Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇವೇಂದ್ರ ಫಡ್ನವಿಸ್ ಗೆ ಭೂಗತ...

ದೇವೇಂದ್ರ ಫಡ್ನವಿಸ್ ಗೆ ಭೂಗತ ಲೋಕದೊಂದಿಗಿರುವ ಸಂಬಂಧವನ್ನು ನಾಳೆ ಬಹಿರಂಗಪಡಿಸುವೆ: ನವಾಬ್ ಮಲಿಕ್

ವಾರ್ತಾಭಾರತಿವಾರ್ತಾಭಾರತಿ9 Nov 2021 4:52 PM IST
share
ದೇವೇಂದ್ರ  ಫಡ್ನವಿಸ್ ಗೆ ಭೂಗತ ಲೋಕದೊಂದಿಗಿರುವ ಸಂಬಂಧವನ್ನು ನಾಳೆ ಬಹಿರಂಗಪಡಿಸುವೆ: ನವಾಬ್ ಮಲಿಕ್

ಮುಂಬೈ: ರಾಜ್ಯ ಸಚಿವ ನವಾಬ್ ಮಲಿಕ್ ಅವರ  ಭೂಗತ ಲೋಕದ ಸಂಪರ್ಕದ ಬಗ್ಗೆ ದೀಪಾವಳಿಯ ನಂತರದ ಬಹಿರಂಗಪಡಿಸುವೆ ಎಂದಿದ್ದ  ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಇಂದು ಕೆಲವು ಪುರಾವೆಯನ್ನು ಮುಂದಿಟ್ಟಿದ್ದಾರೆ. ಫಡ್ನವಿಸ್ ಆರೋಪಕ್ಕೆ ತಿರುಗೇಟು ನೀಡಿರುವ ನವಾಬ್ ಮಲಿಕ್ ನಾನು ನಾಳೆ ಸತ್ಯದ ಬಾಂಬ್ ಎಸೆಯುತ್ತೇನೆ. ಫಡ್ನವಿಸ್ ಗೆ ಭೂಗತ ಲೋಕದೊಂದಿಗಿರುವ ಸಂಬಂಧವನ್ನು ಬಹಿರಂಗಪಡಿಸುವೆ ಎಂದಿದ್ದಾರೆ.

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕ ಫಡ್ನವಿಸ್ ಅವರು  ಮಲಿಕ್‌ಗೆ ಭೂಗತ ಲೋಕದ ಸಂಪರ್ಕವಿದೆ ಎಂಬ ತನ್ನ ಹಿಂದಿನ ಆರೋಪವನ್ನು ಪುನರುಚ್ಚರಿಸಿದರು. ಸಂಪರ್ಕದ "ಪುರಾವೆ" ನನ್ನಲ್ಲಿದೆ ಎಂದು ಹೇಳಿದ್ದಾರೆ.

"ದೀಪಾವಳಿಯ ನಂತರ ನಾನು ಏನೋ ಒಂದು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದೆ. ಪೇಪರ್ಸ್ ಪಡೆಯಲು ಸ್ವಲ್ಪ ಸಮಯ ತೆಗೆದುಕೊಂಡಿತು. 1993ರ ಮುಂಬೈ ಸ್ಫೋಟದ ಆರೋಪಿ ಭೂಗತ ಜಗತ್ತಿನ ವ್ಯಕ್ತಿಯೊಂದಿಗೆ ನವಾಬ್ ಮಲಿಕ್ ಆಸ್ತಿ ಒಪ್ಪಂದ ಮಾಡಿಕೊಂಡಿದ್ದರು’’ ಎಂದೂ  ಫಡ್ನವಿಸ್ ಆರೋಪಿಸಿದರು.

"ಕುರ್ಲಾದಲ್ಲಿ ಎಲ್ ಬಿಎಸ್ ರಸ್ತೆಯಲ್ಲಿರುವ 2.80 ಎಕರೆ ಜಾಗವನ್ನು ಗೋವಾಲಾ ಕಾಂಪೌಂಡ್ ಎಂದು ಕರೆಯಲಾಗುತ್ತದೆ. ಈ ಜಾಗವು  ಸಾಲಿಡಸ್ ಇನ್ವೆಸ್ಟ್‌ಮೆಂಟ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ನೋಂದಣಿಯಾಗಿದೆ. ಈ ಕಂಪನಿಯು ನವಾಬ್ ಮಲಿಕ್ ಅವರ ಕುಟುಂಬಕ್ಕೆ ಸಂಬಂಧಿಸಿದೆ. ಅವರು ಕಂಪನಿಯಲ್ಲಿದ್ದರು. ಆದರೆ ಅವರು ಸಚಿವರಾದ ನಂತರ ರಾಜೀನಾಮೆ ನೀಡಿದರು.  ಈ ಜಾಗವನ್ನು ಭೂಗತ ಜಗತ್ತಿನ ವ್ಯಕ್ತಿಗಳಿಂದ ರೂ. 30 ಲಕ್ಷಕ್ಕೆ  ಖರೀದಿಸಲಾಗಿದ್ದು, ರೂ. 20 ಲಕ್ಷ ಮಾತ್ರ ಪಾವತಿಸಲಾಗಿದೆ ಎಂದು ಫಡ್ನವಿಸ್‌ ಆರೋಪಿಸಿದ್ದಾರೆ.

