Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹವಾಮಾನ ಬದಲಾವಣೆ ವಿಷಯದಲ್ಲಿ ಯುವಕರು...

ಹವಾಮಾನ ಬದಲಾವಣೆ ವಿಷಯದಲ್ಲಿ ಯುವಕರು ಮುಂದಾಳತ್ವ ವಹಿಸಿ: ಡಾ. ರಘು ಮುರ್ತುಗುಡ್ಡೆ

ವಾರ್ತಾಭಾರತಿವಾರ್ತಾಭಾರತಿ10 Nov 2021 9:29 PM IST
share
ಹವಾಮಾನ ಬದಲಾವಣೆ ವಿಷಯದಲ್ಲಿ ಯುವಕರು ಮುಂದಾಳತ್ವ ವಹಿಸಿ: ಡಾ. ರಘು ಮುರ್ತುಗುಡ್ಡೆ

ಮಣಿಪಾಲ, ನ.10: ಜಗತ್ತಿನ ಹವಾಮಾನ ಬದಲಾವಣೆಗೆ ಸಂಬಂಧಿಸಿದ ವಿಷಯಗಳಲ್ಲಿ ಯುವಜನತೆ ಮುಂದಾಳತ್ವ ವಹಿಸಬೇಕಾಗಿದೆ. ಈ ಸಂಬಂಧ ಇತ್ತೀಚೆಗೆ ಗ್ಲಾಸ್ಗೋದಲ್ಲಿ ನಡೆದ ಶೃಂಗಸಭೆಯ ಬೆಳವಣಿಗೆಗಳು ಮತ್ತು ಅದರ ನಿರ್ಣಯಗಳ ಅನುಷ್ಠಾನದ ಬಗ್ಗೆ ವಿದ್ಯಾರ್ಥಿಗಳು ಮತ್ತು ಯುವಜನರು ಗಮನ ಹರಿಸಬೇಕು ಎಂದು ಅಮೆರಿಕೆಯ ಮೇರಿಲ್ಯಾಂಡ್ ವಿಶ್ವವಿದ್ಯಾಲಯದ ವಾತಾವರಮ, ಸಾಗರ ವಿಜ್ಞಾನ ಹಾಗೂ ಭೂವಿಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ.ರಘು ಮುರ್ತುಗುಡ್ಡೆ ಕರೆ ನೀಡಿದ್ದಾರೆ.

ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸಾಯನ್ಸ್‌ನ ವಿದ್ಯಾರ್ಥಿಗಳು ಆಯೋಜಿಸಿದ್ದ ‘ಎಕೋಸ್ಪಾಟ್’ ಆನ್‌ಲೈನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ‘ಹವಾಮಾನ ಬದಲಾವಣೆ ಮತ್ತು ನಾವು ಮಾಡಬಹುದಾದದ್ದೇನು?’ ಎಂಬ ವಿಷಯದ ಕುರಿತು ಅವರು ಮಾತನಾಡಿದರು.

ಸುಸ್ಥಿರ ಜೀವನ ಶೈಲಿಯ ಹಲವಾರು ಉದಾಹರಣೆಗಳನ್ನು ಉಲ್ಲೇಖಿಸಿದ ಅವರು, ಆ ಮೂಲಕ ನಾವು ಒಟ್ಟಾರೆಯಾಗಿ ಇಂಗಾಲದ ಹೆಜ್ಜೆ ಗುರುತನ್ನು ಕಡಿಮೆ ಮಾಡಬಹುದು ಎಂದರು. ಇತ್ತೀಚಿನ ದಿನಗಳಲ್ಲಿ ಹವಾಮಾನ ಬದಲಾವಣೆಯ ವಿಷಯಗಳಲ್ಲಿ ಯುವಕರು ಹೆಚ್ಚು ಹೆಚ್ಚು ಆಸಕ್ತಿ ತೋರಿಸು ತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಹವಾಮಾನ ಒಪ್ಪಂದಗಳ ಮೇಲೆ ಜಾಗರೂಕರಾಗಿರಿ ಮತ್ತು ಸಂಬಂಧಿತರ ಮೇಲೆ ಒತ್ತಡವನ್ನು ಹೇರುವಂತೆ ಕೇಳಿಕೊಂಡರು.

