Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಜೆಕಾರು ದೇವಸ್ಯ ಶಿವರಾಮ ಶೆಟ್ಟಿಗೆ...

ಅಜೆಕಾರು ದೇವಸ್ಯ ಶಿವರಾಮ ಶೆಟ್ಟಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 Nov 2021 11:03 PM IST
share
ಅಜೆಕಾರು ದೇವಸ್ಯ ಶಿವರಾಮ ಶೆಟ್ಟಿಗೆ ಹುಟ್ಟೂರ ಅಭಿನಂದನಾ ಕಾರ್ಯಕ್ರಮ

ಕಾರ್ಕಳ: ನಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಯಾವುದೇ ಫಲಾಪೇಕ್ಷೆಯಿಲ್ಲದೇ ಸಮಾಜಕ್ಕೆ ಪೂರಕವಾದ ಕೆಲಸಗಳನ್ನು ಮಾಡಿದಾಗ ಸಮಾಜವು ನಮ್ಮನ್ನು ಗುರುತಿಸಿ ಗೌರವಿಸುತ್ತದೆ ಎಂದು ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್  ಅಧ್ಯಕ್ಷರಾದ ಡಾ ಸುಧಾಕರ ಶೆಟ್ಟಿ ಹೇಳಿದರು.

ಅಜೆಕಾರು ವಿಷ್ನುಮೂರ್ತಿ ದೇವಸ್ಥಾನದ ಸಭಾಂಗಣದಲ್ಲಿ ಉದ್ಯಮಿಗಳು, ಧಾರ್ಮಿಕ ಮುಖಂಡರು ಹಾಗೂ ದಾನಿಗಳಾದ ಅಜೆಕಾರು ದೇವಸ್ಯ ಶಿವರಾಮ ಶೆಟ್ಟಿ ದಂಪತಿಗೆ ಗ್ರಾಮಸ್ಥರ ವತಿಯಿಂದ ಮಂಗಳವಾರ ನಡೆದ ಹುಟ್ಟೂರ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಸುಧಾಕರ ಶೆಟ್ಟಿ ಮಾತನಾಡಿ, ನಾವು ಎಷ್ಟು ಗಳಿಸಿದ್ದೇವೆ ಎನ್ನುವುದಕ್ಕಿಂತ ಸಮಾಜಕ್ಕೆ ಎಷ್ಟು ಕೊಟ್ಟಿದ್ದೇವೆ ಎನ್ನುವುದು ಮುಖ್ಯ, ಬಡತನದಲ್ಲಿ ಹುಟ್ಟಿಬೆಳೆದ ಶಿವರಾಮ ಶೆಟ್ಟಿಯವರು ಮುಂಬೈನಲ್ಲಿ ಕಷ್ಟಪಟ್ಟುದುಡಿದು ಹೋಟೇಲ್ ಉದ್ಯಮದ ಮೂಲಕ ಸಾವಿರಾರು ಜನರಿಗೆ ಉದ್ಯೋಗ ನೀಡಿದ್ದಾರೆ ಮಾತ್ರವಲ್ಲದೇ ತನ್ನ ಗಳಿಕೆಯ ಪಾಲಿನಲ್ಲಿ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳಿಗೆ ಉದಾರ ಕೊಡುಗೆ ನೀಡುವ ಮೂಲಕ ಅವರ ಸಮಾಜಮುಖಿ ಸೇವೆಗೆ ಹುಟ್ಟೂರ ನಾಗರಿಕರು ಗುರುತಿಸಿ ಗೌರವಿಸಿರುವುದು ಅಭಿನಂದನೀಯ ಎಂದರು.

ವಿಷ್ನುಮೂರ್ತಿ ದೇವಳದ ತಂತ್ರಿಗಳಾದ ವಾದಿರಾಜ ತಂತ್ರಿಗಳು ಮಾತನಾಡಿ, ನಿಸ್ವಾರ್ಥ ಮನನಸ್ಸಿನಿಂದ ಮಾಡುವ ಕಾಯಕಕ್ಕೆ ದೇವರ ಪ್ರತಿಫಲವಿದೆ ಇಂತಹ ಅರ್ಥಪೂರ್ಣ ಕಾರ್ಯಕ್ರಮವು ದೇವರ ಸನ್ನಿಧಾನದಲ್ಲಿ ನಡೆದಿರುವುದು ದೇವರ ಅನುಗ್ರಹ ಸದಾ ಇರುತ್ತದೆ ಎಂದು ಆಶೀರ್ವಚಿಸಿದರು.

ಈ ಸಂದರ್ಭದಲ್ಲಿ ಶಿವರಾಮ ಶೆಟ್ಟಿಯವರು ಹುಟ್ಟೂರ ನಾಗರಿಕರ ಹಾಗೂ ವಿವಿಧ ಸಂಘಸಂಸ್ಥೆಗಳ ವತಿಯಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಮಾನವ ಜನ್ಮದಲ್ಲಿ ನಾವು ತಂದೆತಾಯಿ ಸೇವೆ ಮಾಡಬೇಕು ಇದರ ಜತೆಗೆ ಭಗವಂತನ ಸೇವೆ ಹಾಗೂ ಸಮಾಜ ಸೇವೆ ಮಾಡಿದಾಗ ನಮ್ಮ ಜೀವನ ಸಾರ್ಥಕವಾಗುತ್ತದೆ, ನನಗೆ ಸಾಕಷ್ಟು ಕಡೆಗಳಲ್ಲಿ ಸನ್ಮಾನ ಸಿಕ್ಕಿದೆ ಆದರೆ ನನ್ನ ಹುಟ್ಟೂರಿನ ಸನ್ಮಾನ ಅತ್ಯಂತ ಖುಷಿ ತಂದಿದೆ ಎಂದು ಭಾವಪರವಶರಾದರು. ಶಿವರಾಮ ಶೆಟ್ಟಿ ಹಾಗೂ ಪುಷ್ಪಾ ಶೆಟ್ಟಿ ದಂಪತಿಗಳು ಪರಸ್ಪರ ಹಾರ ಬದಲಾಯಿಸಿ ಅವರಿಗೆ ಮಹಿಳೆಯರು ಆರತಿ ಬೆಳಗುವ ಮೂಲಕ ಸನ್ಮಾನಕ್ಕೆ ವಿಶಿಷ್ಟ ಮರೆಗು ನೀಡಿದರು.

ಈ ಸಂದರ್ಭ ಮಣಿಪಾಲ ಪ್ರಸನ್ನ ಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಹರಿಪ್ರಸಾದ್ ರೈ, ರೋಹಿತ್‍ ಕುಮಾರ್ ಹೆಗ್ಡೆ ಎರ್ಮಾಳು, ದೇವಳದ ಅರ್ಚಕರಾದ ರಂಗನಾಥ ಭಟ್, ಅಂಡಾರು ಮಹಾವೀರ್ ಹೆಗ್ಡೆ, ಉದ್ಯಮಿಗಳಾದ ವಿಜಯ ಶೆಟ್ಟಿ, ಸುಜಯ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಯಶೋಧಾ ಶೆಟ್ಟಿ, ಉಪಸ್ಥಿತರಿದ್ದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಂದಕುಮಾರ್ ಹೆಗ್ಡೆ ಸ್ವಾಗತಿಸಿ, ಹರೀಶ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ನಿವೃತ್ತ ಶಿಕ್ಷಕರಾದ ಭಾಸ್ಕರ ಶೆಟ್ಟಿ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X