Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೃಷ್ಣಾ ಜಲ ವಿವಾದ: ಮಧ್ಯಕಾಲೀನ ಅರ್ಜಿ...

ಕೃಷ್ಣಾ ಜಲ ವಿವಾದ: ಮಧ್ಯಕಾಲೀನ ಅರ್ಜಿ ತುರ್ತಾಗಿ ಕೈಗೆತ್ತಿಕೊಳ್ಳಲು ಕರ್ನಾಟಕ ಮನವಿ

ವಾರ್ತಾಭಾರತಿವಾರ್ತಾಭಾರತಿ8 Nov 2021 12:12 PM IST
share
ಕೃಷ್ಣಾ ಜಲ ವಿವಾದ: ಮಧ್ಯಕಾಲೀನ ಅರ್ಜಿ ತುರ್ತಾಗಿ ಕೈಗೆತ್ತಿಕೊಳ್ಳಲು ಕರ್ನಾಟಕ ಮನವಿ

ಬೆಂಗಳೂರು, ನ.8: ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣವು 29.11.2013ರಂದು ಅಂತಿಮವಾಗಿ ನೀಡಿರುವ ಐತೀರ್ಪನ್ನು ಕೇಂದ್ರ ಸರ್ಕಾರದ ಗೆಜೆಟ್ ನಲ್ಲಿ ಪ್ರಕಟಿಸಬೇಕೆಂದು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳು ಸಲ್ಲಿಸಿರುವ ಮಧ್ಯಕಾಲೀನ ಅರ್ಜಿಗಳನ್ನು ನ.29ರಂದು ನ್ಯಾಯಾಲಯದ ಕಲಾಪ ಪಟ್ಟಿಯಲ್ಲಿ ಸೇರಿಸಬೇಕು ಎಂದು ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯಪೀಠ ಇಂದು ಆದೇಶಿಸಿದೆ. ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ನ್ಯಾಯಮೂರ್ತಿ ವೈ.ವಿ.ಚಂದ್ರಚೂಡ್ ಅವರಿದ್ದ ಪೀಠ ಈ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡುವಂತೆ ತೆಲಂಗಾಣ ಮತ್ತು ಆಂಧ್ರ ರಾಜ್ಯಗಳು ಮಾಡಿದ ಮನವಿಯನ್ನು ಪುರಸ್ಕರಿಸಿತು.

ಆದರೆ ಕರ್ನಾಟಕದ ಪರವಾಗಿ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಶ್ಯಾಮ್ ದಿವಾನ್, ನ್ಯಾಯಾಧೀಕರಣದ ಐತೀರ್ಪಿನ ನಂತರ ಕರ್ನಾಟಕವು 13 ಸಾವಿರ ಕೋಟಿ ರೂ. ವೆಚ್ಚ ಮಾಡಿ 1,205 ಕಿ.ಮೀ. ಉದ್ದದ ಕಾಲುವೆ ಸರಪಳಿಯನ್ನು ನಿರ್ಮಿಸಿ ಕೊಂಡಿದೆ. ಈ ಕಾಲುವೆಗಳಿಗೆ ಹರಿಯಬೇಕಾದ ನೀರು ಬಂಗಾಳ ಕೊಲ್ಲಿಗೆ ವ್ಯರ್ಥವಾಗಿ ಹರಿಯುತ್ತಿದೆ. ಆದ್ದರಿಂದ ಈ ಪ್ರಕರಣದ ವಿಚಾರಣೆ ಅತ್ಯಂತ ತುರ್ತಾಗಿ ನಡೆಯಬೇಕಾಗಿದೆ. ಗೆಜೆಟ್ ಪ್ರಕಟನೆಮಹತ್ವದ ವಿಷಯವಾಗಿದೆ. ಎರಡು ವಾರಗಳ ನಂತರ ಇದನ್ನು ಪಟ್ಟಿ ಮಾಡಬೇಕು. ಕರ್ನಾಟಕವು ಗೆಜೆಟ್ ಪ್ರಕಟನೆ ಕೋರಿ ಸಲ್ಲಿಸಿದ ಮಧ್ಯಕಾಲೀನ ಅರ್ಜಿಯನ್ನು ತುರ್ತಾಗಿ ಕೈಗೆತ್ತಿಕೊಳ್ಳಬೇಕೆಂದು ಸರ್ವೋಚ್ಚ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರದ ನ್ಯಾಯವಾದಿಗಳು ಇದೇ ವಿಷಯವಾಗಿ ತಮ್ಮ ರಾಜ್ಯದ ಮಧ್ಯಕಾಲೀನ ಅರ್ಜಿಯನ್ನು ಸಹ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕೆಂದು ಕೋರಿದರು.

ಕರ್ನಾಟಕ ಮತ್ತು ಮಹಾರಾಷ್ಟ್ರ ಎರಡೂ ರಾಜ್ಯಗಳ ಗೆಜೆಟ್ ಪ್ರಕಟನೆ ಕೋರಿರುವ ಮಧ್ಯಕಾಲೀನ ಅರ್ಜಿಗಳನ್ನು 29.11.2021ರಂದು ನ್ಯಾಯಾಲಯದ ಕಲಾಪ ಪಟ್ಟಿಗೆ ಸೇರಿಸಬೇಕೆಂದು ಸರ್ವೋಚ್ಚ ನ್ಯಾಯಾಲಯ ಆದೇಶಿಸಿತು. ಇದೇ ಸಂದರ್ಭದಲ್ಲಿ ಕೇಂದ್ರ ಸರಕಾರವನ್ನು ಈ ಪ್ರಕರಣದಲ್ಲಿ ವಾದಿಯನ್ನಾಗಿಸುವುದಕ್ಕೆ ಕರ್ನಾಟಕವು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ಮಾನ್ಯ ಮಾಡಿತು. ಪ್ರಕರಣವನ್ನು ನ.29ಕ್ಕೆ ಮುಂದೂಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X