Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಭದ್ರತಾ ಸಿಬ್ಬಂದಿ ಹತ್ಯೆ...

ತುಮಕೂರು: ಭದ್ರತಾ ಸಿಬ್ಬಂದಿ ಹತ್ಯೆ ನಡೆಸಿ ಬ್ಯಾಂಕ್‌ ನಿಂದ ದರೋಡೆ

ವಾರ್ತಾಭಾರತಿವಾರ್ತಾಭಾರತಿ15 Nov 2021 2:18 PM IST
share
ತುಮಕೂರು: ಭದ್ರತಾ ಸಿಬ್ಬಂದಿ ಹತ್ಯೆ ನಡೆಸಿ ಬ್ಯಾಂಕ್‌ ನಿಂದ ದರೋಡೆ

ತುಮಕೂರು: ಬ್ಯಾಂಕ್‌ವೊಂದರ ಭದ್ರತಾ ಸಿಬ್ಬಂದಿ ಕೊಲೆಗೈದು ಒಳನುಗ್ಗಿರುವ ದರೋಡೆಕೋರರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವನ್ನು ದೋಚಿಕೊಂಡು ಪರಾರಿಯಾಗಿರುವ ಘಟನೆ ತಾಲೂಕಿನ ನಾಗವಲ್ಲಿಯಲ್ಲಿ ಕಳೆದ ರಾತ್ರಿ ನಡೆದಿದೆ.

ತಾಲೂಕಿನ ನಾಗವಲ್ಲಿ ಇರುವ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಶಾಖೆಯಲ್ಲಿ ಈ ಕಳ್ಳತನ ನಡೆದಿದ್ದು,  ಬ್ಯಾಂಕ್ ಭದ್ರತಾ ಸಿಬ್ಬಂದಿ ಸಿದ್ದಪ್ಪ (55) ಎಂಬುವರೇ ಕೊಲೆಯಾಗಿರುವ ದುರ್ದೈವಿ.

ನಾಗವಲ್ಲಿ ಡಿಸಿಸಿ ಬ್ಯಾಂಕ್‌ಗೆ ಕಳೆದ ರಾತ್ರಿ ದರೋಡೆಕೋರರು ನುಗ್ಗಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ಭದ್ರತಾ ಕಾರ್ಯದಲ್ಲಿ ನಿರತರಾಗಿದ್ದ ಸಿದ್ದಪ್ಪ ಅವರು ಪ್ರತಿರೋಧ ವ್ಯಕ್ತಪಡಿಸಿದ್ದರಿಂದ ಕಳ್ಳರ ತಂಡ ಅವರ ಕೈಕಾಲು ತಿರುಚಿ ಕೊಲೆಗೈದು ಶವವನ್ನು ಶೌಚಾಲಯಕ್ಕೆ ಎಸೆದಿದ್ದಾರೆ ಎನ್ನಲಾಗಿದೆ. ಬಳಿಕ ಬ್ಯಾಂಕ್ ಕಟ್ಟಡದ ಷೆಟರ್ಒ ಒಡೆದು ಒಳಗೆ ನುಗ್ಗಿ ಬ್ಯಾಂಕ್‌ನಲ್ಲಿದ್ದ ಕಡತಗಳು, ಇತರ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿದ್ದಾರೆ. ತದ ನಂತರ ಬ್ಯಾಂಕ್ ಒಳಗಿದ್ದ ಲಾಕರ್‌ಗಳನ್ನು ಒಡೆದು ಅದರೊಳಗಿದ್ದ ಲಕ್ಷಾಂತರ ರೂ. ಬೆಲೆಯ ಚಿನ್ನಾಭರಣ, ನಗದನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಬ್ಯಾಂಕ್‌ನಲ್ಲಿ ಎಷ್ಟು ಪ್ರಮಾಣದ ಚಿನ್ನಾಭರಣಗಳು ಕಳುವಾಗಿವೆ ಎಂಬುದರ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಮಾಹಿತಿ ನೀಡಿದ ಬಳಿಕವೇ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ ಬ್ಯಾಂಕ್ ರಜೆ ಇತ್ತು. ಇಂದು ಬೆಳಿಗ್ಗೆ ಬ್ಯಾಂಕ್ ನೌಕರರು ಕರ್ತವ್ಯಕ್ಕೆ ಹಾಜರಾಗಲು ಆಗಮಿಸಿದ ಸಂದರ್ಭದಲ್ಲಿ ಈ ಕಳ್ಳತನ, ಕೊಲೆ ಪ್ರಕರಣ ಬೆಳಕಿಗೆ ಬಂದಿದೆ.ಕಳೆದ 13 ವರ್ಷಗಳ ಹಿಂದೆ ಇದೇ ನಾಗವಲ್ಲಿ ಡಿಸಿಸಿ ಬ್ಯಾಂಕ್‌ನ ಗೋಡೆ ಕೊರೆದು ಕಳ್ಳತನ ಮಾಡಲಾಗಿತ್ತು. ಆ ಸಂದರ್ಭದಲ್ಲೂ ಸಹ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳು ಕಳ್ಳತನವಾಗಿದ್ದವು.ಘಟನೆಯ ಸುದ್ದಿ ತಿಳಿದ ಕೂಡಲೇ ಹೆಬ್ಬೂರು ಪಿಎಸ್ಐ ದೇವಿಕಾರಾಣಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಟಿ.ಜೆ. ಉದೇಶ್ ಭೇಟಿ ನೀಡಿ ಪರಿಶೀಲಿಸಿ, ಈ ದರೋಡೆ ಪ್ರಕರಣವನ್ನು ಬೇಧಿಸಲು ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಪತ್ತೆ ಹಚ್ಚುವುದಾಗಿ ತಿಳಿಸಿದ್ದಾರೆ. 

ಘಟನೆ ನಡೆದ ಸ್ಥಳಕ್ಕೆ ಶ್ವಾನದಳ ಮತ್ತು ಬೆಳರಚ್ಚು ತಜ್ಞರು ಭೇಟಿ ನೀಡಿ ತಪಾಸಣೆ ನಡೆಸಿದ್ದಾರೆ. ನಾಗವಲ್ಲಿಯಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯನ್ನು ಕೊಲೆಗೈದು ದರೋಡೆ ಮಾಡಿರುವ ಪ್ರಕರಣ ಸುತ್ತಮುತ್ತಲ ಗ್ರಾಮಗಳ ಜನರಲ್ಲಿ ತೀವ್ರ ಆತಂಕ ಮೂಡಿಸಿದೆ. ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾತ್ರಿ ಗಸ್ತು ವ್ಯವಸ್ಥೆಯನ್ನು ಗ್ರಾಮೀಣ ಪ್ರದೇಶ ಸೇರಿದಂತೆ ಎಲ್ಲೆಡೆ ಹೆಚ್ಚಿಸಿ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X