Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ನೀಟ್’ನಲ್ಲಿ ಸಾಧನೆಗೈದ ರೇಖಾ'ರ ಸಂಪೂರ್ಣ...

‘ನೀಟ್’ನಲ್ಲಿ ಸಾಧನೆಗೈದ ರೇಖಾ'ರ ಸಂಪೂರ್ಣ ವೈದ್ಯಕೀಯ ಶಿಕ್ಷಣದ ಖರ್ಚನ್ನು ಭರಿಸಲು ಮುಂದಾದ ಡಾ ಅಬ್ದುಲ್ ಖದೀರ್

ಪಾಲಕರ ಸಾವಿನ ಆಘಾತದ ಮಧ್ಯೆ ಶಾಹೀನ್ ಕಾಲೇಜಿನ ವಿದ್ಯಾರ್ಥಿನಿಯ ಸಾಧನೆ

ವಾರ್ತಾಭಾರತಿವಾರ್ತಾಭಾರತಿ8 Nov 2021 5:14 PM IST
share
‘ನೀಟ್’ನಲ್ಲಿ ಸಾಧನೆಗೈದ ರೇಖಾರ ಸಂಪೂರ್ಣ ವೈದ್ಯಕೀಯ ಶಿಕ್ಷಣದ ಖರ್ಚನ್ನು ಭರಿಸಲು ಮುಂದಾದ ಡಾ ಅಬ್ದುಲ್ ಖದೀರ್

ಬೀದರ್: ಮೂರು ತಿಂಗಳ ಅವಧಿಯಲ್ಲಿ ತಂದೆ-ತಾಯಿ ಇಬ್ಬರನ್ನೂ ಕಳೆದುಕೊಂಡ ಆಘಾತದ ನಡುವೆಯೇ ನೀಟ್‍ನಲ್ಲಿ ಸಾಧನೆಗೈದ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ರೇಖಾ ಅಡೂರ ಅವರ ವೈದ್ಯಕೀಯ ಕೋರ್ಸ್ ಶುಲ್ಕ ಭರಿಸಲು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹ ಮುಂದಾಗಿದೆ.

ಬೀದರ್ ನ ಶಹಾಪುರ ಗೇಟ್ ಸಮೀಪದ ಶಾಹೀನ್ ಪದವಿಪೂರ್ವ ವಿಜ್ಞಾನ ಕಾಲೇಜಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ರೇಖಾ ಅವರನ್ನು ಸನ್ಮಾನಿಸಿದ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು, ನೆರವಿನ ಅಭಯ ನೀಡಿದರು.

ಮಾನವೀಯ ನೆಲೆಯಲ್ಲಿ ವಿದ್ಯಾರ್ಥಿನಿಯ ಐದು ವರ್ಷಗಳ ವೈದ್ಯಕೀಯ ಕೋರ್ಸ್‍ನ ಶುಲ್ಕ ಭರಿಸಲಾಗುವುದು. ಅಗತ್ಯವಾದರೆ ಹಾಸ್ಟೇಲ್ ಶುಲ್ಕ ಕಟ್ಟಲು ಸಹ ಸಿದ್ಧ ಎಂದು ಪ್ರಕಟಿಸಿದರು. ಸ್ಥಳದಲ್ಲೇ ವಿದ್ಯಾರ್ಥಿನಿಗೆ ವೈದ್ಯಕೀಯ ಕೋರ್ಸ್‍ನ ಮೊದಲ ವರ್ಷದ ಶುಲ್ಕದ ರೂ. 60 ಸಾವಿರದ ಚೆಕ್ ನೀಡಿದರು.

ಆರ್ಥಿಕ ಸಮಸ್ಯೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಡಕಾಗಬಾರದು. ದಾನಿಗಳು, ಸಂಘ ಸಂಸ್ಥೆಗಳು ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳಿಗೆ ನೆರವಿನ ಹಸ್ತ ಚಾಚಲು ಮುಂದೆ ಬರಬೇಕು ಎಂದು ಮನವಿ ಮಾಡಿದರು.

ಕನಸು ಸಾಕಾರಗೊಳಿಸಿದ ಶಾಹೀನ್: 'ನಾನು ವೈದ್ಯೆಯಾಗಬೇಕು ಎಂದು ನನ್ನ ತಂದೆ-ತಾಯಿ ಹೊತ್ತಿದ್ದ ಕನಸನ್ನು ಶಾಹೀನ್ ಸಾಕಾರಗೊಳಿಸಿದೆ. ಆದರೆ, ಅದನ್ನು ನೋಡಲು ಈಗ ಅವರೇ ಇಲ್ಲ' ಎಂದು ವಿದ್ಯಾರ್ಥಿನಿ ರೇಖಾ ಭಾವುಕರಾಗಿ ನುಡಿದರು.

