ಬೊಲೇರೋ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು
ಹೆಬ್ರಿ, ನ.10: ಮಹೇಂದ್ರ ಬೊಲೇರೋ ವಾಹನ ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸವಾರ ಮೃತಪಟ್ಟ ಘಟನೆ ನ.9ರಂದು ನಾಲ್ಕೂರು ಗ್ರಾಮದ ಕೈಯೆಟ್ಟು ಜಂಕ್ಷನ್ ಬಳಿ ನಡೆದಿದೆ.
ಮೃತರನ್ನು ಬೈಕ್ ಸವಾರ ಚಂದ್ರಶೇಖರಪ್ಪ ಹೊಸಳ್ಳಿ(31) ಎಂದು ಗುರುತಿಸ ಲಾಗಿದೆ. ಸಹಸವಾರ ಮಹೇಶ್ ಎಂಬವರು ತೀವ್ರವಾಗಿ ಗಾಯಗೊಂಡು ಆ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮುದ್ದೂರು ಕಡೆಯಿಂದ ಕೊಕ್ಕರ್ಣೆ ಕಡೆಗೆ ಹೋಗುತ್ತಿದ್ದ ಬೈಕಿಗೆ ಎದುರು ಗಡೆಯಿಂದ ಬಂದ ಮಹೇಂದ್ರ ಬೊಲೇರೋ ವಾಹನ ಢಿಕ್ಕಿ ಹೊಡೆಯಿತು. ಇದರಿಂದ ಸವಾರಿಬ್ಬರೂ ಬೈಕ್ ಸಮೇತ ರಸ್ತೆಗೆ ಬಿದ್ದರೆನ್ನಲಾಗಿದೆ. ಇದರಲ್ಲಿ ಗಂಭೀರವಾಗಿ ಗಾಯಗೊಂಡ ಸವಾರ ಚಂದ್ರಶೇಖರ ಹೊಸಳ್ಳಿ ಸ್ಥಳದಲ್ಲಿಯೇ ಮೃತಪಟ್ಟರು.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story