ಮಂಗಳೂರು: ಟ್ಯಾಂಕರ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು
![ಮಂಗಳೂರು: ಟ್ಯಾಂಕರ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು ಮಂಗಳೂರು: ಟ್ಯಾಂಕರ್ ಢಿಕ್ಕಿ; ಸ್ಕೂಟರ್ ಸವಾರ ಮೃತ್ಯು](https://www.varthabharati.in/sites/default/files/images/articles/2021/11/11/313401-1636637001.gif)
ಮಂಗಳೂರು, ನ.11: ಟ್ಯಾಂಕರೊಂದು ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಪಣಂಬೂರು ಸರ್ಕಲ್ ಬಳಿ ಗುರುವಾರ ಬೆಳಗ್ಗೆ ನಡೆದಿದೆ.
ಮೃತರನ್ನು ಕೂಳೂರು ನಿವಾಸಿ ಉದ್ಯಮಿ ಯು.ಕೆ.ಅಬ್ದುರ್ರಹೀಂ(63) ಎಂದು ಗುರುತಿಸಲಾಗಿದೆ.
ಅಬ್ದುರ್ರಹೀಂ ತನ್ನ ಮನೆಯಿಂದ ಸ್ಕೂಟರ್ನಲ್ಲಿ ಬೈಕಂಪಾಡಿ ಹೋಗುವ ಮಧ್ಯೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡ ಅವರನ್ನು ಪೊಲೀಸರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸುವ ಮುನ್ನವೇ ಅವರು ಮೃತಪಟ್ಟಿದ್ದಾರೆ.
ಮೃತರು ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story