Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಭಟ್ಕಳಿ ಜಮಾತುಲ್ ಮುಸ್ಲಿಮೀನ್...

ಮಂಗಳೂರು: ಭಟ್ಕಳಿ ಜಮಾತುಲ್ ಮುಸ್ಲಿಮೀನ್ ನಿಂದ ವೃತ್ತಿಪರ ತರಬೇತಿ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ14 Nov 2021 1:17 PM IST
share
ಮಂಗಳೂರು: ಭಟ್ಕಳಿ ಜಮಾತುಲ್ ಮುಸ್ಲಿಮೀನ್ ನಿಂದ ವೃತ್ತಿಪರ ತರಬೇತಿ ಕಾರ್ಯಾಗಾರ

ಮಂಗಳೂರು, ನ.14: ಭಟ್ಕಳಿ ಜಮಾತುಲ್ ಮುಸ್ಲಿಮೀನ್ (ಬಿಜೆಎಂ) ಮಂಗಳೂರುಇದರ ವತಿಯಿಂದ ವೃತ್ತಿಪರ ತರಬೇತಿ ಕಾರ್ಯಾಗಾರವು ರವಿವಾರ ನಗರದ ಜ್ಯೋತಿ ಬಳಿಯಿರುವ ಬಿಜೆಎಂ ಹಾಸ್ಟೆಲ್ ಸಭಾಂಗಣದಲ್ಲಿ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಕ್ಯಾರಿಯರ್ ಇನ್ಫೋರ್ಮೇಶನ್ ಆ್ಯಂಡ್ ಗೈಡೆನ್ಸ್ ಮೂವ್‌ಮೆಂಟ್ ಫಾರ್ ಆಲ್ (ಸಿಗ್ಮಾ) ಸಂಸ್ಥೆಯ ಸಿಇಒ ಅಮೀನ್-ಇ-ಮುದಸ್ಸಿರ್ 'ನವಯುಗದ ವೃತ್ತಿಪರತೆ-ಯಶಸ್ಸಿಗೆ ಹಾದಿ' ಕುರಿತು ಮಾತನಾಡಿ, ನಾವು ಕಲಿಯುವ ಕಾಲದಲ್ಲಿ ಅಧ್ಯಯನ ಮಾಡಲು, ಜ್ಞಾನ ಪಡೆಯಲು ಪಠ್ಯಪುಸ್ತಕ ಹೊರತುಪಡಿಸಿ ಬೇರೇನೂ ಇರಲಿಲ್ಲ. ಎಸೆಸೆಲ್ಸಿ, ಪಿಯುಸಿ, ಪದವಿ ಪಡೆದು ಉದ್ಯೋಗ ಪಡೆಯುವುದು ಮಾತ್ರ ಗುರಿಯಾಗಿತ್ತು. ಆದರೆ ಈಗ ಹಾಗಲ್ಲ. ಸಾಮಾಜಿಕ ಜಾಲತಾಣಗಳ ಮೂಲಕವೂ ಜ್ಞಾನ ವೃದ್ಧಿಸಬಹುದಾಗಿದೆ. ಯಾವುದೇ ವಿಷಯಕ್ಕೆ ಸಂಬಂಧಿಸಿ ಮಾಹಿತಿಗಳನ್ನು ಗೂಗಲ್ ಮೂಲಕ ಪಡೆಯಬಹುದಾಗಿದೆ. ಆದರೆ ಅದೇ ನಮ್ಮ ಬದುಕಿನ ಮುಖ್ಯ ಗುರಿಯಾಗಬಾರದು. ಅಧ್ಯಯನದ ಮೂಲಕ ಬದಲಾವಣೆ ಬಯಸುವ ಜಗತ್ತಿಗೆ ಹೊಂದಿಕೊಳ್ಳಬೇಕಿದೆ. ವೃತ್ತಿಪರ ಶಿಕ್ಷಣಕ್ಕೆ ಸಂಬಂಧಿಸಿ ಮಾಹಿತಿ ಪಡೆದು ಬದುಕು ಕಟ್ಟಿಕೊಳ್ಳಬೇಕಿದೆ. ಈಗ ಎಲ್ಲಾ ರಂಗದಲ್ಲೂ ಸಾಕಷ್ಟು ಅವಕಾಶಗಳಿವೆ. ಹಾಗಾಗಿ ಈ ಕಾಲದ ವಿದ್ಯಾರ್ಥಿಗಳು ಅದೃಷ್ಟವಂತರು ಎಂದು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಭಟ್ಕಳ ಅಂಜುಮಾನ್ ಪಿಯು ಕಾಲೇಜಿನ ಪ್ರಾಂಶುಪಾಲ ಯೂಸುಫ್ ಕೋಲಾ, ಜಗತ್ತಿನ ಬದಲಾವಣೆಗೆ ತಕ್ಕಂತೆ ನಾವೂ ಬದಲಾಗಬೇಕು. ನಮ್ಮ ವಿದ್ಯೆ, ಪ್ರತಿಭೆಯನ್ನು ಮಾನವೀಯ ಮೌಲ್ಯಗಳಿಗೂ ಧಾರೆ ಎರೆಯಬೇಕು. ಇಸ್ಲಾಮೀ ಚೌಕಟ್ಟು ಮೀರದೆ ಯಶಸ್ಸು ಸಾಧಿಸಲು ಮುಂದಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಭಟ್ಕಳಿ ಜಮಾತುಲ್ ಮುಸ್ಲಿಮೀನ್ (ಬಿಜೆಎಂ) ಮಂಗಳೂರು ಇದರ ಅಧ್ಯಕ್ಷ ಎಸ್.ಎಂ.ಅರ್ಷದ್ ನಮ್ಮ ಸಂಘಟನೆಯು ಬೇರೆ ಬೇರೆ ಉಪ ಸಮಿತಿಗಳ ಮೂಲಕ ಸಮುದಾಯದ ಸೇವೆಗೈಯ್ಯುತ್ತಿದೆ. ಕೋವಿಡ್ ಕಾಲಘಟ್ಟದಲ್ಲಂತೂ ಅನೇಕ ಸಮಾಜ ಸೇವೆಗಳನ್ನು ಮಾಡಲಾಗಿದೆ. ಇದೀಗ ವೃತ್ತಿಗೆ ಸಂಬಂಧಿಸಿ ಹಮ್ಮಿಕೊಳ್ಳಲಾದ ಈ ಕಾರ್ಯಾಗಾರದ ಮೂಲಕ ಲಭಿಸಿದ ಎಲ್ಲಾ ಅವಕಾಶಗಳನ್ನು ಬಳಸಿಕೊಳ್ಳಲು ವಿದ್ಯಾರ್ಥಿಗಳು ಮುಂದಾಗಬೇಕಿದೆ ಎಂದು ಕರೆ ನೀಡಿದರು.

ವೇದಿಕೆಯಲ್ಲಿ ಚಾರ್ಟಡ್ ಅಕೌಂಟೆಂಟ್ ಅಬ್ದುರ್ರಹ್ಮಾನ್ ಮುಸ್ಬಾ, ಝಾಹಿದ್ ಹುಸೈನ್ ಖರೂರಿ, ಹಿಬ್ಬಾನ್ ಶಾಬಂದ್ರಿ, ಬಿಜೆಎಂ ಪ್ರಧಾನ ಕಾರ್ಯದರ್ಶಿ ಇಮ್ತಿಯಾಝ್ ದಾಂಬ್ಡ ಮತ್ತಿತರರು ಉಪಸ್ಥಿತರಿದ್ದರು.

ಇಕ್ಬಾಲ್ ಸಿದ್ದೀಕ್ ಕಿರಾಅತ್ ಪಠಿಸಿದರು. ಬಿಜೆಎಂ ಸಂಚಾಲಕ ಅಫ್ತಾಬ್ ಕೋಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X