Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ...

ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ.ವಂಚಿಸಿದ ಪ್ರಕರಣ; ಆರೋಪಿ ಬ್ಯಾಂಕ್ ಸಿಬ್ಬಂದಿಗೆ 4 ವರ್ಷ ಸಜೆ, ದಂಡ

ವಾರ್ತಾಭಾರತಿವಾರ್ತಾಭಾರತಿ10 Nov 2021 9:19 PM IST
share
ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ.ವಂಚಿಸಿದ ಪ್ರಕರಣ; ಆರೋಪಿ ಬ್ಯಾಂಕ್ ಸಿಬ್ಬಂದಿಗೆ 4 ವರ್ಷ ಸಜೆ, ದಂಡ

ಮಂಗಳೂರು, ನ.10: ನಿವೃತ್ತ ಶಿಕ್ಷಕಿಯೋರ್ವರ ಬ್ಯಾಂಕ್ ಖಾತೆಗೆ ಸಂಬಂಧಿಸಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಲಕ್ಷಾಂತರ ರೂ. ವಂಚಿಸಿದ ಬ್ಯಾಂಕ್ ಸಿಬ್ಬಂದಿಗೆ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಟಿ.ಪಿ.ರಾಮಲಿಂಗೇಗೌಡ ಅವರು 4 ವರ್ಷಗಳ ಸಜೆ ಹಾಗೂ 15,000 ರೂ.ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಬ್ಯಾಂಕ್ ಉದ್ಯೋಗಿ ಗ್ರೇಸ್ ಫೆರ್ನಾಂಡಿಸ್ ಶಿಕ್ಷೆಗೊಳಗಾದವರು. ಈಕೆ ತೆರೆಸಾ ಡಿಸೋಜಾ ಎಂಬವರಿಗೆ 5 ಲಕ್ಷ ರೂ.ಗಳಿಗೂ ಅಧಿಕ ವಂಚನೆ ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿವರ: ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ತೆರೆಸಾ ಡಿಸೋಜಾ 2006-07 ಮತ್ತು 2008-09ನೇ ವರ್ಷದಲ್ಲಿ ತಮ್ಮ ಪಿಂಚಣಿ ಹಣ ಸೇರಿದಂತೆ ತನ್ನಲ್ಲಿದ್ದ ಮೊತ್ತವನ್ನು ನಗರದ ಮಿಲಾಗ್ರಿಸ್ ಸಮೀಪದ ರಾಷ್ಟ್ರೀಕೃತ ಬ್ಯಾಂಕ್‌ವೊಂದರ ಶಾಖೆಯಲ್ಲಿ ಠೇವಣಿಯಾಗಿ ಇಡಲು ಅದೇ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿರುವ ತನ್ನ ಪರಿಚಯದ ಗ್ರೇಸ್ ಫೆರ್ನಾಂಡಿಸ್‌ರ ಸಹಾಯ ಪಡೆದುಕೊಂಡಿದ್ದರು. ಗ್ರೇಸ್ ಫೆರ್ನಾಂಡಿಸ್‌ರ ಮೇಲೆ ನಂಬಿಕೆ ಇರಿಸಿ ಬ್ಯಾಂಕ್ ವ್ಯವಹಾರವನ್ನು ಅವರ ಮುಖಾಂತರವೇ ಮಾಡಿಕೊಳ್ಳುತ್ತಿದ್ದರು. ಬಳಿಕ ತೆರೆಸಾ ಡಿಸೋಜಾ ಚೆಕ್‌ಬುಕ್‌ನ್ನು ಕೂಡ ಗ್ರೇಸ್ ಅವರೇ ಪಡೆದುಕೊಂಡಿದ್ದರು. ಗ್ರೇಸ್ ಅವರು ಠೇವಣಿ ಇಡಲು ನೀಡಿದ ಮೊತ್ತದ ವಿವರವನ್ನು ಪಾಸ್‌ಬುಕ್‌ನಲ್ಲಿ ಕಂಪ್ಯೂಟರೀಕೃತವಾಗಿ ನೋಂದಣಿ ಮಾಡದೆ ಕೈಯಲ್ಲೇ ಬರೆದುಕೊಡುತ್ತಿದ್ದರು. ಬ್ಯಾಂಕ್ ಖಾತೆಗೆ ಹಾಕದೆ ವಂಚಿಸುತ್ತಿದ್ದರು. ತೆರೆಸಾ ಡಿಸೋಜ ಅವರು ಎಫ್‌ಡಿಗೆ ಹಾಕಲೆಂದು ಹಣ ನೀಡಿದಾಗ ಅದಕ್ಕೆ ನಕಲಿ ದಾಖಲೆ ಸೃಷ್ಟಿಸಿ ರಶೀದಿ ನೀಡಿದ್ದರು.

