Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಯನ್ ಖಾನ್ ಪ್ರಕರಣ: ಓರ್ವ ಆರೋಪಿಯಿಂದ...

ಆರ್ಯನ್ ಖಾನ್ ಪ್ರಕರಣ: ಓರ್ವ ಆರೋಪಿಯಿಂದ ಕಾನೂನುಬಾಹಿರವಾಗಿ ಮಾದಕದ್ರವ್ಯ ವಶ; ಮುಂಬೈ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ14 Nov 2021 8:34 PM IST
share
ಆರ್ಯನ್ ಖಾನ್ ಪ್ರಕರಣ: ಓರ್ವ ಆರೋಪಿಯಿಂದ ಕಾನೂನುಬಾಹಿರವಾಗಿ ಮಾದಕದ್ರವ್ಯ ವಶ; ಮುಂಬೈ ನ್ಯಾಯಾಲಯ

ಮುಂಬೈ, ನ.14: ಕಳೆದ ತಿಂಗಳು ವಿಹಾರ ನೌಕೆಯ ಮೇಲೆ ದಾಳಿ ನಡೆದ ಸಂದರ್ಭದಲ್ಲಿ ಅನಧಿಕೃತ ವ್ಯಕ್ತಿ ಓರ್ವ ಆರೋಪಿಯ ಬಳಿಯಿಂದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದು ಕಾನೂನುಬಾಹಿರವಾಗಿದೆ ಎಂದು ಇಲ್ಲಿಯ ವಿಶೇಷ ಎನ್ಡಿಪಿಎಸ್ ನ್ಯಾಯಾಲಯವು ಹೇಳಿದೆ. ಬಾಲಿವುಡ್ ನಟ ಶಾರುಕ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಕೂಡ ಪ್ರಕರಣದ ಆರೋಪಿಗಳಲ್ಲಿ ಓರ್ವರಾಗಿದ್ದಾರೆ.

ಅಧಿಕೃತ ಅಧಿಕಾರಿಯ ಬದಲು ಪಂಚನಾಮೆಯ ಸಾಕ್ಷಿಯೋರ್ವರು ನೌಕೆಯಲ್ಲಿನ ಆರೋಪಿ ನೂಪುರ್ ಸತಿಜಾರ ಕೋಣೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದರು ಎಂದು ನ್ಯಾ.ವಿ.ವಿ.ಪಾಟೀಲ್ ಅವರು ತನ್ನ ಆದೇಶದಲ್ಲಿ ಹೇಳಿದ್ದಾರೆ.

ಸತಿಜಾ ಮತ್ತು ಸಹ ಆರೋಪಿ ಗೋಮತಿ ಚೋಪ್ರಾ ಅವರಿಗೆ ಅ.30ರಂದೇ ಜಾಮೀನು ಮಂಜೂರಾಗಿತ್ತಾದರೂ ನ್ಯಾಯಾಲಯದ ಆದೇಶವನ್ನು ಶನಿವಾರವಷ್ಟೇ ಲಭ್ಯವಾಗಿಸಲಾಗಿತ್ತು.

ಮಾದಕ ದ್ರವ್ಯ ನಿಯಂತ್ರಣ ಘಟಕ (ಎನ್ಸಿಬಿ)ವು ಸತಿಜಾರಿಂದ 1.59 ಗ್ರಾಂ ತೂಕದ ನಾಲ್ಕು ಎಕ್ಸ್ಟಾಸಿ ಮಾತ್ರೆಗಳು ಹಾಗೂ ಚೋಪ್ರಾ ಬಳಿಯಿಂದ ನಾಲ್ಕು ಎಕ್ಸ್ಟಾಸಿ ಮಾತ್ರೆಗಳು,ಮೂರು ಗ್ರಾಂ ಕೊಕೇನ್ ಮತ್ತು 93,000 ರೂ.ನಗದು ಹಣವನ್ನು ವಶಪಡಿಸಿಕೊಂಡಿತ್ತು. ಅ.2ರಂದು ಮುಂಬೈ ಕರಾವಳಿಯಾಚೆ ನೌಕೆಯ ಮೇಲೆ ದಾಳಿ ನಡೆಸಿದ್ದ ಎನ್ಸಿಬಿ ಆರ್ಯನ್ ಸೇರಿದಂತೆ ಹಲವರನ್ನು ಬಂಧಿಸಿತ್ತು. ಮುಂಬೈ ಉಚ್ಚ ನ್ಯಾಯಾಲಯವು ಅ.28ರಂದು ಆರ್ಯನ್ ಗೆ ಜಾಮೀನು ಮಂಜೂರು ಮಾಡಿತ್ತು.

