Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ...

ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ16 Nov 2021 9:34 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪೂರ್ವಾಂಚಲ್ ಎಕ್ಸ್ ಪ್ರೆಸ್ ವೇ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ

ಸುಲ್ತಾನ್‌ಪುರ (ಉತ್ತರಪ್ರದೇಶ),ನ.16: ಸುಮಾರು 22,500 ರೂ.ವೆಚ್ಚದಲ್ಲಿ ನಿರ್ಮಿಸಲಾಗಿರುವ 340 ಕಿ.ಮೀ. ವಿಸ್ತೀರ್ಣದ ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಹೆದ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ದೇಶಕ್ಕೆ ಸಮರ್ಪಿಸಿದರು. ಹೆದ್ದಾರಿ ಮೇಲೆ ವಾಯುಪಡೆಯ ಸಿ-130ಜೆ ಸೂಪರ್ ಹರ್ಕ್ಯೂಲಿಸ್ ವಿಮಾನದಲ್ಲಿ ಬಂದಿಳಿದ ಪ್ರಧಾನಿ, ಆನಂತರ ನಡೆದ ಕಾರ್ಯಕ್ರಮದಲ್ಲಿ ಎಕ್ಸ್‌ಪ್ರೆಸ್‌ವೇ ಉದ್ಘಾಟಿಸಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಈ ಹೆದ್ದಾರಿಯು ಉತ್ತರಪ್ರದೇಶವನ್ನು ಒಗ್ಗೂಡಿಸಲಿದೆ ಎಂದರು. ‘‘ ಮೂರು ವರ್ಷಗಳ ಹಿಂದೆ ಈ ಹೆದ್ದಾರಿಗೆ ಶಿಲಾನ್ಯಾಸವನ್ನು ಮಾಡಿದಾಗ ನಾನು ಒಂದು ದಿನ ಅದೇ ಹೆದ್ದಾರಿಯಲ್ಲಿ ಹೆಲಿಕಾಪ್ಟರ್‌ನಲ್ಲಿ ಬಂದಿಳಿಯಲಿದ್ದೇನೆ ಎಂದು ಯಾವತ್ತೂ ಯೋಚಿಸಿರಲಿಲ್ಲ. ಆದರೆ ಅದು ಈಗ ಸಾಕಾರಗೊಂಡಿದೆ ಎಂದರು. ನೂತನ ಹೆದ್ದಾರಿಯು ಬಡವರು, ಮಧ್ಯಮವರ್ಗ, ರೈತರು ಹಾಗೂ ವರ್ತಕರಿಗೆ ನೆರವಾಗಲಿದೆ ಎಂದು ಪ್ರಧಾನಿ ಭರವಸೆ ವ್ಯಕ್ತಪಡಿಸಿದರು.

ಈ ಹಿಂದೆ ಉತ್ತರಪ್ರದೇಶದಲ್ಲಿ ಆಡಳಿತ ನಡೆಸಿದ್ದ ಸರಕಾರಗಳೆಲ್ಲವೂ ದುರಾಡಳಿತದ ಮೂಲಕ ಆ ರಾಜ್ಯವನ್ನು ದಂಡಿಸಿವೆ ಎಂದು ಮೋದಿ ವಾಗ್ದಾಳಿ ನಡೆಸಿದರು. ಉತ್ತರಪ್ರದೇಶದ ಎಂಪಿಯಾಗಿ ನಾನು ರಾಜ್ಯದ ಜನರೊಂದಿಗೆ ಬಾಂಧವ್ಯವನ್ನು ಬೆಳೆಸಿಕೊಂಡಿದ್ದೇನೆ. ಈ ಹಿಂದೆ ಆಡಳಿತ ನಡೆಸಿದ್ದ ಸರಕಾರಗಳ ತಾರತಮ್ಯ ನೀತಿ ಹಾಗೂ ಆಳುವವರು ತಮ್ಮ ಕುಟುಂಬದ ಏಳಿಗೆಗೆ ಮಾತ್ರ ಪ್ರಾಶಸ್ಯ ನೀಡಿರುವುದು, ಇವೆಲ್ಲವುಗಳಿಂದ ರೋಸಿಹೋದ ಉತ್ತರಪ್ರದೇಶದ ಜನತೆ 2017ರಲ್ಲಿ ಮಾಡಿದಂತೆ ಅವರನ್ನು ರಾಜ್ಯದ ಅಭಿವೃದ್ಧಿಯ ಪಥದಿಂದ ಶಾಶ್ವತವಾಗಿ ಕಿತ್ತೊಗೆಯಲಿದ್ದಾರೆ ಎಂದರು.

ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ,ಜನರನ್ನುದ್ದೇಶಿಸುತ್ತಾ ‘‘ 2014ರಲ್ಲಿ ಈ ದೇಶದ ಸೇವೆ ಸಲ್ಲಿಸುವ ಅವಕಾಶವನ್ನು ನೀವು ನನಗೆ 2014ರಲ್ಲಿ ನೀಡಿದಾಗ, ನಾನು ಉತ್ತರಪ್ರದೇಶದ ಆಡಳಿತಕ್ಕೆ ಸಂಬಂಧಪಟ್ಟ ವಿವರಗಳನ್ನು ಪರಿಶೀಲಿಸಲು ತೊಡಗಿದೆ. ಆದರೆ ಅಖಿಲೇಶ್ ಸರಕಾರ ಅದಕ್ಕೆ ಸಕರಿಸಲಿಲ್ಲ. ಸಾರ್ವಜನಿಕವಾಗಿ ನನ್ನೊಂದಿಗೆ ನಿಲ್ಲುವ ಮೂಲಕ ತಮ್ಮ ವೋಟ್ ಬ್ಯಾಂಕ್‌ಗಳು ಎಲ್ಲಿ ಕೈತಪ್ಪಿಹೋಗುವುದೋ ಎಂಬ ಭೀತಿ ಅವರನ್ನು ಕಾಡುತ್ತಿತು’’್ತ ಎಂದರು.

ಕೋವಿಡ್ ಎರಡನೆ ಅಲೆಯ ನಿರ್ವಹಣೆಯ ಕುರಿತು ತೀವ್ರ ಟೀಕೆಯನ್ನು ಎದುರಿಸಿದ್ದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆಡಳಿತವನ್ನು ಪ್ರಧಾನಿ ಮುಕ್ತಕಂಠದಿಂದ ಪ್ರಶಂಸಿಸಿದರು. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ಸಾವಿರಾರು ಕಿಲೋಮೀಟರ್ ರಸ್ತೆಗಳನು ನಿರ್ಮಾಣವಾಗಿವೆ ಪಾಗೂ ವೈದ್ಯಕೀಯ ಕಾಲೇಜುಗಳು ಸ್ಥಾಪನೆಯಾಗಿವೆ. ಈವರೆಗೆ ರಾಜ್ಯವು 14 ಕೋಟಿಗೂ ಅಧಿಕ ಲಸಿಕೆಗಳನ್ನು ರಾಜ್ಯವು ತನ್ನ ಜನತೆಗೆ ನೀಡಿದೆ ಎಂದರು.

 ಹೆದ್ದಾರಿಯಲ್ಲಿ ನಿರ್ಮಿಸಲಾದ 32 ಕಿ.ಮೀ. ವಿಸ್ತೀರ್ಣದ ತುರ್ತುಸ್ಥಿತಿ ವಿಮಾನ ಇಳಿದಾಣ (ಏರ್‌ಸ್ಟ್ರಿಪ್) ವನ್ನು ಕೂಡಾ ಪ್ರಧಾನಿ ಲೋಕಾರ್ಪಣೆಗೊಳಿಸಿದರು.ಆ ಸಂದರ್ಭ ಪ್ರದರ್ಶಿಸಿದ ಪ್ರಾತ್ಯಕ್ಷಿಕೆಯಲ್ಲಿ ಮೀರೆಜ್ 2000 ವಿಮಾನವು ಹೆದ್ದಾರಿಯಲ್ಲಿ ನಿರ್ಮಿಸಲಾದ ಏರ್‌ಸ್ಟ್ರಿಪ್‌ನಲ್ಲಿ ಸುರಕ್ಷಿತವಾಗಿ ಬಂದಿಳಿಯಿತು.