ಪಿಯುಸಿ ಶಿಕ್ಷಣ ಶಾಹೀನ್‍ನಲ್ಲೇ ಪಡೆದಿದ್ದೇನೆ. 2020ನೇ ಸಾಲಿನ ನೀಟ್‍ನಲ್ಲಿ 391 ಅಂಕ ಬಂದ ಕಾರಣ ವೈದ್ಯಕೀಯ ಸೀಟು ಲಭಿಸಿರಲಿಲ್ಲ. ಹೀಗಾಗಿ ಶಾಹೀನ್‍ನಲ್ಲಿ ಮತ್ತೆ ನೀಟ್ ತರಬೇತಿ ಪಡೆದೆ. ಎರಡನೇ ಪ್ರಯತ್ನದಲ್ಲಿ 591 ಅಂಕಗಳು ದೊರಕಿದ್ದು, 22,883ನೇ ರ್ಯಾಂಕ್ ಬಂದಿದೆ. ಸರ್ಕಾರಿ ಕೋಟಾದಡಿ ವೈದ್ಯಕೀಯ ಸೀಟು ಸಿಗಲಿದೆ ಎಂದು ತಿಳಿಸಿದರು.

ಕುಷ್ಟಗಿ ಪುರಸಭೆ ಉಪಾಧ್ಯಕ್ಷೆಯಾಗಿದ್ದ ತಾಯಿ ರಾಜೇಶ್ವರಿ ಏಪ್ರಿಲ್ 22 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಮುಖ್ಯ ಶಿಕ್ಷಕರಾಗಿದ್ದ ತಂದೆ ಸಿದ್ದಪ್ಪ ಜುಲೈ 30 ರಂದು ಹೃದಯಾಘಾತದಿಂದ ಮೃತಪಟ್ಟಿದ್ದರು. ನೀಟ್ ಸಿದ್ಧತೆಯಲ್ಲಿ ತೊಡಗಿದ್ದಾಗಲೇ ತಂದೆ-ತಾಯಿ ಸಾವು ಆಘಾತ ಉಂಟು ಮಾಡಿತ್ತು. ಆಕಾಶವೇ ತಲೆ ಮೇಲೆ ಕಳಚಿ ಬಿದ್ದಂತೆ ಆಗಿತ್ತು. ಬಹಳ ದಿನಗಳವರೆಗೆ ದುಃಖದಿಂದ ಹೊರಬರಲು ಆಗಿರಲಿಲ್ಲ ಎಂದು ಹೇಳಿದರು.

ಡಾ. ಅಬ್ದುಲ್ ಖದೀರ್ ಹಾಗೂ ಕಾಲೇಜು ಉಪನ್ಯಾಸಕರು ಸಮಾಧಾನ ಹೇಳಿ, ಆತ್ಮವಿಶ್ವಾಸ ತುಂಬಿದರು. ಕಾಲೇಜಿನಲ್ಲಿರುವ ಉತ್ತಮ ಶೈಕ್ಷಣಿಕ ವಾತಾವರಣದಿಂದಾಗಿಯೇ ವೈದ್ಯಕೀಯ ಪ್ರವೇಶಕ್ಕೆ ಅರ್ಹತೆ ಗಳಿಸಲು ಸಾಧ್ಯವಾಯಿತು. ಈಗ ವೈದ್ಯಕೀಯ ಶಿಕ್ಷಣಕ್ಕೂ ನೆರವಾಗುತ್ತಿರುವುದಕ್ಕೆ ಶಾಹೀನ್‍ಗೆ ಕೃತಜ್ಞಳಾಗಿದ್ದೇನೆ ಎಂದು ಹೇಳಿದರು.

ತಂದೆ-ಅಜ್ಜಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯ ಬಲಹೀನವಾಗಿದ್ದರಿಂದಲೇ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನಗೆ ಹೃದಯವನ್ನು ನೋಡಬೇಕಾಗಿದೆ. ಹೀಗಾಗಿ ಹೃದಯ ರೋಗ ತಜ್ಞೆಯಾಗುವ ಬಯಕೆ ಇದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X