ಇದರಿಂದ ಸಾಮೂಹಿಕವಾಗಿ ನಾವು ಬದಲಾವಣೆಯನ್ನು ಮಾಡಬಹುದು. ಹವಾಮಾನ ವೈಪರೀತ್ಯದ ಪರಿಹಾರ ತಕ್ಷಣವೇ ದೊರಕದು. ಬದಲಾಗಿ ಪ್ರತಿಯೊಬ್ಬರೂ ಸತತವಾಗಿ ಬಹುಕಾಲ ಪ್ರಯತ್ನಿಸುವುದರಿಂದ ಮಾತ್ರವೇ ಪರಿಹಾರವನ್ನು ಕಂಡುಕೊಳ್ಳಲು ಸಾಧ್ಯ ಎಂದು ಡಾ.ರಘು ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಸಿಪಿಎಎಸ್‌ನ ನಿರ್ದೇಶಕ ಪ್ರೊ. ವರದೇಶ್ ಹಿರೇಗಂಗೆ, ವಿಜ್ಞಾನಿಗಳು, ಪರಿಸರ ಶಾಸ್ತ್ರಜ್ಞರು ಮತ್ತು ಹವಾಮಾನ ಬದಲಾವಣೆಯಿಂದ ನೇರ ಪರಿಣಾಮಕ್ಕೊಳಗಾದವರ ನಡುವೆ ಸಂವಾದ ನಡೆಯಬೇಕು. ಇದರಲ್ಲಿ ಕೆಲವು ಭಿನ್ನಾಭಿಪ್ರಾಯಗಳು ಮೂಡಬಹುದು, ಆದರೆ ವೈಜ್ಞಾನಿಕ ದೃಷ್ಟಿಕೋನವು ಈ ವಿಷಯದಲ್ಲಿ ಅತೀ ಮಹತ್ವವಾದದ್ದು ಎಂದರು.

ಸಂಸ್ಥೆಯ ಶ್ರವಣ್ ಬಾಸ್ರಿ ಕಾರ್ಯಕ್ರಮ ನಿರೂಪಿಸಿದರು. ಚಿನ್ಮಯಿ ಬಾಳ್ಕರ್ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಆಲಿಸ್ ಚೌಹಾಣ್ ಇಕೋಸ್ಪಾಟ್ ಕುರಿತು ಮಾಹಿತಿ ನೀಡಿದರು. ಮನಸ್ವಿನಿ ಶ್ರೀರಂಗಂ ವಂದಿಸಿದರು. ಸಂಸ್ಥೆಯ ಬಿಎ- ಏಸ್ತೆಟಿಕ್ಸ್ ಆ್ಯಂಡ್ ಪೀಸ್ ಸ್ಟಡೀಸ್‌ನ ವಿದ್ಯಾರ್ಥಿಗಳು ತಮ್ಮ ’ಇಕೋಸ್ಪಾಟ್’ ಸರಣಿ ಭಾಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು.

ಶೇ.1ರಷ್ಟು ಜನತೆ ಶೇ.74 ಇಂಗಾಲ ಉತ್ಪತ್ತಿಗೆ ಕಾರಣ

ಜಗತ್ತಿನಲ್ಲಿ ಅಧಿಕ ಆದಾಯ ಹೊಂದಿರುವ ಕೇವಲ ಶೇ.1ರಷ್ಟಿರುವ ಜನಸಂಖ್ಯೆ ಸರಿಸುಮಾರು ಶೇ.74ರಷ್ಟು ವಾರ್ಷಿಕ ಇಂಗಾಲದ ಉತ್ಪತ್ತಿಗೆ ಕಾರಣವಾಗಿದ್ದಾರೆ ಎಂದು ಮೇರಿಲ್ಯಾಂಡ್ ವಿವಿಯ ಹವಾಮಾನ ತಜ್ಞ ಡಾ.ರಘು ಮುರ್ತುಗುಡ್ಡೆ ತಿಳಿಸಿದರು.

ಇದರಿಂದಾಗಿ ಕಡಿಮೆ ಆದಾಯ ಹೊಂದಿರುವ ಹಾಗೂ ಬಡತನದ ರೇಖೆಗೆ ಕೆಳಗಿರುವ ಶೇ.50ಕ್ಕೂ ಅಧಿಕ ಜನಸಂಖ್ಯೆ ಈ ಮೂಲಕ ಉಂಟಾಗುವ ಹವಾಮಾನ ವೈಪರೀತ್ಯದ ಪರಿಣಾಮಗನ್ನು ಅನುಭವಿಸುತಿದ್ದಾರೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X