Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಕ್ಕಳ ವಿರುದ್ಧದ ಸೈಬರ್ ಅಪರಾಧ...

ಮಕ್ಕಳ ವಿರುದ್ಧದ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ.400ರಷ್ಟು ಏರಿಕೆ: ಎನ್‌ ಸಿಆರ್‌ ಬಿ ವರದಿ

ವಾರ್ತಾಭಾರತಿವಾರ್ತಾಭಾರತಿ14 Nov 2021 6:40 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಕ್ಕಳ ವಿರುದ್ಧದ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ.400ರಷ್ಟು ಏರಿಕೆ: ಎನ್‌ ಸಿಆರ್‌ ಬಿ ವರದಿ

ಹೊಸದಿಲ್ಲಿ, ನ. 14: 2019ನೇ ಇಸವಿಗೆ ಹೋಲಿಸಿದರೆ 2020ರಲ್ಲಿ ಮಕ್ಕಳ ವಿರುದ್ಧದ ಸೈಬರ್ ಅಪರಾಧ ಪ್ರಕರಣಗಳಲ್ಲಿ ಶೇ.400ಕ್ಕಿಂತಲೂ ಅಧಿಕ ಏರಿಕೆಯಾಗಿದೆ. ಅವುಗಳಲ್ಲಿ ಬಹುತೇಕ ಪ್ರಕರಣಗಳು ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಲೈಂಗಿಕವಾಗಿ ಬಿಂಬಿಸುವ ವಿಷಯಗಳನ್ನು ಪ್ರಕಟಿಸಿದ ಹಾಗೂ ಪ್ರಸಾರ ಮಾಡಿರುವುದಕ್ಕೆ ಸಂಬಂಧಿಸಿದ್ದಾಗಿವೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ವಿಭಾಗ (ಎನ್‌ ಸಿಆರ್‌ ಬಿ) ದ ವರದಿ ತಿಳಿಸಿದೆ.

ಮಕ್ಕಳ ವಿರುದ್ಧದ ಸೈಬರ್ ಅಪರಾಧ ಪ್ರಕರಣಗಳು ಗರಿಷ್ಠ ಸಂಖ್ಯೆಯಲ್ಲಿ ದಾಖಲಾಗಿರುವ ರಾಜ್ಯಗಳ ಸಾಲಿನಲ್ಲಿ ಉತ್ತರಪ್ರದೇಶ (170), ಕರ್ನಾಟಕ (144), ಮಹಾರಾಷ್ಟ್ರ (137), ಕೇರಳ (107) ಹಾಗೂ ಒಡಿಶಾ (71) ಕ್ರಮವಾಗಿ ಮೊದಲ ಐದು ಸ್ಥಾನಗಳಲ್ಲಿವೆ.
 
ಮಕ್ಕಳ ವಿರುದ್ಧದ ಆನ್ಲೈನ್ ಅಪರಾಧಗಳ 842 ಪ್ರಕರಣಗಳ ಪೈಕಿ 738 ಪ್ರಕರಣಗಳಲ್ಲಿ ಮಕ್ಕಳನ್ನು ಲೈಂಗಿಕವಾದ ಚಟುವಟಿಕೆಯಲ್ಲಿ ತೋರಿಸುವಂತಹ ವಿಷಯಗಳನ್ನು ಪ್ರಕಟಿಸಿದ ಅಥವಾ ಪ್ರಸಾರ ಮಾಡಿದ್ದಕ್ಕೆ ಸಂಬಂಧಿಸಿದ್ದಾಗಿದೆ.
  
2019ರಲ್ಲಿ 164 ಮಕ್ಕಳ ವಿರುದ್ಧದ ಸೈಬರ್ ಅಪರಾಧ ಪ್ರಕರಣಗಳು ವರದಿಯಾಗಿತ್ತು. 2018ರಲ್ಲಿ 117 ಹಾಗೂ 2017ರಲ್ಲಿ 79 ಅಂತಹ ಪ್ರಕರಣಗಳು ವರದಿಯಾಗಿದ್ದವು. 2020ರಲ್ಲಿ ಮಕ್ಕಳ ವಿರುದ್ಧ ಸೈಬರ್ ಅಪರಾಧದ ಪ್ರಕರಣಗಳ ಸಂಖ್ಯೆ ಸಣ್ಣದಾಗಿಯೇ ಉಳಿದಿದ್ದರೂ, ಅದು 2019ಕ್ಕಿಂತ ಅಧಿಕವಾಗಿರುವುದು ಕಳವಳಕಾರಿಯೆಂದು ಎನ್ಸಿಆರ್ಬಿ ವರದಿ ಅಭಿಪ್ರಾಯಿಸಿದೆ.
 