ವಂಚನೆ ಬೆಳಕಿಗೆ: ಒಮ್ಮೆ ತೆರೆಸಾ ಅವರು ಬ್ಯಾಂಕ್‌ಗೆ ಹೋದಾಗ ಅಂದು ಗ್ರೇಸ್ ಅವರು ಬ್ಯಾಂಕ್‌ನಲ್ಲಿ ಇರಲಿಲ್ಲ. ತೆರೆಸಾ ಅವರು ಬ್ಯಾಂಕ್‌ನಲ್ಲಿ ತನ್ನ ಖಾತೆಯ ಬಗ್ಗೆ ವಿಚಾರಿಸಿದಾಗ ಅವರ ಖಾತೆಯಲ್ಲಿ ಇರಬೇಕಾಗಿದ್ದ 5,46,650 ರೂ. ಬದಲು ಕೇವಲ 15,571 ರೂ. ಮಾತ್ರ ಇತ್ತು. ಈ ಬಗ್ಗೆ ತೆರೆಸಾ ಅವರು ಗ್ರೇಸ್ ಮನೆಗೆ ಹೋಗಿ ವಿಚಾರಿಸಿದಾಗ ಗ್ರೇಸ್ ಮತ್ತು ಆಕೆಯ ಪತಿ ಜೀವಬೆದರಿಕೆ ಹಾಕಿದ್ದರು. ಈ ಬಗ್ಗೆ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗ್ರೇಸ್ ಅವರನ್ನು ಉದ್ಯೋಗದಿಂದ ಅಮಾನತುಗೊಳಿಸಲಾಗಿತ್ತು. ಅಂದು ಇನ್‌ ಸ್ಪೆಕ್ಟರ್ ಆಗಿದ್ದ ವಿನಯ್‌ ಗಾಂವ್ಕರ್ ತನಿಖೆ ನಡೆಸಿ 2011ರ ಮಾ.14ರಂದು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳನ್ನು ದೋಷಮುಕ್ತಗೊಳಿಸಿತ್ತು. ವಿಚಾರಣಾ ನ್ಯಾಯಾಲಯದ ತೀರ್ಪಿನ ಬಗ್ಗೆ ಸರಕಾರ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ವಿಚಾರಣೆ ನಡೆಸಿದ ನ್ಯಾಯಾಲಯವು ಗ್ರೇಸ್ ಡಿಸೋಜ ಅಪರಾಧಿ ಎಂದು ತೀರ್ಪು ನೀಡಿದೆ. ಬ್ಯಾಂಕ್‌ನಿಂದ ದಾಖಲೆಗಳನ್ನು ಕಳವು ಮಾಡಿದ ಅಪರಾಧಕ್ಕೆ 2 ವರ್ಷ ಸಜೆ, 2,000 ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 2 ತಿಂಗಳು ಸಜೆ, ನಕಲಿ ದಾಖಲಿ ಸೃಷ್ಟಿಸಿರುವುದಕ್ಕೆ 1 ವರ್ಷ ಸಜೆ, 1 ಸಾವಿರ ರೂ. ದಂಡ, ದಂಡ ಪಾವತಿಸಲು ತಪ್ಪಿದರೆ 1 ತಿಂಗಳು ಸಜೆ, ನಕಲಿ ದಾಖಲೆಯನ್ನು ಅಸಲಿ ಎಂದು ನಂಬಿಸಿ ಬ್ಯಾಂಕ್ ಸಿಬ್ಬಂದಿ ಗ್ರಾಹಕರಿಗೆ ನಂಬಿಕೆ ದ್ರೋಹ, ವಂಚನೆ ಎಸಗಿರುವ ಅಪರಾಧಗಳಿಗೆ ತಲಾ ನಾಲ್ಕು ವರ್ಷ ಸಜೆ, 3 ಸಾವಿರ ರೂ. ದಂಡ, ದಂಡ ಪಾವತಿಸಲು ವಿಫಲವಾದರೆ 2 ತಿಂಗಳು ಸಜೆ ವಿಧಿಸಿ ತೀರ್ಪು ನೀಡಿದೆ. ಅಲ್ಲದೆ ತೆರೆಸಾ ಡಿಸೋಜಾ ಅವರಿಗೆ 10,000 ರೂ. ಪರಿಹಾರ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕ ಬಿ.ಶೇಖರ ಶೆಟ್ಟಿ ವಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X