Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪೇಜಾವರಶ್ರೀಗಳಿಂದ ಪ್ರಧಾನಿ ನರೇಂದ್ರ...

ಪೇಜಾವರಶ್ರೀಗಳಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ8 Nov 2021 9:02 PM IST
share
ಪೇಜಾವರಶ್ರೀಗಳಿಂದ ಪ್ರಧಾನಿ ನರೇಂದ್ರ ಮೋದಿ ಭೇಟಿ

ಉಡುಪಿ, ನ.8: ಅಯೋಧ್ಯೆ ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ವಿಶ್ವಸ್ಥರೂ ಆಗಿರುವ ಪೇಜಾವರ ಮಠಾಧೀಶ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಅವರು ಸೋಮವಾರ ಸಂಜೆ ಹೊಸದಿಲ್ಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ತಮ್ಮ ಗುರುಗಳಾದ ಶ್ರೀವಿಶ್ವೇಶತೀರ್ಥರಿಗೆ ಭಾರತ ಸರಕಾರ ಮರಣೋತ್ತರವಾಗಿ ಘೋಷಿಸಿದ್ದ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲು ಹೊಸದಿಲ್ಲಿಗೆ ತೆರಳಿದ್ದ ಸಂದರ್ಭದಲ್ಲಿ ಈ ಭೇಟಿ ನಡೆಯಿತು. ಪೇಜಾವರ ಶ್ರೀಗಳೊಂದಿಗೆ ಕುಶಲೋಪರಿ ನಡೆಸಿದ ಪ್ರಧಾನಿ ಮೋದಿ, ಶ್ರೀವಿಶ್ವೇಶತೀರ್ಥ ರನ್ನು ವಿಶೇಷವಾಗಿ ಸ್ಮರಿಸಿದರು. ರಾಮಮಂದಿರ ನಿರ್ಮಾಣ ಕಾರ್ಯಗಳ ಪ್ರಗತಿಯ ಕುರಿತೂ ಇಬ್ಬರು ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ನರೇಂದ್ರ ಮೋದಿ ಅವರಿಗೆ ಯಕ್ಷಗಾನದ ಕೇದಗೆ ಮುಂದಲೆ ಕಿರೀಟ ತೊಡಿಸಿ, ಜರತಾರಿ ಶಾಲು, ಬೆಳ್ಳಿಯ ತಟ್ಟೆಯಲ್ಲಿ ಉಡುಪಿ ಶ್ರೀಕೃಷ್ಣನ ಗಂಧ, ನಿರ್ಮಾಲ್ಯ ತುಳಸಿ ನೀಡಿ ಆಶೀರ್ವದಿಸಿದರು. ಅಲ್ಲದೇ ಉಡುಪಿಯ ಚಿತ್ರಕಲಾವಿದೆ ವಸಂತಲಕ್ಷ್ಮೀ ಹೆಬ್ಬಾರ್ ರಚಿಸಿದ ಮೋದಿ ಅವರು ಉಡುಪಿ ಕೃಷ್ಣನಿಗೆ ಕೈಮುಗಿಯುವ ಭಂಗಿಯ ಸುಂದವಾದ ತೈಲಚಿತ್ರ ಹಾಗೂ ಸಂಸ್ಕೃತ, ಕನ್ನಡ, ತುಳು ಲಿಪಿಗಳಲ್ಲಿ ನರೇಂದ್ರ ಮೋದಿಯವರ ಹೆಸರನ್ನು ಕೆತ್ತಿದ ಸ್ಮರಣಿಕೆಯನ್ನೂ ಶ್ರೀಗಳು ಪ್ರಧಾನಮಂತ್ರಿಗಳಿಗೆ ನೀಡಿದರು.

ಈ ಭೇಟಿಯ ಬಗ್ಗೆ ಶ್ರೀಗಳು ಮತ್ತು ಪ್ರಧಾನಮಂತ್ರಿಗಳು ಅತೀವ ಸಂತಸ ವ್ತಕ್ತಪಡಿಸಿದರು. ಶೀಘ್ರ ಕೃಷ್ಣ ದರ್ಶನಕ್ಕೆ ಆಗಮಿಸುವಂತೆ ಶ್ರೀಗಳು ಪ್ರಧಾನಿ ಮೋದಿ ಅವರನ್ನು ಆಹ್ವಾನಿಸಿದರು. ಖಂಡಿತ ಬಂದೇ ಬರ್ತೇನೆ, ಚಿಂತೆ ಬೇಡ ಎಂದು ಮೋದಿ ನುಡಿದರು.

ಇದೇ ವೇಳೆ ಹಲವು ಮನವಿಗಳನ್ನೊಂಡ ಪತ್ರವನ್ನು ಶ್ರೀಗಳು ಪ್ರಧಾನಿಗೆ ನೀಡಿದರು. ಇದರಲ್ಲಿ ದೇಶದಲ್ಲಿ ಗೋಹತ್ಯಾ ನಿಷೇಧ ಕಾನೂನು ಜಾರಿ ಗೊಳಿಸುವುದು, ದೇಶಾದ್ಯಂತ ಹಿಂದೂ ಶ್ರದ್ಧಾಕೇಂದ್ರಗಳನ್ನು ಸರಕಾರಿ ವ್ಯವಸ್ಥೆ ಯಿಂದ ಸ್ವಾಯತ್ತಗೊಳಿಸು ವುದು, ಮಹರ್ಷಿ ವೇದವ್ಯಾಸರ ಜಯಂತಿಯನ್ನು ತತ್ತ್ವಜ್ಞಾನ ದಿನ ಅಥವಾ ಅಧ್ಯಾತ್ಮ ದಿನವಾಗಿ ಘೋಷಿಸುವುದು ಹಾಗೂ ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವ ಅಪೇಕ್ಷೆಗಳನ್ನು ಲಿಖಿತವಾಗಿ ನೀಡಿದರು.

ಈ ಭೇಟಿಯ ಸಂದರ್ಭದಲ್ಲಿ ಪೇಜಾವರ ಮಠದ ದಿವಾನರಾದ ಎಂ.ರಘುರಾಮಾಚಾರ್ಯ,ಡಿ.ಪಿ.ಅನಂತ್ ಹಾಗೂ ಸಾಮಾಜಿಕ ಕಾರ್ಯ ಕರ್ತ ವಾಸುದೇವ ಭಟ್ ಪೆರಂಪಳ್ಳಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X