ಸಾಂಸ್ಕೃತಿಕ ಸಮ್ಮೇಳನ ಮುಂದೂಡಿಕೆ
ಮಂಗಳೂರು, ನ.15: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ಕೇರಳ ರಾಜ್ಯದ ಕಾಸರಗೋಡಿನ ಎಡನೀರು ಮಠದ ಸಭಾಂಗಣದಲ್ಲಿ ನ.18ರಂದು ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಗಡಿ ನಾಡು ಸಾಂಸ್ಕತಿಕ ಸಮ್ಮೇಳನ ಕಾರ್ಯಕ್ರಮವನ್ನು ಚುನಾವಣೆ ನೀತಿ ಸಂಹಿತೆ ಜಾರಿಗೊಂಡ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
ಈ ಕಾರ್ಯಕ್ರಮ ಆಯೋಜಿಸುವ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಬೆಂಗಳೂರಿನ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಕಟನೆ ತಿಳಿಸಿದೆ.
Next Story





