Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇಲ್ಜಾತಿಯ ಯುವತಿಯೊಂದಿಗಿನ ಪ್ರೀತಿಯ...

ಮೇಲ್ಜಾತಿಯ ಯುವತಿಯೊಂದಿಗಿನ ಪ್ರೀತಿಯ ಕಾರಣಕ್ಕೆ ದಲಿತ ಯುವಕನ ಹತ್ಯೆ: ಕುಟುಂಬ ಆರೋಪ

ವಾರ್ತಾಭಾರತಿವಾರ್ತಾಭಾರತಿ11 Nov 2021 4:23 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೇಲ್ಜಾತಿಯ ಯುವತಿಯೊಂದಿಗಿನ ಪ್ರೀತಿಯ ಕಾರಣಕ್ಕೆ ದಲಿತ ಯುವಕನ ಹತ್ಯೆ: ಕುಟುಂಬ ಆರೋಪ

ಚೆನ್ನೈ, ನ. 11: ಆದಿ ದ್ರಾವಿಡ ಸಮುದಾಯಕ್ಕೆ ಸೇರಿದ 27 ವರ್ಷದ ದಲಿತ ಯುವಕನ ಮೃತದೇಹ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ನಾಗರಕೊಯಿಲ್ನಲ್ಲಿ ಮಂಗಳವಾರ ಪತ್ತೆಯಾಗಿದೆ.

ಆದರೆ, ಮೇಲ್ಜಾತಿಯ ವೆಲ್ಲಾಲರ್ ಸಮುದಾಯಕ್ಕೆ ಸೇರಿದ ಯುವತಿಯೊಂದಿಗಿನ ಪ್ರೇಮ ಸಂಬಂಧದ ಕಾರಣಕ್ಕೆ ಆತನನ್ನು ಹತ್ಯೆಗೈಯಲಾಗಿದೆ ಎಂದು ಯುವಕನ ಕುಟುಂಬ ಆರೋಪಿಸಿದೆ.
 
ಕೊಲೆ ಪ್ರಕರಣ ದಾಖಲಿಸುವ ವರೆಗೆ ಮೃತದೇಹವನ್ನು ಸ್ವೀಕರಿಸುವುದಿಲ್ಲ ಎಂದು ಯುವಕನ ಕುಟುಂಬ ಹೇಳಿದೆ. ಅಲ್ಲದೆ, ಜಾತಿ ಆಧಾರಿತ ದೌರ್ಜನ್ಯದ ಕುರಿತು ತನಿಖೆ ನಡೆಸಬೇಕು ಎಂದು ಕುಟುಂಬ ಆಗ್ರಹಿಸಿದೆ. ಯುವಕನ ಸಾವಿನ ಕುರಿತಂತೆ ಪೊಲೀಸರು ಇನ್ನಷ್ಟೇ ಎಫ್ಐಆರ್ ದಾಖಲಿಸಬೇಕಾಗಿದೆ.

ಮೃತಪಟ್ಟ ಯುವಕ ಸುರೇಶ್ ಕುಮಾರ್ ಕನ್ಯಾಕುಮಾರಿ ಜಿಲ್ಲೆಯ ನಾಗರಕೊಯಿಲ್ ಸಮೀಪದ ಥೊವಲ್ಲಾಯಿ ಪ್ರದೇಶದ ನಿವಾಸಿ. ಈತ ಸಾಂಬವರ್ ಜಾತಿಗೆ ಸೇರಿದ್ದಾನೆ. ಈತನಿಗೆ ಕಾಲೇಜು ದಿನಗಳಿಂದಲೇ ಕತ್ತುಪುತ್ತೂರಿನ ಯುವತಿಯೊಂದಿಗೆ ಪ್ರೇಮ ಇತ್ತು. ಅವರು ವಿವಾಹವಾಗಲು ನಿರ್ಧರಿಸಿದ್ದರು. ಆದರೆ, ಸುರೇಶ್ ಕುಮಾರ್ನ ಜಾತಿಯ ಕಾರಣಕ್ಕೆ ಯುವತಿಯ ಹೆತ್ತವರು ವಿವಾಹಕ್ಕೆ ವಿರೋಧ ವ್ಯಕ್ತಪಡಿಸಿದ್ದರು.

