Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧನ್‍ಬಾದ್ ನ್ಯಾಯಾಧೀಶರನ್ನು ಆಟೋ ಹರಿಸಿ...

ಧನ್‍ಬಾದ್ ನ್ಯಾಯಾಧೀಶರನ್ನು ಆಟೋ ಹರಿಸಿ ಕೊಂದ ಪ್ರಕರಣ: 'ಆರೋಪಿಗಳಿಗೆ ಲೂಟಿ ಉದ್ದೇಶ ಮಾತ್ರ ಇತ್ತು' ಎಂದ ಸಿಬಿಐ ತನಿಖೆ

ವಾರ್ತಾಭಾರತಿವಾರ್ತಾಭಾರತಿ16 Nov 2021 5:29 PM IST
share
ಧನ್‍ಬಾದ್ ನ್ಯಾಯಾಧೀಶರನ್ನು ಆಟೋ ಹರಿಸಿ ಕೊಂದ ಪ್ರಕರಣ: ಆರೋಪಿಗಳಿಗೆ ಲೂಟಿ ಉದ್ದೇಶ ಮಾತ್ರ ಇತ್ತು ಎಂದ ಸಿಬಿಐ ತನಿಖೆ

ಹೊಸದಿಲ್ಲಿ: ಈ ವರ್ಷದ ಜುಲೈ 28ರಂದು ಧನ್‍ಬಾದ್‍ನ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಉತ್ತಮ್ ಆನಂದ್ ಅವರ ಮೇಲೆ ಆಟೋರಿಕ್ಷಾ ಹರಿಸಿ ಕೊಂದ ಆರೋಪ ಎದುರಿಸುತ್ತಿರುವ ಇಬ್ಬರು  ವ್ಯಕ್ತಿಗಳು, ವಾಸ್ತವವಾಗಿ "ರಸ್ತೆಯಲ್ಲಿ ಜಾಗಿಂಗ್ ಮಾಡುತ್ತಿದ್ದ ವ್ಯಕ್ತಿಗೆ ಆಟೋ ಗುದ್ದುವಂತೆ ಮಾಡಿ ಅವರನ್ನು ಕೆಳಕ್ಕೆ ಬೀಳಿಸಿ ಲೂಟಿಗೈಯ್ಯಬೇಕೆಂದಿದ್ದರು ಆದರೆ ಆ ರಸ್ತೆಯಲ್ಲಿ ಬೈಕೊಂದು ಬರುತ್ತಿರುವುದನ್ನು ಗಮನಿಸಿದ ಅವರ ತಮ್ಮ ಮೊದಲಿನ ಯೋಜನೆ ಕೈಬಿಟ್ಟಿದ್ದರು" ಎಂದು ಸಿಬಿಐ ತನಿಖೆ ಕಂಡುಕೊಂಡಿದೆ.

ಆರೋಪಿಗಳಿಗೆ ತಾವು ಬೀಳಿಸಿ ಹತ್ಯೆಗೈದ ವ್ಯಕ್ತಿ ನ್ಯಾಯಾಧೀಶ ಎಂದು ತಿಳಿದಿರಲಿಲ್ಲ ಎಂದು ಸಿಬಿಐ ಮೂಲಗಳು ತಿಳಿಸಿವೆ. ಆರೋಪಿಗಳ ಮೇಲೆ ಗಾಂಧಿನಗರದ ವಿಧಿವಿಜ್ಞಾನ ನಿರ್ದೇಶನಾಲಯ ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ ಆಧಾರದಲ್ಲಿ ಮೇಲಿನ ತೀರ್ಮಾನಕ್ಕೆ ಬರಲಾಗಿದೆ. ನ್ಯಾಯಾಧೀಶರನ್ನು ವಾಹನ ಹರಿಸಿ ಕೊಂದಿರುವ ಹಿಂದೆ ಯಾವುದಾದರೂ ಷಡ್ಯಂತ್ರವಿದೆಯೇ ಎಂದು ತಿಳಿಯುವ ಪ್ರಯತ್ನವನ್ನು ಸಿಬಿಐ ಮಾಡಿತ್ತು.

ಕಳೆದೆರಡು ತಿಂಗಳುಗಳಲ್ಲಿ ಆರೋಪಿಗಳಾದ ಲಖನ್ ವರ್ಮ ಮತ್ತು ರಾಹುಲ್ ಕುಮಾರ್ ವರ್ಮ ಪಾಲಿಗ್ರಾಫ್ ಪರೀಕ್ಷೆ, ಡಿಎನ್‍ಎ ಪ್ರೊಫೈಲಿಂಗ್ ಸಹಿತ ಹಲವಾರು ಪರೀಕ್ಷೆಗೊಳಪಟ್ಟಿದ್ದರು. ಇದರ ಹೊರತಾಗಿ ಕರೆ ಮಾಹಿತಿ ವಿವರಗಳನ್ನೂ ಪರಿಶೀಲಿಸಲಾಗಿತ್ತು ಹಾಗೂ ಅಂತಿಮವಾಗಿ ಈ ಘಟನೆಯ ಹಿಂದೆ ಲೂಟಿ ಯತ್ನ ಮಾತ್ರ ಇತ್ತು ಎಂದು ತಿಳಿದು ಬಂದಿದೆ.

ತಮಗಾಗಿ ವಾದಿಸಲು ವಕೀಲರನ್ನು ನೇಮಿಸುವಷ್ಟು ಆರೋಪಿಗಳು ಆರ್ಥಿಕವಾಗಿ ಸದೃಢರಾಗಿಲ್ಲದೇ ಇದ್ದುದರಿಂದ ನ್ಯಾಯಾಲಯವೇ ಅವರಿಗಾಗಿ ಒಬ್ಬ ವಕೀಲರನ್ನು ನೇಮಿಸಿತ್ತು.

ಪ್ರಕರಣದ ತನಿಖೆಯನ್ನು ಆರಂಭದಲ್ಲಿ ಧನಬಾದ್ ಪೊಲೀಸರು ನಡೆಸಿದ್ದರೆ ನಂತರ ಸಿಬಿಐ ತನಿಖೆಯ ಜವಾಬ್ದಾರಿ ಹೊತ್ತುಕೊಂಡು ಅಕ್ಟೋಬರ್ 20ರಂದು ಆರೋಪಿಗಳಿಬ್ಬರ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X