ಗಿರಿಜನ ಮಹಿಳಾ ವಿಕಲಚೇತನರಿಗೆ ಮಾಹಿತಿ ಕಾರ್ಯಾಗಾರ
![ಗಿರಿಜನ ಮಹಿಳಾ ವಿಕಲಚೇತನರಿಗೆ ಮಾಹಿತಿ ಕಾರ್ಯಾಗಾರ ಗಿರಿಜನ ಮಹಿಳಾ ವಿಕಲಚೇತನರಿಗೆ ಮಾಹಿತಿ ಕಾರ್ಯಾಗಾರ](https://www.varthabharati.in/sites/default/files/images/articles/2021/11/8/313020-1636383506.jpg)
ಉಡುಪಿ, ನ.8: ಗಿರಿಜನ ಮಹಿಳಾ ವಿಕಲಚೇತನರ ಸರಕಾರಿ ಯೋಜನೆಗಳ ಜಿಲ್ಲಾ ಮಟ್ಟದ ಮಾಹಿತಿ ಕಾರ್ಯಾಗಾರ ಮಣಿಪಾಲದಲ್ಲಿರುವ ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆ ಮತ್ತು ಮಣಿಪಾಲ ಮಾಹೆಯ ವಾಣಿಜ್ಯ ವಿಭಾಗಗಳ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆಯಿತು.
ಕಾರ್ಯಾಗಾರವನ್ನು ಉಡುಪಿ ಜಿಪಂನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ವೈ ಉದ್ಘಾಟಿಸಿದರು. ಮಾಹೆಯ ವಾಣಿಜ್ಯ ವಿಭಾಗದ ಮುಖ್ಯಸ್ಥ ಡಾ.ಸಂದೀಪ್ ಎಸ್ ಶೆಣೈ ಅತಿಥಿ ಭಾಷಣ ಮಾಡಿದರು.
ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಸಮನ್ವಯಾಧಿಕಾರಿ ದೂದ್ಪೀರ್ ಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಆರ್. ಶೇಷಪ್ಪ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ ಯತೀಶ್ ತಮ್ಮ ಇಲಾಖೆಗಳಿಗೆ ಸಂಬಂಧಪಟ್ಟ ಯೋಜನೆಗಳ ಕುರಿತು ಮಾಹಿತಿ ನೀಡಿದರು.
ಮೀನಾಕ್ಷಿ ಸ್ವಾಗತಿಸಿದರು. ಡಾ. ಸತೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ದರು. ಕಾರ್ಯಕ್ರಮದಲ್ಲಿ 80ಕ್ಕೂ ಹೆಚ್ಚು ಗಿರಿಜನ ಮಹಿಳಾ ವಿಕಲಚೇತನ ಫಲಾನುಭವಿಗಳು ಹಾಗೂ ಅವರ ಪೋಷಕರು ಪಾಲ್ಗೊಂಡಿದ್ದರು.