ಶಿಕ್ಷಣ ಹಾಗೂ ಇತರ ಸಂವಹನ ಉದ್ದೇಶಗಳಿಗಾಗಿ ಮಕ್ಕಳು ಅಧಿಕ ಸಮಯವನ್ನು ಅಂತರ್ಜಾಲದಲ್ಲಿ ಕಳೆಯುತ್ತಿರುವುದರಿಂದ ಮಕ್ಕಳು ಆನ್ಲೈನ್ ಲೈಂಗಿಕ ಕಿರುಕುಳ, ಲೈಂಗಿಕ ಆಮಿಷಕ್ಕೊಳಗಾಗುವಿಕೆ, ಲೈಂಗಿಕ ಸಂದೇಶಗಳ ರವಾನೆ, ಅಶ್ಲೀಲ ಚಿತ್ರಗಳ ವೀಕ್ಷಣೆ, ಸೈಬರ್ ಬೆದರಿಕೆ ಮತ್ತಿತರ ಹಲವಾರು ಅಪಾಯಗಳಿಗೆ ಸುಲಭವಾಗಿ ತುತ್ತಾಗುತ್ತಿದ್ದಾರೆಂದು ವರದಿ ಹೇಳಿದೆ.

ಕೋವಿಡ್19 ಹಾವಳಿಯ ಸಂದರ್ಭದಲ್ಲಿ ಸೋಂಕು ನಿಯಂತ್ರಣಕ್ಕಾಗಿ ಕಳೆದ ವರ್ಷ ದೇಶಾದ್ಯಂತ ಲಾಕ್ಡೌನ್ ಹೇರಿದ ಬಳಿಕ ದೇಶಾದ್ಯಂತ ಶಾಲೆಗಳನ್ನು ಮುಚ್ಚಲಾಗಿತ್ತು ಹಾಗೂ ಇದರ ಪರಿಣಾಮವಾಗಿ ಮಕ್ಕಳಿಗೆ ಆನ್ಲೈನ್ ಮೂಲಕ ಶಿಕ್ಷಣವನ್ನು ನೀಡುವ ವ್ಯವಸ್ಥೆ ಆರಂಭವಾಗಿತ್ತು. ಇದರಿಂದಾಗಿ ಮಕ್ಕಳಿಗೆ ಮನರಂಜನೆ, ಸಾಮಾಜಿಕ ಹಾಗೂ ಶೈಕ್ಷಣಿಕ ಉದ್ದೇಶಗಳಿಗಾಗಿ ಇನ್ನೂ ಹೆಚ್ಚಿನ ಸಮಯವನ್ನು ಆನ್ಲೈನ್ನಲ್ಲಿ ಕಳೆಯಲು ಸಾಧ್ಯವಾಯಿತು. ಇದರ ಜೊತೆ ಎದುರಾಗುವ ಅಪಾಯಗಳ ಬಗ್ಗೆ ಹೆಚ್ಚಿನ ಮಕ್ಕಳಿಗೆ ಅರಿವಿರಲಿಲ್ಲವೆಂದು ವರದಿ ಹೇಳಿದೆ.
 
ಕೊರೋನ ಹಾವಳಿ ಸಂದರ್ಭ ಲಾಕ್ಡೌನ್ ಹಾಗೂ ಶಾಲೆಗಳ ಮುಚ್ಚುಗಡೆಯಿಂದಾಗಿ ಮಕ್ಕಳು ಸಾಮಾಜಿಕವಾಗಿ ಬೆರೆಯುವ ಅವಕಾಶ ತಪ್ಪಿಹೋದುದು ಕೂಡ ಅವರ ಮನೋಸಾಮಾಜಿಕ ಯೋಗಕ್ಷೇಮದ ಮೇಲೆ ಪರಿಣಾಮ ಬೀರಿದೆಯೆಂದು ಮಕ್ಕಳ ಹಕ್ಕುಗಳ ಸಂಸ್ಥೆ ಕ್ರೈನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂಜಾ ಮರ್ವಾಹ ತಿಳಿಸಿದ್ದಾರೆ.

2020ರಲ್ಲಿ ಶೇ.13ರಷ್ಟು ಮಕ್ಕಳು ಹಾಗೂ 25 ವರ್ಷಕ್ಕಿಂತ ಕೆಳವಯಸ್ಸಿನವರು ಮನೆಯಲ್ಲಿ ಇಂಟರ್ನೆಟ್ ಸೌಲಭ್ಯವನ್ನು ಪಡೆದುಕೊಂಡಿದ್ದರು ಎಂದು ವಿಶ್ವಸಂಸ್ಥೆಯ ಮಕ್ಕಳ ಶಿಕ್ಷಣ ನಿಧಿ (ಯುನಿಸೆಫ್) ವರದಿ ಇತ್ತೀಚೆಗೆ ಬಹಿರಂಗಪಡಿಸಿತ್ತು. ಮಧ್ಯಮ ಆದಾಯದ ರಾಷ್ಟ್ರಗಳ ಶೇ.14ರಷ್ಟು ಶಾಲಾ ವಯಸ್ಸಿನ (3ರಿಂದ 17 ವರ್ಷ) ಮಕ್ಕಳು ಮನೆಯಲ್ಲಿ ಅಂತರ್ಜಾಲ ಸೌಲಭ್ಯ ಪಡೆದುಕೊಂಡಿದ್ದಾರೆಂದು ಅದು ತಿಳಿಸಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X