Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೈಕೋರ್ಟ್ ಆದೇಶ ಪಾಲಿಸದ ಉತ್ತರ ಪ್ರದೇಶದ...

ಹೈಕೋರ್ಟ್ ಆದೇಶ ಪಾಲಿಸದ ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳ ವಿರುದ್ಧ ಎಫ್ಐಆರ್

ವಾರ್ತಾಭಾರತಿವಾರ್ತಾಭಾರತಿ14 Nov 2021 10:57 PM IST
share
ಹೈಕೋರ್ಟ್ ಆದೇಶ ಪಾಲಿಸದ ಉತ್ತರ ಪ್ರದೇಶದ ಉನ್ನತ ಅಧಿಕಾರಿಗಳ ವಿರುದ್ಧ ಎಫ್ಐಆರ್

ಹೊಸದಿಲ್ಲಿ, ನ. 13: ನ್ಯಾಯಾಲಯದ ಆದೇಶವನ್ನು ಪಾಲಿಸದೆ ಇದ್ದುದಕ್ಕಾಗಿ ಅಲಹಾಬಾದ್ ಹೈಕೋರ್ಟ್ನಿಂದ ಜಾಮೀನುಯೋಗ್ಯ ವಾರಂಟ್ ಜಾರಿಗೊಳಿಸಲ್ಪಟ್ಟ ಉತ್ತರಪ್ರದೇಶದ ಇಬ್ಬರು ಉನ್ನತ ಸರಕಾರಿ ಅಧಿಕಾರಿಗಳ ಬಂಧನಕ್ಕೆ ಸುಪ್ರೀಂಕೋರ್ಟ್ ಶನಿವಾರ ಅನುಮತಿ ನೀಡಿದೆ.

ರಾಜ್ಯದ ಹಣಕಾಸು ಕಾರ್ಯದರ್ಶಿ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ವಿರುದ್ಧ ಅಲಹಾಬಾದ್ ಹೈಕೋರ್ಟ್ ವಾರಂಟ್ ಹೊರಡಿಸಿರುವುದನ್ನು ಪ್ರಶ್ನಿಸಿ ಉತ್ತರಪ್ರದೇಶ ಸರಕಾರವು ಸಲ್ಲಿಸಿದ ಅರ್ಜಿಯ ಆಲಿಕೆ ನಡೆಸಿದ ಸಂದರ್ಭದಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಹಾಗೂ ಹಿಮಾ ಕೋಹ್ಲಿ ಅವರಿದ್ದ ನ್ಯಾಯಪೀಠವು ಈ ಆದೇಶ ನೀಡಿದೆ.

ಈ ಇಬ್ಬರು ಉನ್ನತ ಸರಕಾರಿ ಅಧಿಕಾರಿಗಳು 2017 ರಲ್ಲಿ ಅಲಹಾಬಾದ್ ‘ ಕಲೆಕ್ಷನ್ ಅಮೀನ’ ಒಬ್ಬರಿಗೆ ಹಿರಿತನದ ಸೌಲಭ್ಯ ಹಾಗೂ ನಿಯಮಿತ ಉದ್ಯೋಗವನ್ನು ನೀಡಲು ನಿರಾಕರಿಸಿದ್ದರು. ಈ ಹಿನ್ನೆಲೆಯಲ್ಲಿ ಅವರು ಅಲಹಾಬಾದ್ ಹೈಕೋರ್ಟ್ ಮೆಟ್ಟಲೇರಿದ್ದರು.

ಸಂಗ್ರಹ ಅಮೀನ ಅವರಿಗೆ ಹಿರಿತನದ ಸೌಲಭ್ಯ ಹಾಗೂ ನಿಯಮಿತ ಉದ್ಯೋಗ ನೀಡುವಂತೆ ಅಲಹಾಬಾದ್ ಹೈಕೋರ್ಟ್ ಆದೇಶ ನೀಡಿದ್ದರೂ, ಈ ಆದೇಶವನ್ನು ಪಾಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಅಲಹಾಬಾದ್ ಹೈಕೋರ್ಟ್ ಹಣಕಾಸು ಕಾರ್ಯದರ್ಶಿ ಹಾಗೂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿರುದ್ಧ ಜಾಮೀನುಯೋಗ್ಯ ವಾರಂಟ್ ಜಾರಿಗೊಳಿಸಿತ್ತು.

