ಉಡುಪಿ: ನ. 22ಕ್ಕೆ ಕನಕ ಜಯಂತಿ ಉಪನ್ಯಾಸ, ಕನಕ ಕೀರ್ತನೆಗಳ ಗಾಯನ
ಉಡುಪಿ, ನ.16: ಕನಕದಾಸ ಅಧ್ಯಯನ ಸಂಶೋಧನ ಪೀಠ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಇವರ ಆಶ್ರಯದಲ್ಲಿ ಸಂತ ಕನಕದಾಸ ಜಯಂತಿಯನ್ನು ನ.22ರ ಬೆಳಗ್ಗೆ 10 ಗಂಟೆಗೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿವಮೊಗ್ಗದ ಲೇಖಕ ಹಾಗೂ ನ್ಯಾಯವಾದಿ ಎಂ.ಆರ್. ಸತ್ಯನಾರಾಯಣ ಇವರು ‘ಕನಕದಾಸರು ಮತ್ತು ಕನಕ ಸಾಹಿತ್ಯ’ ಎಂಬ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ನಿವೃತ್ತ ಪ್ರಾಂಶುಪಾಲ ಪ್ರೊ. ಮೇಟಿ ಮುದಿಯಪ್ಪ ಅವರ ಉಪಸ್ಥಿತಿಯಲ್ಲಿ, ಪೂರ್ಣಪ್ರಜ್ಞ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ. ಶ್ರೀಕಾಂತ ಸಿದ್ಧಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಉಡುಪಿಯ ಸಂಗೀತ ಬಾಲಚಂದ್ರ ಮತ್ತು ಬಳಗ ದವರಿಂದ ಕನಕದಾಸ ಕೀರ್ತನೆಗಳ ಗಾಯನ ನಡೆಯಲಿರುವುದು ಎಂದು ಕನಕದಾಸ ಅಧ್ಯಯನ ಸಂಶೋಧನ ಪೀಠದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story