Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 7 ಹೆಚ್ಚುವರಿ ದಿನಕ್ಕೆ ಮುಂದುವರಿದ...

7 ಹೆಚ್ಚುವರಿ ದಿನಕ್ಕೆ ಮುಂದುವರಿದ ಸಿಒಪಿ26 ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ14 Nov 2021 12:13 AM IST
share

ಗ್ಲಾಸ್ಗೋ, ನ.13: ಹವಾಮಾನ ಬದಲಾವಣೆ ಸಮಸ್ಯೆಗೆ ಶೀಘ್ರ ಪರಿಹಾರ ರೂಪಿಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆಯ ನೇತೃತ್ವದಲ್ಲಿ ಬ್ರಿಟನ್‌ನ ಗ್ಲಾಸ್ಗೋದಲ್ಲಿ ಹಮ್ಮಿಕೊಳ್ಳಲಾದ ಹವಾಮಾನ ಬದಲಾವಣೆ ಸಮಾವೇಶದ ಅಂತಿಮ ದಿನವಾದ ಶುಕ್ರವಾರವೂ ಕೆಲವು ವಿಷಯಗಳಲ್ಲಿ ಸಹಮತ ಮೂಡದ ಹಿನ್ನೆಲೆಯಲ್ಲಿ ನವೆಂಬರ್ 13 ಶನಿವಾರಕ್ಕೂ ಮುಂದುವರಿದಿದೆ ಎಂದು ಮೂಲಗಳು ಹೇಳಿವೆ. ಭೂಮಿಗೆ ಬೆದರಿಕೆ ಒಡ್ಡಿರುವ ತಾಪಮಾನ ಏರಿಕೆ ಸಮಸ್ಯೆಯ ಬಗ್ಗೆ ಇನ್ನಷ್ಟು ಚರ್ಚೆ ನಡೆದು, ತಾಪಮಾನ ಮಿತಿಯನ್ನು 1.5 ಸೆಲ್ಶಿಯಸ್‌ಗೆ ಸೀಮಿತಗೊಳಿಸುವ ಪ್ಯಾರಿಸ್ ಒಪ್ಪಂದದ ಗುರಿ ತಲುಪುವ ನಿಟ್ಟಿನಲ್ಲಿ ಸದಸ್ಯ ರಾಷ್ಟ್ರಗಳು ಗಂಭೀರ ಹಾಗೂ ತ್ವರಿತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಒಪಿ26 ಸಮಾವೇಶದ ಅಧ್ಯಕ್ಷತೆ ವಹಿಸಿರುವ ಬ್ರಿಟನ್ ಸಚಿವ ಅಲೋಕ್ ಶರ್ಮ ಆಗ್ರಹಿಸಿದ್ದಾರೆ. ಈ ನಿಟ್ಟಿನಲ್ಲಿ ಶನಿವಾರ ಸಹಮತದ ಅಂತಿಮ ನಿರ್ಧಾರ ರೂಪುಗೊಳ್ಳುವ ನಿರೀಕ್ಷೆಯಿದೆ. ಕಳೆದ 2 ವಾರಗಳಲ್ಲಿ ನಾವು ಸುದೀರ್ಘ ಹಾದಿ ಕ್ರಮಿಸಿದ್ದೇವೆ. ಇದೀಗ ‘ಕಾರ್ಯರೂಪದಲ್ಲಿ ಮಾಡಿ ತೋರಿಸುವ’ ಅಂತಿಮ ಚೈತನ್ಯದ ಇಂಜೆಕ್ಷನ್‌ನ ಅಗತ್ಯವಿದೆ ಎಂದವರು ಹೇಳಿದ್ದಾರೆ. ತಾಪಮಾನ ಬದಲಾವಣೆ ಬಿಕ್ಕಟ್ಟು ದುರಂತವಾಗಿ ಪರಿಣಮಿಸುವ ಮುನ್ನ ಇಂಗಾಲ ಹೊರಸೂಸುವಿಕೆಯನ್ನು ನಿಯಂತ್ರಿಸಲು ಸರಕಾರಗಳು ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಂಡು ಉದ್ದೇಶಿತ ಗುರಿ ಸಾಧನೆಗೆ ಪ್ರಯತ್ನಿಸಬೇಕು ಎಂದು ಶುಕ್ರವಾರ ಬಿಡುಗಡೆಗೊಂಡಿರುವ ಅಂತಿಮ ನಿರ್ಧಾರದ ಕುರಿತ ಕರಡು ಪ್ರತಿಯಲ್ಲಿ ಉಲ್ಲೇಖಿಸಲಾಗಿದೆ.