"ಈ ಡೀಲ್ ಯಾವಾಗ ನಡೆದಿತ್ತು ಎಂಬುದು ನನ್ನ ಪ್ರಶ್ನೆ. ಸಲೀಂ ಪಟೇಲ್ ಯಾರೆಂದು ನಿಮಗೆ ತಿಳಿದಿಲ್ಲವೇ? ನೀವು ಅಪರಾಧಿಗಳಿಂದ ಏಕೆ ಜಮೀನು ಖರೀದಿಸಿದ್ದೀರಿ? ಅವರು ಎಲ್‌ಬಿಎಸ್ ರಸ್ತೆಯಲ್ಲಿರುವ ಮೂರು ಎಕರೆ ಜಾಗವನ್ನು ರೂ. 30 ಲಕ್ಷಕ್ಕೆ ಏಕೆ ಮಾರಾಟ ಮಾಡಿದರು" ಎಂದು ಕೇಳಿದರು.

ಸಲೀಂ ಪಟೇಲ್ ಗ್ಯಾಂಗ್ ಸ್ಟರ್  ದಾವೂದ್ ಇಬ್ರಾಹಿಂನ ಸಹಾಯಕ ಹಾಗೂ  ದಾವೂದ್ ಸಹೋದರಿಯ ಚಾಲಕನಾಗಿದ್ದನು. ದಾವೂದ್ ಪರಾರಿಯಾದ ನಂತರ ಸಲೀಂ ಪಟೇಲ್ ಮೂಲಕ ಹಸೀನಾ ಪಾರ್ಕರ್ ಆಸ್ತಿಯನ್ನು ಸ್ವಾಧೀನಪಡಿಸಿಕೊಂಡರು. ದಾವೂದ್ ಇಬ್ರಾಹಿಂ 1993ರ ಮುಂಬೈ ಬಾಂಬ್ ಸ್ಫೋಟದ ಸೂತ್ರಧಾರನಾಗಿದ್ದಾನೆ.

"ದೇವೇಂದ್ರ ಫಡ್ನವಿಸ್‌ಗೆ ಸಂಬಂಧಿಸಿದಂತೆ ನಾನು ನಾಳೆ ಹೈಡ್ರೋಜನ್ ಬಾಂಬ್ ಅನ್ನು ಎಸೆಯುತ್ತೇನೆ. ನಾನು ದೇವೇಂದ್ರ ಫಡ್ನವಿಸ್‌ನ ಭೂಗತ ಜಗತ್ತಿನ ಸಂಪರ್ಕವನ್ನು ಬಹಿರಂಗಪಡಿಸುತ್ತೇನೆ" ಎಂದು ಮಲಿಕ್ ತನ್ನ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

"ದೇವೇಂದ್ರ ಫಡ್ನವಿಸ್ ನನ್ನನ್ನು ಸ್ಫೋಟದ ಅಪರಾಧಿಗಳು ಹಾಗೂ  ಭೂಗತ ಜಗತ್ತಿನೊಂದಿಗೆ ಸಂಪರ್ಕಿಸುವ ಮೂಲಕ ನನ್ನ ಘನತೆಯನ್ನು ಕೆಡಿಸಲು ಪ್ರಯತ್ನಿಸುತ್ತಿದ್ದಾರೆ. ಅವರು ನನ್ನ ಸ್ಥಳದಿಂದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ ಎಂದು ಈ ಹಿಂದೆ ಹೇಳುವ ಮೂಲಕ ಅದೇ ರೀತಿ ಮಾಡಿದರು ... ನಾನು ಅವರಿಗೆ ಕಾನೂನು ನೋಟಿಸ್ ಕಳುಹಿಸುತ್ತೇನೆ" ಎಂದು ಮಲಿಕ್  ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X