Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ.ಜಾತಿಯ ಜನತೆಗೆ ವಿವಿಧ ಸೌಲಭ್ಯ ಒದಗಿಸಲು...

ಪ.ಜಾತಿಯ ಜನತೆಗೆ ವಿವಿಧ ಸೌಲಭ್ಯ ಒದಗಿಸಲು ವಿಶೇಷ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ9 Nov 2021 7:30 PM IST
share

ಉಡುಪಿ, ನ.9: ಪರಿಶಿಷ್ಟ ಜಾತಿಯ ಜನತೆಗಾಗಿ ಸಮಾಜ ಕಲ್ಯಾಣ ಇಲಾಖೆ ಯಿಂದ ಅನುಷ್ಠಾನಗೊಳಿಸಲಾಗುತ್ತಿರುವ ವಿದ್ಯಾರ್ಥಿವೇತನ, ಬಹುಮಾನ ಹಣ ಹಾಗು ಅಂತರ್ಜಾತಿ ವಿವಾಹ ಕಾರ್ಯಕ್ರಮ ಕುರಿತ ಅರ್ಜಿಗಳ ಶೀಘ್ರ ವಿಲೇವಾರಿಗಾಗಿ ಅ.28ರಿಂದ ನ.17ರವರೆಗೆ ವಿಶೇಷ ಅಭಿಯಾನ ಒಂದನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ನಿಗದಿತ ಮಿತಿಯಿಲ್ಲದೇ ಈ ಕೆಳಗಿನ ಯೋಜನೆಗಳಲ್ಲಿ ಅರ್ಜಿ ಸಲ್ಲಿಸುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಮಂಜೂರು ಮಾಡಲಾಗುತ್ತದೆ.

ವಿದ್ಯಾರ್ಥಿವೇತನ: ವಿದ್ಯಾರ್ಥಿವೇತನ ಯೋಜನೆ ಪ.ಜಾತಿ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಪ್ರಮುಖ ಯೋಜನೆಯಾಗಿದೆ. ಪ್ರತಿ ವರ್ಷ ರಾಜ್ಯಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಈ ಯೋಜನೆಯ ಮೂಲಕ ಶಿಕ್ಷಣದ ಕನಸನ್ನು ನನಸಾಗಿಸಿ ಕೊಳ್ಳುತ್ತಿದ್ದಾರೆ.

ವಿದ್ಯಾರ್ಥಿವೇತನ ಮಂಜೂರಾತಿಗಾಗಿ ವಿದ್ಯಾರ್ಥಿಗಳು ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ ತಮ್ಮ ವಿವರಗಳನ್ನು ನೋಂದಾಯಿಸಿಕೊಂಡು ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಸಲ್ಲಿಸಬೇಕಾಗುತ್ತದೆ. ವಿದ್ಯಾರ್ಥಿ ಅರ್ಜಿ ಸಲ್ಲಿಸಿದ ನಂತರ ಕಾಲೇಜಿನಿಂದ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳ ವಿವರ ವನ್ನು ವಿಶ್ವವಿದ್ಯಾಲಯ ಮೂಲಕ ಎಸ್‌ಎಸ್ ಪಿ ವಿಭಾಗಕ್ಕೆ ಕಳುಹಿಸಲಾಗುತ್ತದೆ.

ಪ್ರಸ್ತುತ ಎಸ್‌ಎಸ್‌ಪಿ ಪೋರ್ಟಲ್‌ನಲ್ಲಿ 2020-21 ಹಾಗು 2021-22ನೇ ಸಾಲಿನ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಸ್ವೀಕರಿಸಲಾಗುತ್ತಿದೆ. ವಿದ್ಯಾರ್ಥಿಗಳು ಕಾರಣಾಂತರದಿಂದ 2019-20ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಲು ವಿಫಲ ರಾಗಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೂ ವಿಶೇಷ ಅಭಿಯಾನದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುವುದು.

