Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ​15ರೊಳಗೆ ಡಯಾಲಿಸೀಸ್ ಘಟಕದ...

ಉಡುಪಿ: ​15ರೊಳಗೆ ಡಯಾಲಿಸೀಸ್ ಘಟಕದ ಸಿಬ್ಬಂದಿಗಳಿಗೆ ವೇತನಕ್ಕೆ ಗಡುವು

ಕರವೇಯಿಂದ ಅನಿರ್ಧಿಷ್ಟಾವಧಿ ಹೋರಾಟದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ13 Nov 2021 8:27 PM IST
share

ಉಡುಪಿ, ನ.13: ಮುಂದಿನ ನ.15ರ ಸೋಮವಾರ ಸಂಜೆಯೊಳಗೆ ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸೀಸ್ ಘಟಕದ ಸಿಬ್ಬಂದಿಗಳಿಗೆ ಕಳೆದ ಐದು ತಿಂಗಳಿಂದ ಬಾಕಿ ಇರುವ ವೇತನ ಪಾವತಿ ಹಾಗೂ ರಾಜ್ಯದ ಎಲ್ಲಾ ಡಯಾಲಿಸೀಸ್ ಘಟಕಗಳಲ್ಲಿ ಖಾಲಿಯಾಗಿರುವ ರಾಸಾಯನಿಕ ಸಾಮಾಗ್ರಿ ಹಾಗೂ ಫಿಲ್ಟರ್‌ಗಳನ್ನು ಭರ್ತಿ ಮಾಡುವಲ್ಲಿ ಸರಕಾರ ವಿಫಲವಾದರೆ, ಮಂಗಳವಾರ ಬೆಳಗ್ಗೆ 11:00ರಿಂದ ಉಡುಪಿ ಸರಕಾರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಅನಿರ್ಧಿಷ್ಟಾವಧಿ ಅಹೋರಾತ್ರಿ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅನ್ಸಾರ್ ಅಹ್ಮದ್ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಉಡುಪಿಯಲ್ಲಿ ಇಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸೀಸ್ ಘಟಕದಲ್ಲಿ ಡಯಾಲಿಸೀಸ್‌ಗೆ ಅಗತ್ಯ ಇರುವ ರಾಸಾಯನಿಕ ಸಾಮಾಗ್ರಿಗಳು ಹಾಗೂ ಫಿಲ್ಟರ್‌ಗಳು ಸಂಪೂರ್ಣವಾಗಿ ಖಾಲಿಯಾಗಿರುವುದು ಅತ್ಯಂತ ಗಂಭೀರ ವಿಚಾರವಾಗಿರುತ್ತದೆ ಎಂದರು.

ಕರ್ನಾಟಕದಲ್ಲಿ ಇರುವ ಒಟ್ಟು 31 ಜಿಲ್ಲೆಗಳಲ್ಲಿ 23 ಜಿಲ್ಲೆಗಳ ಸರಕಾರಿ ಆಸ್ಪತ್ರೆಗಳ ಡಯಾಲಿಸೀಸ್ ಘಟಕದ ಸೇವೆಯ ಗುತ್ತಿಗೆಯನ್ನು ಬಿ.ಆರ್.ಎಸ್. ಕಂಎನಿ ಹಾಗೂ ಉಳಿದ 8 ಜಿಲ್ಲೆಗಳ ಡಯಾಲಿಸೀಸ್ ಘಟಕದ ಸೇವೆಯ ಗುತ್ತಿಗೆಯನ್ನು ಹೊರ ರಾಜ್ಯದ ಸಂಜೀವಿನಿ ಹೆಸರಿನ ಖಾಸಗಿ ಸಂಸ್ಥೆ ವಹಿಸಿಕೊಂಡಿವೆ.

2007ರ ಎಪ್ರಿಲ್ ತಿಂಗಳಲ್ಲಿ ಮುಂದಿನ 5 ವರ್ಷಗಳವರೆಗಿನ ನಿರ್ವಹಣೆಯ ಒಡಂಬಡಿಕೆಯನ್ನು ಕರ್ನಾಟಕ ಸರಕಾರದೊಂದಿಗೆ ಈ ಖಾಸಗೀ ಕಂಪನಿಗಳು ಮಾಡಿಕೊಂಡಿವೆ. ಆದರೆ ಬಿ.ಆರ್.ಎಸ್. ಕಂಪೆನಿ ಈಗ ನಷ್ಟದಲ್ಲಿರುವುದರಿಂದ ಕಳೆದ ಕೆಲವು ತಿಂಗಳ ಹಿಂದೆ ಡಯಾಲಿಸೀಸ್ ಘಟಕದ ನಿರ್ವಹಣೆ ತನ್ನಿಂದ ಅಸಾಧ್ಯವೆಂದು ಸರಕಾರಕ್ಕೆ ಪತ್ರ ಬರೆದು ತಿಳಿಸಿದೆ ಎಂದವರು ವಿವರಿಸಿದರು.

