Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬಿಹಾರದ ಪತ್ರಕರ್ತ,ಆರ್‌ಟಿಐ ಕಾರ್ಯಕರ್ತನ...

ಬಿಹಾರದ ಪತ್ರಕರ್ತ,ಆರ್‌ಟಿಐ ಕಾರ್ಯಕರ್ತನ ಶವ ಸುಟ್ಟ ಸ್ಥಿತಿಯಲ್ಲಿ ರಸ್ತೆ ಬದಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ13 Nov 2021 11:26 PM IST
share
ಬಿಹಾರದ ಪತ್ರಕರ್ತ,ಆರ್‌ಟಿಐ ಕಾರ್ಯಕರ್ತನ ಶವ ಸುಟ್ಟ ಸ್ಥಿತಿಯಲ್ಲಿ ರಸ್ತೆ ಬದಿ ಪತ್ತೆ

ಪಾಟ್ನಾ: ನಾಲ್ಕು ದಿನಗಳ ಹಿಂದೆ ಅಪಹರಣಕ್ಕೊಳಗಾಗಿದ್ದ 22ರ ಹರೆಯದ ಪತ್ರಕರ್ತ ಹಾಗೂ ಆರ್‌ಟಿಐ ಕಾರ್ಯಕರ್ತನ ಶವ ಶುಕ್ರವಾರ ಸಂಜೆ ಬಿಹಾರದ ಮಧುಬನಿ ಜಿಲ್ಲೆಯ ಹಳ್ಳಿಯೊಂದರ ಬಳಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ರಸ್ತೆಬದಿಯಲ್ಲಿ ಪತ್ತೆಯಾಗಿದೆ ಎಂದು NDTV ವರದಿ ಮಾಡಿದೆ.

ಪತ್ರಕರ್ತ ಬುದ್ದಿನಾಥ್ ಝಾ ಅಲಿಯಾಸ್ ಅವಿನಾಶ್ ಝಾ ಸ್ಥಳೀಯ ಸುದ್ದಿ ಪೋರ್ಟಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅವರು 'ನಕಲಿ' ಎಂದು ಆರೋಪಿಸಿರುವ ವೈದ್ಯಕೀಯ ಚಿಕಿತ್ಸಾಲಯಗಳನ್ನು ಹೆಸರಿಸುವ ಫೇಸ್‌ಬುಕ್ ಪೋಸ್ಟ್ ಅನ್ನು ಅಪ್‌ಲೋಡ್ ಮಾಡಿದ ಎರಡು ದಿನಗಳ ನಂತರ ಅವರು ಕಣ್ಮರೆಯಾಗಿದ್ದರು. ಅವಿನಾಶ್ ಫೇಸ್ ಬುಕ್ ಪೋಸ್ಟ್ ನಿಂದಾಗಿ  ಅಂತಹ ಕೆಲವು ನಕಲಿ ಕ್ಲಿನಿಕ್‌ಗಳನ್ನು ಮುಚ್ಚಲು ಮತ್ತು ಇತರರಿಗೆ ಭಾರಿ ದಂಡವನ್ನು ವಿಧಿಸಲು ಕಾರಣವಾಯಿತು.

ವರದಿಯ ಸಮಯದಲ್ಲಿ ಬುದ್ಧಿನಾಥ್ ಅವರು ಹಲವಾರು ಬೆದರಿಕೆಗಳು ಹಾಗೂ  ಲಕ್ಷಾಂತರ ಲಂಚದ ಕೊಡುಗೆಗಳನ್ನು ಸ್ವೀಕರಿಸಿದ್ದರು. ಇವೆರಡಕ್ಕೂ ಜಗ್ಗದ  ಅವರು ತಮ್ಮ ಕೆಲಸವನ್ನು ಮುಂದುವರಿಸಿದ್ದರು.

ಬೆನಿಪತಿಯ ಲೋಹಿಯಾ ಚೌಕ್ ಬಳಿಯ ಅವರ ಮನೆಯ ಬಳಿ ಅಳವಡಿಸಲಾದ ಸಿಸಿಟಿವಿ ಫೀಡ್‌ನಲ್ಲಿ ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದಾರೆ. 

ನವೆಂಬರ್ 12, ಶುಕ್ರವಾರ ಬುದ್ದಿನಾಥ್ ಅವರ ಸೋದರಸಂಬಂಧಿ ಬಿಜೆ ವಿಕಾಸ್ ಅವರು ಬೆಟೌನ್ ಗ್ರಾಮದ ಮೂಲಕ ಹಾದುಹೋಗುವ ಹೆದ್ದಾರಿಯಲ್ಲಿ ಶವ ಪತ್ತೆಯಾಗಿದೆ ಎಂದು ಮಾಹಿತಿ ಪಡೆದರು. ಕೆಲ ಸಂಬಂಧಿಕರು ಹಾಗೂ  ಅಧಿಕಾರಿಗಳು ಅಲ್ಲಿಗೆ ಧಾವಿಸಿದ್ದು, ಬೆರಳಿನಲ್ಲಿದ್ದ ಉಂಗುರ, ಕಾಲಿನ ಗುರುತು ಹಾಗೂ ಕುತ್ತಿಗೆಯಲ್ಲಿದ್ದ ಚೈನ್ ನಿಂದ  ಬುದ್ಧಿನಾಥನ ಶವ ಗುರುತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X