Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರೀಡಾ ಸಾಧಕ ಡಾ.ಎಂ.ಪಿ.ಗಣೇಶ್ ರಿಗೆ...

ಕ್ರೀಡಾ ಸಾಧಕ ಡಾ.ಎಂ.ಪಿ.ಗಣೇಶ್ ರಿಗೆ ಪದ್ಮಶ್ರೀ ಗೌರವ

ವಾರ್ತಾಭಾರತಿವಾರ್ತಾಭಾರತಿ9 Nov 2021 5:14 PM IST
share
ಕ್ರೀಡಾ ಸಾಧಕ ಡಾ.ಎಂ.ಪಿ.ಗಣೇಶ್ ರಿಗೆ ಪದ್ಮಶ್ರೀ ಗೌರವ

ಮಡಿಕೇರಿ ನ.9 : ಕ್ರೀಡಾ ಜಿಲ್ಲೆಯೆಂದೇ ಹೆಸರುವಾಸಿಯಾಗಿರುವ ಕೊಡಗಿನ ಹಾಕಿಪಟು, ಭಾರತ ಹಾಕಿ ತಂಡದ ಮಾಜಿ ನಾಯಕ ಡಾ.ಮೊಳ್ಳೆರ ಪಿ. ಗಣೇಶ್ ಪದ್ಮಶ್ರೀ ಬಿರುದು ಪಡೆದುಕೊಂಡಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪಡೆದಿರುವ ಡಾ.ಎಂ.ಪಿ.ಗಣೇಶ್ ಹಾಕಿ ತಂಡದ ನಾಯಕರಾಗಿ, ತರಬೇತುದಾರರಾಗಿ, ಆಯ್ಕೆಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಹಾಕಿಯಲ್ಲಿ ಗೌರವ ಡಾಕ್ಟರೇಟ್‌ನ ಬದಲಾಗಿ “ಥೀಸೀಸ್” ಬರೆಯುವ ಮೂಲಕ ತಮಿಳುನಾಡುವಿನ ಕಾರೈಕುಡಿಯಲ್ಲಿ ಡಾಕ್ಟರೇಟ್ ಪದವಿ ಪಡೆದ ದೇಶದ ಏಕೈಕ ಆಟಗಾರರೂ ಆಗಿದ್ದಾರೆ.

ಆರಂಭದಲ್ಲಿ ಫುಟ್‌ಬಾಲ್ ಆಟಗಾರರಾಗಿ ಭಾರತೀಯ ಸೇನೆಗೆ ಸೇರ್ಪಡೆಗೊಂಡಿದ್ದ ಇವರು ನಂತರ ಆರ್ಮಿಯಲ್ಲಿ ಹಾಕಿ ಆಟಗಾರನಾಗಿ ರೂಪುಗೊಂಡು ದೇಶವನ್ನು ಪ್ರತಿನಿಧಿಸಿದ್ದರು. 1971ರಲ್ಲಿ ಭಾರತ ವಿಶ್ವಕಪ್‌ನಲ್ಲಿ ಕಂಚಿನ ಪದಕ ಗೆದ್ದ ಸಂದರ್ಭ ತಂಡದ ಸದಸ್ಯರಾಗಿದ್ದ ಗಣೇಶ್, 1972ರ ಮೂನಿಚ್ ಒಲಿಂಪಿಕ್ಸ್ನಲ್ಲಿ ಭಾರತ ಪದಕ ಗಳಿಸಿದ ಸಂದರ್ಭವೂ ತಂಡದಲ್ಲಿದ್ದರು. 1973ರಲ್ಲಿ ಆರ್ಮಸ್ಟರ್ ಡಾಮ್ ವಿಶ್ವಕಪ್‌ನಲ್ಲಿ ಬೆಳ್ಳಿ ಪದಕ ಗಳಿಸಿದ ಭಾರತ ತಂಡದಲ್ಲಿಯೂ ಎಂ.ಪಿ.ಗಣೇಶ್ ಆಟಗಾರರಾಗಿದ್ದರು.

1982ರಲ್ಲಿ ರಾಜ್ಯದಲ್ಲಿ ಗುಂಡೂರಾವ್ ಅವರ ಸರಕಾರದ ಅಧಿಕಾರಾವಧಿಯಲ್ಲಿ ಇವರಿಗೆ 10 ಎಕರೆ ಜಾಗ ಹುಟ್ಟೂರಾದ ಸುಂಟಿಕೊಪ್ಪದಲ್ಲಿ ದೊರೆಯುವುದರಲ್ಲಿತ್ತು. ಆದರೆ ಇದನ್ನು ನಯವಾಗಿ ತಿರಸ್ಕರಿಸಿದ ಗಣೇಶ್, ರಾಜ್ಯದಲ್ಲಿ ಕ್ರೀಡಾಶಾಲೆ ಸ್ಥಾಪನೆಯ ಬೇಡಿಕೆ ಮುಂದಿರಿಸಿದ್ದರು. ಪರಿಣಾಮ ಎಂಬಂತೆ ರಾಜ್ಯದಲ್ಲಿ ಕ್ರೀಡಾಶಾಲೆ ಪ್ರಾರಂಭಕ್ಕೆ ಎಂ.ಪಿ.ಗಣೇಶ್ ಕಾರಣೀಭೂತರಾದರು. ಆರಂಭದಲ್ಲಿ ಕರ್ನಾಟಕ ಯೂತ್ ಸರ್ವೀಸ್ ಸ್ಪೋರ್ಟ್ಸ್ ಹಾಸ್ಟೆಲ್ ಎಂದು ಪ್ರಾರಂಭಗೊಂಡ ಕ್ರೀಡಾ ಶಾಲೆ ನಂತರದ ವರ್ಷಗಳಲ್ಲಿ ಜಿಲ್ಲಾ ಯೂತ್ ಸರ್ವೀಸ್ ಕ್ರೀಡಾ ಶಾಲೆಯಾಗಿಯೂ ಕಾರ್ಯಾರಂಭಗೊಂಡಿತ್ತು. ಮಡಿಕೇರಿ, ಧಾರವಾಡ ಮತ್ತಿತರ ಕಡೆಗಳಲ್ಲಿ ಸಾಯಿ ಕ್ರೀಡಾ ವಸತಿ ನಿಲಯ ಸ್ಥಾಪನೆ, ಜಿಲ್ಲೆಯ ಹೊದ್ದೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ಜಾಗ ಕಲ್ಪಿಸುವಲ್ಲಿ ಪ್ರಧಾನ ಪಾತ್ರವಹಿಸಿರುವ ಗಣೇಶ್, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆ.ಎಸ್.ಸಿ.ಎ)ಯ ಸಿಇಓ ಆಗಿ ಕಾರ್ಯ ನಿರ್ವಹಿಸಿದ್ದಾರೆ.

ಪ್ರಸ್ತುತ ನವದೆಹಲಿಯಲ್ಲಿ ಸಾಯಿ ನ್ಯಾಷನಲ್ ಹಾಕಿ ಅಕಾಡೆಮಿಯ ಸಿ.ಇ.ಓ. ಆಗಿ ಹಾಗೂ ಹೈಫರ್‌ಫಾರ್ಮೆನ್ಸ್ ಡೈರೆಕ್ಟರ್ ಆಫ್ ಸಾಯಿ ಆಗಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X