Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಭೂಪ್ರದೇಶದಲ್ಲಿ ಚೀನಾ ಗ್ರಾಮವನ್ನು...

ಭಾರತದ ಭೂಪ್ರದೇಶದಲ್ಲಿ ಚೀನಾ ಗ್ರಾಮವನ್ನು ನಿರ್ಮಿಸಿರುವ ವರದಿಗಳು ನಿಜವಲ್ಲ:ಜ.ರಾವತ್

ವಾರ್ತಾಭಾರತಿವಾರ್ತಾಭಾರತಿ12 Nov 2021 9:26 PM IST
share
ಭಾರತದ ಭೂಪ್ರದೇಶದಲ್ಲಿ ಚೀನಾ ಗ್ರಾಮವನ್ನು ನಿರ್ಮಿಸಿರುವ ವರದಿಗಳು ನಿಜವಲ್ಲ:ಜ.ರಾವತ್

ಹೊಸದಿಲ್ಲಿ,ನ.12: ಚೀನಾ ಭಾರತೀಯ ಭೂಪ್ರದೇಶದಲ್ಲಿ ಗ್ರಾಮವೊಂದನ್ನು ನಿರ್ಮಿಸಿದೆ ಎಂಬ ವರದಿಗಳನ್ನು ಸೇನಾ ಸಿಬ್ಬಂದಿಗಳ ಮುಖ್ಯಸ್ಥ (ಸಿಡಿಎಸ್) ಜ.ಬಿಪಿನ್ ರಾವತ್ ಅವರು ನಿರಾಕರಿಸಿದ್ದಾರೆ.

ಆದಾಗ್ಯೂ ಚೀನಾ ವಾಸ್ತವಿಕ ನಿಯಂತ್ರಣ ರೇಖೆ (ಎಲ್ಎಸಿ) ಯಲ್ಲಿ ನಿರ್ಮಾಣ ಕಾಮಗಾರಿಯನ್ನು ನಡೆಸಿದೆ ಎಂದು ಒಪ್ಪಿಕೊಂಡ ಅವರು,ಆದರೆ ಅದು ಚೀನಾದ ಭೂಪ್ರದೇಶದಲ್ಲಿದೆ ಎಂದು ಹೇಳಿದರು.

 ಟೈಮ್ಸ್ ನೌ ಶೃಂಗಸಭೆಯಲ್ಲಿ ಮಾತನಾಡುತ್ತಿದ್ದ ಅವರು,‘ಚೀನಾ ವಿಶೇಷವಾಗಿ ಇತ್ತೀಚಿನ ನಮ್ಮ ಮುಖಾಮುಖಿಯ ಬಳಿಕ ಬಹುಶಃ ಭವಿಷ್ಯದಲ್ಲಿ ಎಲ್ಎಸಿಯಲ್ಲಿ ತನ್ನ ನಾಗರಿಕರನ್ನು ಅಥವಾ ತನ್ನ ಸೇನೆಯನ್ನು ನೆಲೆಗೊಳಿಸಲು ಎಲ್ಎಸಿಯಲ್ಲಿ ಗ್ರಾಮಗಳನ್ನು ನಿರ್ಮಿಸುತ್ತಿದೆ. ಆದರೆ ಚೀನೀಯರು ನಮ್ಮ ಭೂಪ್ರದೇಶವನ್ನು ಅತಿಕ್ರಮಿಸಿ ಹೊಸ ಗ್ರಾಮವೊಂದನ್ನು ನಿರ್ಮಿಸಿದ್ದಾರೆ ಎಂಬ ಹಾಲಿ ವಿವಾದ ನಿಜವಲ್ಲ ’ ಎಂದು ತಿಳಿಸಿದರು.

ಚೀನಾ ಅರುಣಾಚಲ ಪ್ರದೇಶದಲ್ಲಿ ಸುಮಾರು 101 ಮನೆಗಳಿರುವ ಹೊಸ ಗ್ರಾಮವೊಂದನ್ನು ನಿರ್ಮಿಸಿದೆ ಎಂದು ಮಾಧ್ಯಮಗಳು ಜನವರಿಯಲ್ಲಿ ವರದಿ ಮಾಡಿದ್ದವು. ನವಂಬರ್ನಲ್ಲಿ ಅಮೆರಿಕದ ರಕ್ಷಣಾ ಇಲಾಖೆಯು ಬಿಡುಗಡೆಗೊಳಿಸಿದ್ದ ವರದಿಯೂ ಈ ಹೊಸಗ್ರಾಮವನ್ನು ಉಲ್ಲೇಖಿಸಿತ್ತು.

ಚೀನಿ ಸೈನಿಕರು ಪ್ರತ್ಯೇಕಗೊಂಡಿದ್ದಾರೆ,ಅವರು ಮುಖ್ಯಭೂಮಿಯಿಂದ ಸಾವಿರಾರು ಮೈಲುಗಳ ದೂರದಲ್ಲಿ ಬೀಡು ಬಿಟ್ಟಿದ್ದಾರೆ ಎಂದು ಹೇಳಿದ ರಾವತ್,‘ನಮ್ಮ ಯೋಧರು ವರ್ಷಕ್ಕೆ ಎರಡು ಅಥವಾ ಮೂರು ಸಲ ತಮ್ಮ ಮನೆಗಳಿಗೆ ತೆರಳುತ್ತಾರೆ. ಚೀನಿ ಸೈನಿಕರಿಗೆ ಆ ಸೌಲಭ್ಯವಿಲ್ಲ. ಹೀಗಾಗಿ ಚೀನಿಯರು ಎಲ್ಎಸಿಯ ತಮ್ಮ ಭೂಪ್ರದೇಶದಲ್ಲಿ ಇಂತಹ ಗ್ರಾಮಗಳನ್ನು ನಿರ್ಮಿಸುತ್ತಿದ್ದಾರೆ. ನಾವು ಪರಿಗಣಿಸಿರುವ ಎಲ್ಎಸಿಯನ್ನು ಅವರು ಎಲ್ಲಿಯೂ ಅತಿಕ್ರಮಿಸಿಲ್ಲ ’ಎಂದರು.
ಆದರೆ ವಿದೇಶಾಂಗ ವ್ಯವಹಾರಗಳ ಸಚಿವಾಲಯವು,ಚೀನಾ ದಶಕಗಳಿಂದಲೂ ಅಕ್ರಮವಾಗಿ ವಶಪಡಿಸಿಕೊಂಡಿರುವ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳನ್ನು ನಡೆಸುತ್ತಿದೆ ಎಂದು ಗುರುವಾರ ಹೇಳಿತ್ತು.

‘ಚೀನಾ ನಮ್ಮ ಭೂಪ್ರದೇಶವನ್ನು ಅತಿಕ್ರಮಿಸಿರುವುದನ್ನಾಗಲೀ ಅಥವಾ ಅದರ ಅಸಮರ್ಥನೀಯ ಹೇಳಿಕೆಗಳನ್ನಾಗಲೀ ಭಾರತವು ಎಂದೂ ಒಪ್ಪಿಕೊಂಡಿಲ್ಲ ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರವಿಂದ ಬಾಗ್ಚಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಭಾರತದ ಪೂರ್ವ ಭಾಗದಲ್ಲಿ ಚೀನಾ ನಿರ್ಮಾಣ ಚಟುವಟಿಕೆಗಳ ಕುರಿತು ಅಮೆರಿಕದ ರಕ್ಷಣಾ ಇಲಾಖೆಯ ವರದಿಯನ್ನು ಕೇಂದ್ರವು ಗಮನಿಸಿದೆ ಎಂದೂ ಬಾಗ್ಚಿ ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X