ಸತಿಜಾರ ಜಾಮೀನು ಅರ್ಜಿಯ ವಿಚಾರಣೆ ಸಂದರ್ಭ ಅವರ ಪರ ವಕೀಲರಾದ ಅಯಾಝ್ ಖಾನ್ ಮತ್ತು ಸರ್ತಾಜ್ ಶೇಖ್ ಅವರು,ಪ್ರಕರಣದ ಪಂಚನಾಮೆಯ ಮಹಿಳಾ ಸಾಕ್ಷಿಯೋರ್ವರು ಗುಪ್ತಚರ ಅಧಿಕಾರಿಯೋರ್ವರ ಸೂಚನೆಯ ಮೇರೆಗೆ ತಮ್ಮ ಕಕ್ಷಿದಾರರ ಕೋಣೆಯನ್ನು ಶೋಧಿಸಿದ್ದರು. ಸರಕಾರದ ಅಧಿಸೂಚನೆಯಂತೆ ಎನ್ಸಿಬಿಯ ಇನ್ಸ್ಪೆಕ್ಟರ್ ದರ್ಜೆಯ ಅಥವಾ ಮೇಲಿನ ಅಧಿಕಾರಿಗಳು ಮಾತ್ರ ಶೋಧ ಕಾರ್ಯಾಚರಣೆಯನ್ನು ನಡೆಸುವ ಮತ್ತು ವಶಪಡಿಸಿಕೊಳ್ಳುವ ಅಧಿಕಾರವನ್ನು ಹೊಂದಿದ್ದಾರೆ ಎಂದು ವಾದಿಸಿದ್ದರು.

ವಿಶೇಷ ಸರಕಾರಿ ಅಭಿಯೋಜಕರಾದ ಎ.ಎಂ.ಚಿಮಲ್ಕರ್ ಮತ್ತು ಅದ್ವೆತ್ ಸೇಟ್ನಾ ಅವರು,ಎನ್ಸಿಬಿಯು ವಿಶ್ವಾಸಾರ್ಹ ಮಾಹಿತಿಯ ಮೇರೆಗೆ ‘ಸಣ್ಣ,ಮಧ್ಯಂತರ ಮತ್ತು ವಾಣಿಜ್ಯಿಕ ಪ್ರಮಾಣಗಳಲ್ಲಿ ’ಮಾದಕ ದ್ರವ್ಯಗಳನ್ನು ಹೊಂದಿದ್ದ ಜನರನ್ನು ಬಂಧಿಸಿದೆ ಮತ್ತು ಆರೋಪಿಗಳು ಮಾದಕ ದ್ರವ್ಯ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದರು ಎಂದು ವಾದಿಸಿದ್ದರು.

ಆದಾಗ್ಯೂ ನ್ಯಾಯಾಲಯವು ಪ್ರಾಸಿಕ್ಯೂಷನ್ ಪುರಾವೆಯಾಗಿ ಉಲ್ಲೇಖಿಸಿರುವ ಸತಿಜಾ ಮತ್ತು ಚೋಪ್ರಾ ನಡುವಿನ ವಾಟ್ಸ್ಆ್ಯಪ್ ಚಾಟ್ಗಳು ಮಾದಕ ದ್ರವ್ಯಗಳ ಸೇವನೆಗೆ ಸಂಬಂಧಿಸಿವೆಯೇ ಹೊರತು ಅದರ ಮಾರಾಟ ಅಥವಾ ಖರೀದಿಗೆ ಅಲ್ಲ ಎಂದು ತನ್ನ ಆದೇಶದಲ್ಲಿ ಹೇಳಿದೆ.

ದಾಖಲೆಗಳನ್ನು ಪರಿಶೀಲಿಸಿದರೆ ಮೇಲ್ನೋಟಕ್ಕೆ ಸಂಚು ನಡೆದಿದೆಯೆಂದು ಹೇಳಲು ಸಾಧ್ಯವಿಲ್ಲ ಎಂದೂ ನ್ಯಾಯಾಲಯವು ಹೇಳಿದೆ. ಈವರೆಗೆ ಪ್ರಕರಣದಲ್ಲಿಯ 20 ಆರೋಪಿಗಳ ಪೈಕಿ 15 ಜನರು ಜಾಮೀನು ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X