೆ ಮೊದಲಾದ ವಿಷಯಗಳು ಈ ಕಾನೂನಿನ ವ್ಯಾಪ್ತಿಯಡಿ ಬರುತ್ತವೆ ಎಂದು ರಾಜಾಜ್ಞೆಯಲ್ಲಿ ತಿಳಿಸಲಾಗಿದೆ.

ಮುಸ್ಲಿಮೇತರ ಕುಟುಂಬಗಳಿಗೆ ಸಂಬಂಧಿಸಿದ ವಿವಾದಗಳನ್ನು ನಿರ್ವಹಿಸಲು ಅಬುಧಾಬಿಯಲ್ಲಿ ನ್ಯಾಯಾಲವನ್ನು ಸ್ಥಾಪಿಸಲಾಗುವುದು, ಇಂಗ್ಲಿಷ್ ಮತ್ತು ಅರೆಬಿಕ್ ಭಾಷೆಗಳಲ್ಲಿ ನ್ಯಾಯಾಲಯದ ಕಲಾಪ ನಡೆಯಲಿದೆ.

ಸಭ್ಯ ಮದುವೆ, ವಿಚ್ಛೇದನ, ಜೀವನಾಂಶ, ಜಂಟಿಯಾಗಿ ಮಗುವಿನ ಪಾಲನೆ, ಉತ್ತರಾಧಿಕಾರ, ಪಿತೃತ್ವದ ಪುರಾವೆ ಮುಂತಾದ ವಿಷಯಗಳಿಗೆ ಸಂಬಂಧಿಸಿದ 20 ಅನುಚ್ಛೇದ ಹಾಗೂ ಹಲವು ಪರಿಚ್ಛೇದಗಳನ್ನು ಈ ಕಾನೂನು ಹೊಂದಿದೆ.

ಮದುವೆಗೆ ಮಹಿಳೆ ಮತ್ತು ಪುರುಷನ ಒಪ್ಪಿಗೆ ಇದ್ದರೆ ಸಾಕು. ಮಹಿಳೆಯ ಕುಟುಂಬದವರ ಒಪ್ಪಿಗೆಯ ಅಗತ್ಯವಿಲ್ಲ.
ವಿಚ್ಛೇದನಕ್ಕೆ ಅರ್ಜಿ ಸಲ್ಲಿಸುವ ಅಧಿಕಾರ ಪತಿ ಮತ್ತು ಪತ್ನಿ ಇಬ್ಬರಿಗೂ ಇರುತ್ತದೆ. ತಮಗಾದ ತೊಂದರೆಯನ್ನು ಪುರಾವೆ ಸಹಿತ ಸಾಬೀತುಪಡಿಸುವ ಅಗತ್ಯವಿಲ್ಲ. ಈ ಹಿಂದೆ ತೊಂದರೆಯ ಬಗ್ಗೆ ಪುರಾವೆ ಒದಗಿಸಬೇಕಿತ್ತು.

ಮುಸ್ಲಿಮೇತರ ದಂಪತಿ ವಿಚ್ಛೇದನ ಕೋರಿದ ಅರ್ಜಿಯನ್ನು ಕೌಟುಂಬಿಕ ಸಲಹೆ ವಿಭಾಗದ ಪರಿಶೀಲನೆಗೆ ಕಳಿಸುವ ಅಗತ್ಯವಿಲ್ಲ. ನ್ಯಾಯಾಲಯದಲ್ಲೇ ನಿರ್ಧರಿಸಬಹುದು. ಅಲ್ಲದೆ ದಂಪತಿ ಸಮನ್ವಯ ಕಲಾಪದಲ್ಲಿ ಪಾಲ್ಗೊಳ್ಳುವ ಅಗತ್ಯವಿರುವುದಿಲ್ಲ.

ಮದುವೆಯಾಗಿ ಒಟ್ಟಿಗೆ ಕಳೆದ ಅವಧಿ, ಪತ್ನಿಯ ವಯಸ್ಸು, ಪತಿ ಮತ್ತು ಪತ್ನಿಯ ಆರ್ಥಿಕ ಪರಿಸ್ಥಿತಿಯನ್ನು ಗಮನಿಸಿ ಜೀವನಾಂಶವನ್ನು ನಿರ್ಧರಿಸಲಾಗುತ್ತದೆ. ಮಗುವಿನ ಮೇಲೆ ವಿಚ್ಛೇದನದ ಪರಿಣಾಮ ಕಡಿಮೆಗೊಳಿಸಲು ಹಾಗೂ ಮಗುವಿನ ಮಾನಸಿಕ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಮಕ್ಕಳ ಪಾಲನೆಯನ್ನು ಹೆತ್ತವರು ಸಮಾನವಾಗಿ ಹಂಚಿಕೊಳ್ಳಬೇಕು.

ಉತ್ತರಾಧಿಕಾರ, ತಾವು ಬಯಸಿದವರಿಗೆ ತಮ್ಮ ಆಸ್ತಿಯನ್ನು ವಿಲ್ ಮಾಡಿಕೊಡುವ ಹಕ್ಕನ್ನೂ ಈ ಕಾನೂನು ವಲಸಿಗರಿಗೆ ನೀಡುತ್ತದೆ.
ವಲಸಿಗ ಮುಸ್ಲಿಮೇತರ ದಂಪತಿಗೆ ಸಂಬಂಧಿಸಿ ನವಜಾತ ಶಿಶುಗಳ ಪಿತೃತ್ವದ ಪುರಾವೆಯು ಮದುವೆ ಅಥವಾ ಪಿತೃತ್ವದ ಗುರುತಿಸುವಿಕೆಯನ್ನು ಆಧರಿಸಿರುತ್ತದೆ ಎಂದು ಕಾನೂನಿನಲ್ಲಿ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X