2021-22ನೇ ಸಾಲಿನಿಂದ ವಿದ್ಯಾರ್ಥಿವೇತನಕ್ಕೆ ಎಸ್‌ಎಸ್‌ಪಿ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಪೋರ್ಟಲ್‌ನಿಂದ ಫ್ರೀಶಿಪ್ ಕಾರ್ಡ್ ಡೌನ್‌ಲೋಡ್ ಮಾಡಿಕೊಂಡು ಅದನ್ನು ಕಾಲೇಜಿನಲ್ಲಿ ನೀಡಿ ಉಚಿತ ಶಿಕ್ಷಣ ಪಡೆಯಬಹುದು. ವಿದ್ಯಾರ್ಥಿವೇತನ ಮಂಜೂರಾಗುವ ಮೊದಲು ಕಾಲೇಜು ಶುಲ್ಕ ಪಾವತಿಸುವಂತೆ ಕಾಲೇಜುಗಳು ಒತ್ತಡ ಹೇರುವಂತಿಲ್ಲ.

ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆಯಡಿ 7470 ವಿದ್ಯಾರ್ಥಿಗಳಿಗೆ ಒಟ್ಟು 90 ಲಕ್ಷ ರೂ. ವಿದ್ಯಾರ್ಥಿ ವೇತನ ಮಂಜೂರು ಮಾಡಲಾಗಿದೆ. ಅಲ್ಲದೇ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಯೋಜನೆಯಡಿ 2037 ವಿದ್ಯಾರ್ಥಿಗಳಿಗೆ ಒಟ್ಟು 152.79 ಲಕ್ಷರೂ. ವಿದ್ಯಾರ್ಥಿವೇತನ ಮಂಜೂರು ಮಾಡಲಾಗಿದೆ.

ಬಹುಮಾನ ಹಣ: ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣ ರಾದ ಪ.ಜಾತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಈ ಕೆಳಕಂಡಂತೆ ಬಹುಮಾನ ಹಣ ಮಂಜೂರು ಮಾಡಲಾಗುತ್ತಿದೆ. ದ್ವಿತೀಯ ಪಿಯುಸಿ (20,000ರೂ.), ಅಂತಿಮ ಪದವಿ ತರಗತಿ (25,000ರೂ.), ಎಲ್ಲಾ ತರಹದ ಸ್ನಾತಕೋತ್ತರ ಪದವಿ (30,000), ವೃತ್ತಿ ಶಿಕ್ಷಣ (ಬಿ.ಇ. ಮೆಡಿಕಲ್-35,000ರೂ.)

ಬಹುಮಾನ ಹಣ ಮಂಜೂರಾತಿಗಾಗಿ ಆನ್‌ಲೈನ್ ಮುಖಾಂತರ -www.sw.kar.nic.in- ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿ ಅರ್ಜಿಯನ್ನು ಪ್ರಾಂಶುಪಾಲರಿಂದ ಧೃಢೀಕರಿಸಿ ಕೊಂಡು ಜಿಲ್ಲಾ ಸಮಾಜ ಕಲ್ಯಾಣ ಕಛೇರಿಗೆ ದಾಖಲೆಗಳನ್ನು ಸಲ್ಲಿಸಬೇಕು. ಉಡುಪಿ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 629 ವಿದ್ಯಾರ್ಥಿಗಳಿಗೆ ಒಟ್ಟು 142.15 ಲಕ್ಷ ರೂ. ಬಹುಮಾನ ಹಣ ಮಂಜೂರು ಮಾಡಲಾಗಿದೆ.