ಸುರೇಶ್ ನ ಹಿರಿಯ ಸಹೋದರ ಸುಮನ್ ಪುದುಪಾಂಡಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ ದೂರಿಲ್ಲಿ ಯುವತಿಯೊಂದಿಗಿನ ಸುರೇಶ್ ನ ಪ್ರೇಮ ಸಂಬಂಧದ ಕುರಿತು ಕುಟುಂಬಕ್ಕೆ ಅರಿವಿತ್ತು ಎಂದು ಹೇಳಲಾಗಿದೆ.
  
ಸೆಪ್ಟಂಬರ್ ನಲ್ಲಿ ತನ್ನನ್ನು ಭೇಟಿಯಾಗುವಂತೆ ಯುವತಿ ಸುರೇಶನಿಗೆ ತಿಳಿಸಿದ್ದಳು. ಭೇಟಿಯಾದ ಸುರೇಶನಲ್ಲಿ ಯುವತಿ ವಿವಾಹದ ಕುರಿತ ತನ್ನ ಕುಟುಂಬದಲ್ಲಿ ಮಾತನಾಡಲು ನಿಮ್ಮ ಕುಟುಂಬವನ್ನು ತಮ್ಮ ಮನೆಗೆ ಕರೆದುಕೊಂಡು ಬರುವಂತೆ ತಿಳಿಸಿದ್ದಳು. ತನ್ನ ಕುಟುಂಬ ತನ್ನ ಇಚ್ಛೆಗೆ ವಿರುದ್ಧವಾಗಿ ವಿವಾಹ ನಡೆಸಲು ವರನ ಅನ್ವೇಷಣೆಯಲ್ಲಿ ತೊಡಗಿದೆ ಎಂದು ಯುವತಿ ಸುಮನ್ಗೆ ತಿಳಿಸಿದ್ದಳು. 

ಸುರೇಶನ ಜಾತಿಯ ಕಾರಣಕ್ಕೆ ತಾವು ವಿವಾಹವಾಗಲು ಮನೆಯವರು ಒಪ್ಪಿಕೊಳ್ಳುತ್ತಿಲ್ಲ ಎಂದು ಕೂಡ ಯುವತಿ ಸುಮನ್ ಗೆ ಮಾಹಿತಿ ನೀಡಿದ್ದಳು. ತನ್ನ ಕುಟುಂಬವನ್ನು ಭೇಟಿಯಾಗುವಂತೆ ಸುಮನ್ ಹಾಗೂ ಕುಟುಂಬದವರಲ್ಲಿ ಕೂಡ ಯುವತಿ ಹೇಳಿದ್ದಳು. ಒಂದು ವೇಳೆ ಅವರು ಒಪ್ಪದೇ ಇದ್ದರೆ, ತಾನು ಸುಮನ್ ಕುಟುಂಬದ ಜೊತೆ ಜೀವಿಸುವುದಾಗಿ ಆಕೆ ತಿಳಿಸಿದ್ದಳು ಎಂದು ಸುಮನ್ ಸಲ್ಲಿಸಿದ ದೂರಿನಲ್ಲಿ ಹೇಳಲಾಗಿದೆ.
ಯುವತಿಯ ಮನವಿಗೆ ಸುಮನ್, ತನ್ನ ಕುಟುಂಬದೊಂದಿಗೆ ಮಾತುಕತೆ ನಡೆಸಿದ ಬಳಿಕ ಕರೆದುಕೊಂಡು ಹೋಗುವುದಾಗಿ ಯುವತಿಗೆ ತಿಳಿಸಿದ್ದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X