ಇದೀಗ ಕರ್ನಾಟಕದ 23 ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ 122 ಡಯಾಲಿಸೀಸ್ ಘಟಕದ ಸುಮಾರು 1,000ಕ್ಕೂ ಮೇಲ್ಪಟ್ಟ ಸಿಬ್ಬಂದಿಗಳಿಗೆ ಕಳೆದ 5 ತಿಂಗಳುಗಳಿಂದ ವೇತನ ಪಾವತಿಯಾಗಿಲ್ಲ. ಸರಕಾರ ಹಾಗೂ ಖಾಸಗಿ ಸಂಸ್ಥೆಯ ನಡುವೆ ನಡೆದಿರುವ ಒಪ್ಪಂದದಂತೆ ನಡೆದುಕೊಳ್ಳುವಲ್ಲಿ ಸರಕಾರ ಸಂಪೂರ್ಣವಾಗಿ ವಿಫಲವಾಗಿದ್ದು ಕಳೆದ ಜೂ.30ರವರೆಗೆ ಒಟ್ಟು ಸುಮಾರು 33 ಕೋಟಿ ರೂ.ಗಳ ಬಾಕಿಯನ್ನು ಉಳಿಸಿರುವುದೇ ಈಗಿನ ಸಮಸ್ಯೆಗಳಿಗೆ ಕಾರಣವೆಂದು ಬಿಆರ್‌ಎಸ್ ಸಂಸ್ಥೆ ಆರೋಪಿಸುತ್ತಿದೆ ಎಂದವರು ಹೇಳಿದರು.

ಇದು ಸರಕಾರಕ್ಕೆ ಬಡ ಕಾರ್ಮಿಕರ ಹಾಗೂ ರೋಗಿಗಳ ಬಗ್ಗೆ ಇರುವ ನಿರ್ಲಕ್ಷ ಧೋರಣೆಯನ್ನು ಎತ್ತಿ ತೋರಿಸುತ್ತದೆ. ಇದರಿಂದಾಗಿ ಬಡ ರೋಗಿಗಳು ಹಲವಾರು ಆರೋಗ್ಯ ಸಮಸ್ಯೆಗಳನ್ನು ಈಗಾಗಲೇ ಎದುರಿಸುತ್ತಿದ್ದು ಮುಂದಿನ ದಿನಗಳಲ್ಲಿ ರೋಗಿಗಳ ಸಾವು ನೋವು ಸಂಭವಿಸುವ ದಿನಗಳು ದೂರವಿಲ್ಲ. ನಿನ್ನೆ ಚಿಕಿತ್ಸೆಗೆಂದು ಬಂದ ಕಾಪುವಿನ ರೋಗಿಯೊಬ್ಬರು ಮೃತಪಟ್ಟ ವರದಿಯೂ ಇದೆ ಎಂದವರು ದೂರಿದರು.

ಉಡುಪಿಯ ಡಯಾಲಿಸೀಸ್ ಘಟಕದಿಂದ ಪ್ರತಿದಿನ 30ರಂತೆ ಸುಮಾರು 90ರಿಂದ 100 ಮಂದಿ ತುರ್ತು ಅಗತ್ಯದ ಬಡ ರೋಗಿಗಳು ಡಯಾಲಿಸೀಸ್‌ನ ಸೌಲಭ್ಯ ಪಡೆದುಕೊಳ್ಳುತಿದ್ದರು. ಅಲ್ಲದೇ ಇಲ್ಲಿನ 11 ಮಂದಿ ಸಿಬ್ಬಂದಿಗಳು ಸಹ ಐದು ತಿಂಗಳಿನಿಂದ ಸಂಬಳವಿಲ್ಲದೇ ಸಂಕಷ್ಟ ಅನುಭವಿಸುತಿದ್ದಾರೆ. ಸರಕಾರದ ನಿರ್ಲಕ್ಷದಿಂದ ಮುಂದೆ ಸಂಭವಿಸುವ ಯಾವುದೇ ಅಹಿತಕರ ಘಟನೆಗಳಿಗೆ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ರಾಜ್ಯ ಸರಕಾರ ನೇರ ಹೊಣೆಾಗುತ್ತದೆ ಎಂದವರು ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸಂಚಾಲಕ ವಸಂತ ಕುಮಾರ್, ಸುಧೀರ್ ಪೂಜಾರಿ, ಯುವಶಕ್ತಿ ಕರ್ನಾಟಕದ ರಾಜ್ಯಾಧ್ಯಕ್ಷ ಪ್ರಮೋದ್ ಉಚ್ಚಿಲ, ಯೋಗಿಶ್ ಕುತ್ಪಾಡಿ, ಹನೀಫ್ ಕಾರ್ಕಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X