ಕಡಬ: ಮದ್ರಸದಿಂದ ಬರುತ್ತಿದ್ದ ಬಾಲಕನಿಗೆ ಹುಚ್ಚುನಾಯಿ ಕಡಿತ
![ಕಡಬ: ಮದ್ರಸದಿಂದ ಬರುತ್ತಿದ್ದ ಬಾಲಕನಿಗೆ ಹುಚ್ಚುನಾಯಿ ಕಡಿತ ಕಡಬ: ಮದ್ರಸದಿಂದ ಬರುತ್ತಿದ್ದ ಬಾಲಕನಿಗೆ ಹುಚ್ಚುನಾಯಿ ಕಡಿತ](https://www.varthabharati.in/sites/default/files/images/articles/2021/11/17/314094-1637124823.jpeg)
ಕಡಬ, ನ.17: ಹುಚ್ಚುನಾಯಿಯೊಂದು ಕಡಿದ ಪರಿಣಾಮ ಶಾಲಾ ವಿದ್ಯಾರ್ಥಿಯೋರ್ವ ಗಾಯಗೊಂಡ ಘಟನೆ ಕಡಬ ಪೇಟೆಯಲ್ಲಿ ಬುಧವಾರ ನಡೆದಿದೆ.
ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಹುಚ್ಚು ನಾಯಿ ದಾಳಿಗೊಳಗಾದ ಬಾಲಕ. ಈತ ಎಂದಿನಂತೆ ಇಂದು ಬೆಳಗ್ಗೆ ಮದ್ರಸ ಬಿಟ್ಟು ಮನೆಗೆ ಹಿಂದಿರುಗುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು, ಕೈಗೆ ಕಚ್ಚಿದೆ ಎಂದು ತಿಳಿದುಬಂದಿದೆ. ಬಾಲಕನಿಗೆ ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಈ ನಡುವೆ ಹುಚ್ಚುನಾಯಿಯನ್ನು ಸಾರ್ವಜನಿಕರು ಹೊಡೆದು ಕೊಂದಿದ್ದು, ಈ ಬಗ್ಗೆ ಪಟ್ಟಣ ಪಂಚಾಯತ್ ಗೆ ಮಾಹಿತಿ ನೀಡಿದ್ದಾರೆ. ವಾರದ ಹಿಂದೆ ಕಡಬದ ಹಳೆ ಸ್ಟೇಷನ್ ಸಮೀಪ ಬಾಪೂಜಿ ನಗರದಲ್ಲೂ ಹುಚ್ಚುನಾಯಿ ಹಾವಳಿ ಕಂಡುಬಂದಿತ್ತು.
Next Story