ಪ್ರಧಾನಿ ಪಾಲ್ಗೊಂಡ ಈ ಕಾರ್ಯಕ್ರಮಕ್ಕಾಗಿ ಜನರನ್ನು ಕರೆತರಲು 2 ಸಾವಿರಕ್ಕೂ ಅಧಿಕ ಬಸ್‌ಗಳ ವ್ಯವಸ್ಥೆ ನೀಡಲಾಗಿತ್ತು. ಇದರಿಂದಾಗಿ ಕೆಲ ಭಾಗಗಳಲ್ಲಿ ಬೆಳಗ್ಗಿನ ವೇಳೆ ದಿನನಿತ್ಯದ ಕರ್ತವ್ಯಗಳಿಗೆ ತೆರಳುತ್ತಿದ್ದ ಸ್ಥಳೀಯರಿಗೆ ತೊಂದರೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾರ್ಯಕ್ರಮದ ಹಿನ್ನೆಲೆಯಲ್ಲಿ ವಾರಣಾಸಿ ಹಾಗೂ ಫೈಝಾಬಾದ್‌ನಲ್ಲಿ ಬಸ್‌ಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿತ್ತೆಂಬುದನ್ನು ಅಧಿಕಾರಿಗಳು ಒಪ್ಪಿಕೊಂಡಿದ್ದಾರೆ.ಈ ಬಸ್‌ಗಳನ್ನು ಪ್ರಧಾನಿಯ ಕಾರ್ಯಕ್ರಮಕ್ಕಾಗಿ ಸುಲ್ತಾನ್‌ಪುರ ಜಿಲ್ಲೆಗೆ ಕೊಂಡೊಯ್ಯಲಾಗಿತ್ತೆಂದು ಅವರು ಹೇಳಿದ್ದಾರೆ.

ಸುಮಾರು 22,500 ಕೋಟಿ ರೂ. ವೆಚ್ಚದಲ್ಲಿ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಈ ಎಕ್ಸ್‌ಪ್ರೆಸ್ 6ಲೇನ್‌ಗಳನ್ನು ಹೊಂದಿದ್ದು ಭವಿಷ್ಯದಲ್ಲಿ ಅದನ್ನು ಎಂಟು ಲೇನ್‌ಗಳಾಗಿ ಅಭಿವೃದ್ಧಿಪಡಿಸಬಹುದಾಗಿದೆ ಎಂದರು.

ಪೂರ್ವಾಂಚಲ ಎಕ್ಸ್‌ಪ್ರೆಸ್ ಹೆದ್ದಾರಿಯು ಉತ್ತರಪ್ರದೇಶದ ಈಶಾನ್ಯ ಜಿಲ್ಲೆಗಳಾದ ಲಕ್ನೋ, ಬಾರಾಬಂಕಿ, ಅಮೇಠಿ, ಆಯೋಧ್ಯಾ, ಸುಲ್ತಾನ್‌ಪುರ, ಅಂಬೇಡ್ಕರ್ ನಗರ, ಅಝಂಗಢ, ಮಾವು ಹಾಗೂ ಗಾಝಿಪುರ ಜಿಲ್ಲೆಗಳ ಆರ್ಥಿಕ ಅಭಿವೃದ್ಧಿಯನ್ನು ಉತ್ತೇಜಿಸಲಿದೆ ಎಂದು ಹೇಳಿಕೆಯು ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X