Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮದ್ರಾಸ್ ಹೈಕೋರ್ಟ್ ಮುಖ್ಯ...

ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ 237 ವಕೀಲರಿಂದ ಸಿಜೆಐ ಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ12 Nov 2021 4:47 PM IST
share
ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ 237 ವಕೀಲರಿಂದ ಸಿಜೆಐ ಗೆ ಪತ್ರ

ಹೊಸದಿಲ್ಲಿ: ಮದ್ರಾಸ್ ಹೈಕೋರ್ಟ್‍ನ 237 ವಕೀಲರು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಹಾಗೂ ಕೊಲೀಜಿಯಂಗೆ ಪತ್ರ ಬರೆದು ಜಸ್ಟಿಸ್ ಸಂಜಿಬ್ ಬ್ಯಾನರ್ಜಿ ಅವರ ವರ್ಗಾವಣೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಮದ್ರಾಸ್ ಹೈಕೋರ್ಟಿನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದ ಜಸ್ಟಿಸ್ ಬ್ಯಾನರ್ಜಿ ಅವರನ್ನು ಮೇಘಾಲಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾಗಿ ವರ್ಗಾವಣೆ ಮಾಡಲು ಕೊಲೀಜಿಯಂ ಶಿಫಾರಸು ಮಾಡಿತ್ತು.

ಜಸ್ಟಿಸ್ ಬ್ಯಾನರ್ಜಿ ಅವರ ನಂತರದ ಇಬ್ಬರು ಹಿರಿಯ ನ್ಯಾಯಾಧೀಶರುಗಳಲ್ಲಿ ಒಬ್ಬರನ್ನು ಇತ್ತೀಚೆಗೆ ಸುಪ್ರೀಂ ಕೋರ್ಟಿಗೆ ವರ್ಗಾಯಿಸಿ ಭಡ್ತಿ ನೀಡಲಾಗಿದ್ದರೆ ಇನ್ನೊಬ್ಬರನ್ನು ಕೊಲ್ಕತ್ತಾ ಹೈಕೋರ್ಟಿಗೆ ವರ್ಗಾಯಿಸಲಾಗಿದೆ ಎಂದು ಪತ್ರದಲ್ಲಿ ವಿವರಿಸಲಾಗಿದೆಯಲ್ಲದೆ ಜಸ್ಟಿಸ್ ಬ್ಯಾನರ್ಜಿ ಅವರಂತಹ ಸಮರ್ಥ ಮುಖ್ಯ ನ್ಯಾಯಮೂರ್ತಿಗಳ ಸೇವೆ ತಿಂಗಳಿಗೆ  ಕೇವಲ 70-75 ಪ್ರಕರಣಗಳನ್ನು ಪಡೆಯುವ ಮೇಘಾಲಯ ಹೈಕೋರ್ಟಿಗೆ ಅಗತ್ಯವಿದೆಯೇ ಎಂದು ಪತ್ರ ಪ್ರಶ್ನಿಸಿದೆ. ಮದ್ರಾಸ್ ಹೈಕೋರ್ಟ್ ವರ್ಷಕ್ಕೆ 35,000 ರಷ್ಟು ಪ್ರಕರಣಗಳನ್ನು ಪಡೆಯುತ್ತಿದೆ ಎಂದು ಪತ್ರ ವಿವರಿಸಿದೆ.

ವರ್ಗಾವಣೆಗೆ ಕೊಲೀಜಿಯಂ ಕಾರಣ ನೀಡುವುದಿಲ್ಲವಾದ ಕಾರಣ ಒಬ್ಬ ನಿರ್ದಿಷ್ಟ ನ್ಯಾಯಾಧೀಶರನ್ನು ಏಕೆ ವರ್ಗಾಯಿಸಲಾಗಿದೆ ಎಂಬ ಕುರಿತು ಊಹಾಪೋಹಗಳಿಗೆ ಕಾರಣವಾಗುತ್ತದೆ ಹಾಗೂ ಒಬ್ಬ ಪ್ರಾಮಾಣಿಕ ನ್ಯಾಯಾಧೀಶರ ಖ್ಯಾತಿಗೆ ಇದು ಧಕ್ಕೆ ತರುತ್ತದೆ ಎಂದು ಪತ್ರದಲ್ಲಿ ಹೇಳಲಾಗಿದೆ.

ಜಸ್ಟಿಸ್ ಬ್ಯಾನರ್ಜಿ ಅವರು ತಮ್ಮ ನೇರ ನಡೆನುಡಿಗಳಿಗೆ ಖ್ಯಾತರಾದವರಲ್ಲದೆ ಅವರ ಕೆಲವೊಂದು ತೀರ್ಪುಗಳು ಮಹತ್ವವನ್ನು ಪಡೆಯುವುದರ ಜತೆಗೆ ಕೆಲವು ವಿವಾದಕ್ಕೂ ಈಡಾಗಿದೆ. ಮೇಲಾಗಿ ಯಾವುದೇ ಕರ್ತವ್ಯಲೋಪಕ್ಕೆ ಸಂಬಂಧಿಸಿದಂತೆ ಸರಕಾರಿ ಏಜನ್ಸಿಗಳನ್ನು ತರಾಟೆಗೆ ತೆಗೆದುಕೊಳ್ಳಲು ಅವರು ಹಿಂಜರಿಯುತ್ತಿರಲಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X