ಅಂತರ್ಜಾತಿ ವಿವಾಹಿತ ದಂಪತಿಗೆ ಪ್ರೋತ್ಸಾಹಧನ: ಪ.ಜಾತಿಯ ಹೆಣ್ಣು ಹಿಂದೂ ಧರ್ಮದ ಇತರೇ ಸವರ್ಣೀಯ ಜನಾಂಗದ ಗಂಡನ್ನು ವಿವಾಹ ವಾದಲ್ಲಿ ಮೂರು ಲಕ್ಷರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. (ವಯೋಮಿತಿ 18ರಿಂದ 42 ವರ್ಷದೊಳಗಿನವರು). ಪ.ಜಾತಿಯ ಗಂಡು ಹಿಂದೂ ಧರ್ಮದ ಇತರೇ ಸವರ್ಣೀಯ ಜನಾಂಗದ ಹೆಣ್ಣನ್ನು ಅಂತರ್‌ಜಾತಿ ವಿವಾಹವಾದಲ್ಲಿ ಎರಡು ಲಕ್ಷ ರೂ.ಗಳ ಪ್ರೋತ್ಸಾಹಧನ ನೀಡಲಾಗುತ್ತದೆ. (ವಯೋಮಿತಿ 21 ರಿಂದ 45 ವರ್ಷ). ವಿವಾಹವಾದ 18 ತಿಂಗಳೊಳಗೆ ಆನ್‌ಲೈನ್ ಮೂಲಕ -www.sw.kar.nic.in- ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಉಡುಪಿ ಜಿಲ್ಲೆ ಯಲ್ಲಿ 2020-21ನೇ ಸಾಲಿನಲ್ಲಿ 34 ದಂಪತಿಗಳಿಗೆ ಒಟ್ಟು 95 ಲಕ್ಷ ರೂ. ಪ್ರೋತ್ಸಾಹಧನವನ್ನು ಮಂಜೂರು ಮಾಡಲಾಗಿದೆ.

ಮರು ಮದುವೆಯಾಗುವ ಪ.ಜಾತಿಯ ವಿಧವೆಯರಿಗೆ ಮೂರು ಲಕ್ಷ ರೂ. ಪ್ರೊತ್ಸಾಹಧನವನ್ನು ನೀಡಲಾಗುತ್ತದೆ. ಇದಕ್ಕಾಗಿ ಕಾನೂನು ಬದ್ಧವಾಗಿ ವಿವಾಹ ವಾಗಿರುವ ಬಗ್ಗೆ ಸಬ್ ರಿಜಿಸ್ಟ್ರಾರ್ ಕಛೇರಿಯಲ್ಲಿ ನೊಂದಾಯಿಸಿರಬೇಕು. ವಿಧವೆಯ ವಯೋಮಿತಿ ಕನಿಷ್ಟ 18 ವರ್ಷದಿಂದ ಗರಿಷ್ಟ 42 ವರ್ಷಗಳಾಗಿದ್ದು, ವರನಿಗೆ ಕನಿಷ್ಟ 21ವರ್ಷದಿಂದ 45 ವರ್ಷ ವಯಸ್ಸು ಆಗಿರಬೇಕು. ಮರುವಿವಾಹವಾದ ಒಂದು ವರ್ಷದೊಳಗೆ ಆನ್‌ಲೈನ್ ಮೂಲಕ -www.sw.kar.nic.in- ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು.

ಪರಿಶಿಷ್ಟಜಾತಿಯ ಒಳ ಪಂಗಡದೊಳಗೆ ಅಂತರ್‌ಜಾತಿ ವಿವಾಹವಾದ ದಂಪತಿಗೆ 2 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ದಂಪತಿಗಳ ವಾರ್ಷಿಕ ಆದಾಯ ರೂ. 2 ಲಕ್ಷ ಮೀರಿರಬಾರದು. ವಾಹವಾದ 18 ತಿಂಗಳೊಳಗೆ ಆನ್‌ಲೈನ್‌ನ -www.sw.kar.nic.in-ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಉಡುಪಿ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಮೂರು ದಂಪತಿಗಳಿಗೆ ಒಟ್ಟು 6 ಲಕ್ಷ ರೂ. ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ.

ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸರಳ ವಿವಾಹವಾದ ದಂಪತಿಗೆ 50,000ರೂ. ಪ್ರೋತ್ಸಾಹಧನ ನೀಡಲಾಗುತ್ತದೆ. ಕಾನೂನು ಬದ್ಧವಾಗಿ ವಿವಾಹ ವಾಗಿರುವ ಬಗ್ಗೆ ಸಬ್‌ರಿಜಿಸ್ಟ್ರಾರ್ ಕಛೇರಿಯಲ್ಲಿ ನೊಂದಾಯಿಸಿರಬೇಕು. ವಿವಾಹವಾದ ಒಂದು ವರ್ಷದೊಳಗೆ ಆನ್‌ಲೈನ್ ಮೂಲಕ -www.sw.kar.nic.in- ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬೇಕು. ಉಡುಪಿ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ ಒಬ್ಬ ದಂಪತಿಗೆ 50ಸಾವಿರ ರೂ.ಗಳ ಪ್ರೋತ್ಸಾಹಧನ ಮಂಜೂರು ಮಾಡಲಾಗಿದೆ.

ಈ ಅಭಿಯಾನದ ಯಶಸ್ವಿ ಅನುಷ್ಠಾನಕ್ಕೆ ಜಿಲ್ಲೆಯಾದ್ಯಂತ ಸಹಾಯ ವಾಣಿ ಕೇಂದ್ರಗಳನ್ನು ತೆರೆಯಲಾಗಿದ್ದು, ಅರ್ಜಿ ಸಲ್ಲಿಸುವಾಗ ಯಾವುದೇ ತೊಂದರೆ/ಗೊಂದಲಗಳಿದ್ದಲ್ಲಿ, ಯೋಜನೆಯ ಕುರಿತು ಹೆಚ್ಚಿನ ಮಾಹಿತಿ ನೀಡಲು ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಉಡುಪಿ (0820-2528884, 9480843209, 9740736224, 9741928762, 9535201383), ಕುಂದಾಪುರ (08254-298089, 9480843208, 7892690170, 9611819430) ಹಾಗು ಕಾರ್ಕಳ (08258-232133, 9480843207, 9731168878) ಇಲ್ಲಿನ ಸಹಾಯವಾಣಿ ಕೇಂದ್ರಗಳನ್ನು ಸಂಪರ್ಕಿಸಬಹುದು. ವಿದ್ಯಾರ್ಥಿವೇತನ ಅರ್ಜಿ ಸಲ್ಲಿಸುವಲ್ಲಿ ಹಾಗು ಕಾಲೇಜುಗಳಿಂದ ವಿದ್ಯಾರ್ಥಿಗಳ ವಿವರ ಸಲ್ಲಿಸುವಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸಲು ಕೂಡಾ ಈ ಸಹಾಯವಾಣಿ ಕೇಂದ್ರಗಳು ಸಹಕಾರ ನೀಡಲಿವೆ.

ಅಭಿಯಾನದಲ್ಲಿ ಈ ಮೇಲಿನ ಸೌಲಭ್ಯಗಳನ್ನು ಪಡೆಯಲು ಅರ್ಹ ಪರಿಶಿಷ್ಟ ಜಾತಿಯ ಎಲ್ಲಾ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಜಿಲ್ಲೆಗೆ ಯಾವುದೇ ನಿಗದಿತ ಗುರಿ ಇಲ್ಲವಾಗಿದ್ದು, ಅರ್ಜಿ ಸಲ್ಲಿಸುವ ಅರ್ಹ ಎಲ್ಲರಿಗೂ ವಿವಿಧ ಸೌಲಭ್ಯಗಳನ್ನು ಮಂಜೂರು ಮಾಡಲಾಗುವುದು. ಆದ್ದರಿಂದ ಜಿಲ್ಲೆಯ ಪ. ಜಾತಿಯ ಜನತೆ ಈ ಸುವರ್ಣಾವಕಾಶವನ್ನು ಸದುಪಯೋಗ ಪಡಿಸಿಕೊಂಡು, ಈ ಅವಧಿಯಲ್ಲಿ ಅತ್ಯಂತ ಗರಿಷ್ಠ ಪ್ರಮಾಣದ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಉಡುಪಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತಾ ಮಡ್ಲೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X