ಜಾಗತಿಕ ತಾಪಮಾನವನ್ನು 1.5 ಡಿಗ್ರಿ ಸೆಲ್ಶಿಯಸ್‌ಗೆ ಮಿತಿಗೊಳಿಸುವ 2015ರ ಪ್ಯಾರಿಸ್ ಒಪ್ಪಂದದ ಗುರಿಯನ್ನು ತಲುಪುವ, ಹವಾಮಾನ ಬದಲಾವಣೆಯ ಕೆಟ್ಟ ಪರಿಣಾಮಗಳನ್ನು ನಿವಾರಿಸುವ ಮಾರ್ಗೋಪಾಯಗಳ ಬಗ್ಗೆ ಚರ್ಚಿಸುವ ಮುಖ್ಯ ಉದ್ದೇಶವನ್ನು ಸಿಒಪಿ26 ಸಮಾವೇಶ ಹೊಂದಿತ್ತು. ಆದರೆ, ಇಂಗಾಲ ಹೊರಸೂಸುವಿಕೆ ಪ್ರಮಾಣ ಕಡಿತದ ನಿಟ್ಟಿನಲ್ಲಿ ಹಲವು ರಾಷ್ಟ್ರಗಳು ಸೂಚಿಸಿರುವ ಕ್ರಮಗಳು ಸಾಕಾಗದು ಮತ್ತು ಇದರಿಂದ ತಾಪಮಾನ ಬದಲಾವಣೆ ಮಿತಿಮೀರಲಿದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ. ಇದೀಗ ಹೊಸದಾಗಿ ರಚಿಸಿರುವ ಕರಡು ನಿರ್ಣಯವು ಸಮತೋಲನದ ಉದ್ದೇಶದ್ದಾಗಿದ್ದು ಖನಿಜ ತೈಲದ ರಫ್ತನ್ನೇ ಪ್ರಮುಖ ಆದಾಯ ಮೂಲವನ್ನಾಗಿ ಹೊಂದಿರುವ ದೇಶಗಳು, ವಿಶ್ವದಲ್ಲಿ ಅತ್ಯಧಿಕ ವಾಯುಮಾಲಿನ್ಯ ಸಮಸ್ಯೆಯುಳ್ಳ ದೇಶಗಳು ಹಾಗೂ ಹವಾಮಾನ ಸಂಬಂಧಿ ದುರಂತದ ಅಪಾಯ ಹೆಚ್ಚಿರುವ ದೇಶಗಳ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಈ ಕರಡು ನಿರ್ಣಯ ರೂಪಿಸಲಾಗಿದೆ. ತಾಪಮಾನ ನಿಯಂತ್ರಣದ ಕುರಿತು ಮುಂದಿನ ವರ್ಷ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಆಗ್ರಹವನ್ನು ನೂತನ ಕರಡು ನಿರ್ಣಯದಲ್ಲೂ ಉಳಿಸಿಕೊಳ್ಳಲಾಗಿದ್ದರೂ ಈ ಆಗ್ರಹವನ್ನು ಮೃದು ಸ್ವರೂಪದಲ್ಲಿ ಉಲ್ಲೇಖಿಸಲಾಗಿದೆ. ಕೆಲವು ಅಭಿವೃದ್ಧಿಶೀಲ ದೇಶಗಳ ಬೇಡಿಕೆಯಾದ, ತಾಪಮಾನ ನಿಯಂತ್ರಣ ಕ್ರಮದ ವಾರ್ಷಿಕ ಪರಿಶೀಲನೆ ಪ್ರಕ್ರಿಯೆಯ ಕುರಿತು ಇಲ್ಲಿ ಯಾವುದೇ ಉಲ್ಲೇಖವಿಲ್ಲ. ಇಂಗಾಲ ಹೊರಸೂಸುವಿಕೆ ಪ್ರಮಾಣವನ್ನು ಹಂತಹಂತವಾಗಿ ಕಡಿಮೆಗೊಳಿಸುವ ನಿರ್ಧಾರವನ್ನು ಹಲವು ರಾಷ್ಟ್ರಗಳು ಪ್ರಕಟಿಸಿದ್ದರಿಂದ , ಸಮುದ್ರದ ಮಟ್ಟ ಏರಿಕೆ, ಪ್ರವಾಹ, ಬರಗಾಲ ಮುಂತಾದ ಜಾಗತಿಕ ತಾಪಮಾನಕ್ಕೆ ಸಂಬಂಧಿಸಿದ ಸಮಸ್ಯೆ ಬಿಗಡಾಯಿಸುವ ಅಪಾಯವಿದೆ ಎಂದು ಸಂಶೋಧಕರು ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X