ಇದನ್ನು ಪ್ರಶ್ನಿಸಿ ಉತ್ತರ ಪ್ರದೇಶ ಸರಕಾರವು ಸುಪ್ರೀಂಕೋರ್ಟ್ನ ಮೊರೆ ಹೋಗಿತ್ತು. ಅಲಹಾಬಾದ್ ಹೈಕೋರ್ಟ್ನ ಆದೇಶವನ್ನು ಪಾಲಿಸದೆ ಇರುವ ಮೂಲಕ ಈ ಇಬ್ಬರು ಅಧಿಕಾರಿಗಳು ನ್ಯಾಯಾಲಯಕ್ಕೆ ಆಗೌರವ ತೋರಿದ್ದರು. ರಾಜ್ಯ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉದ್ದಟತನದಿಂದ ವರ್ತಿಸಿದ್ದಾರೆಂದು ಸುಪ್ರೀಂಕೋರ್ಟ್ ನ್ಯಾಯಪೀಠ ಹೇಳಿದೆ.

 ಕಲೆಕ್ಷನ್ ಅಮೀನ ಅವರಿಗೆ ನಿಯಮಿತವಾದ ಉದ್ಯೋಗವನ್ನು ನಿರಾಕರಿಸಿದ್ದರೆ, ಅವರಿಗಿಂತ ಕಿರಿಯರಿಗೆ ಉದ್ಯೋಗವಕಾಶಗಳನ್ನು ನೀಡಿರುವುದನ್ನು ತಾನು ಗಮನಿಸಿರುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಈ ಇಬ್ಬರು ಅಧಿಕಾರಿಗಳ ಪರವಾಗಿ ವಾದಿಸಿದ ರಾಜ್ಯ ಸರಕಾರದ ಹೆಚ್ಚುವರಿ ಸಾಲಿಸಿಟರ್ ಜನರಲ್ ಐಶ್ವರ್ಯಾ ಭಟ್ ಅವರು ಕಲೆಕ್ಷನ್ ಅಮೀನರ ಸೇವೆಯನ್ನು ನಿಯಮಿತಗೊಳಿಸಲಾಗಿದೆ ಹಾಗೂ ಹಿರಿತನದ ಸೌಲಭ್ಯಗಳ ಪಾವತಿ ಮಾತ್ರ ಬಾಕಿಯುಳಿದಿರುವುದಾಗಿ ತಿಳಿಸಿದರು. ಕಲೆಕ್ಷನ್ ಅಮೀನ್ ಅವರಿಗಿಂತ ಕಿರಿಯರಿಗೆ ನೀಡಲಾಗಿದ್ದ ನಿಯಮಿತ ಉದ್ಯೋಗನ್ನು ನೀಡಿರುವುದನ್ನು ಹಿಂಪಡೆಯಲಾಗಿದೆ ಎಂದು ತಿಳಿಸಿದರು.

ಆದರೆ ಇತರ ಉದ್ಯೋಗಿಗಳನ್ನು ಅವರ ಹುದ್ದೆಗಳಿಂದ ತೆಗೆದುಹಾಕುವಂತೆ ತಾನು ಸರಕಾರಕ್ಕೆ ಸೂಚಿಸಿಲ್ಲ. ಕೇವಲ ಕಲೆಕ್ಷನ್ ಅಮೀನ ಅವರಿಗೆ ಪಾವತಿಗೆ ಬಾಕಿಯುಳಿದಿರುವ ಸೌಲಭ್ಯಗಳನ್ನು ನೀಡು ವಂತೆ ಮಾತ್ರ ಸೂಚಿಸಿರುವುದಾಗಿ ತಿಳಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X