ಮುಖ್ಯಮಂತ್ರಿ ಬದಲಾವಣೆ ಇಲ್ಲ: ಸಭಾಪತಿ ಬಸವರಾಜ ಹೊರಟ್ಟಿ

ಧಾರವಾಡ, ನ. 13: `ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಸದ್ಯಕ್ಕೆ ಇಲ್ಲ. ಬಸವರಾಜ ಬೊಮ್ಮಾಯಿ ಅವರು ಒಳ್ಳೆಯ ಕೆಲಸ ಮಾಡುತ್ತಿದ್ದು, ಅವರೇ ಸಿಎಂ ಆಗಿ ಮುಂದುವರಿಯಲಿದ್ದಾರೆ' ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ಬಿಟ್ ಕಾಯಿನ್ ಪ್ರಕರಣದ ವಿಚಾರಣೆ ನಡೆದಿದೆ. ತಪ್ಪಿತಸ್ಥರು ಯಾರಿದ್ದಾರೆಯೋ ಅವರ ಮೇಲೆ ಕಾನೂನು ರೀತಿಯಲ್ಲಿ ಕ್ರಮ ಆಗಲಿದೆ. ಈ ಬಗ್ಗೆ ಸವಿಸ್ತಾರವಾದ ಚರ್ಚೆ ಆಗಲಿ. ಆದರೆ, ರಾಜಕಾರಣದಲ್ಲಿ ಬದಲಾವಣೆ ಆಗುವುದಿಲ್ಲ' ಎಂದು ನುಡಿದರು.
`ಬೊಮ್ಮಾಯಿ ಅವರು ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಬಹಳ ಕಷ್ಟದ ಪರಿಸ್ಥಿತಿಯಲ್ಲಿ ಉನ್ನತ ಸ್ಥಾನಕ್ಕೆ ಬಂದಿದ್ದಾರೆ. ಅವರು ಇನ್ನಷ್ಟು ದಿನ ಮುಂದುವರೆಯಲಿ ಎಂಬುದು ನಮ್ಮ ಆಶಯವಾಗಿದೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ ಎಂದು ಬಸವರಾಜ ಹೊರಟ್ಟಿ ಇದೇ ವೇಳೆ ಸ್ಪಷ್ಟಣೆ ನೀಡಿದರು.
Next Story





