Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತ್ರಿಪುರಾ ಹಿಂಸಾಚಾರ ಪ್ರಕರಣ: ಪತ್ರಕರ್ತ...

ತ್ರಿಪುರಾ ಹಿಂಸಾಚಾರ ಪ್ರಕರಣ: ಪತ್ರಕರ್ತ ಮತ್ತು ವಕೀಲರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ17 Nov 2021 7:54 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ತ್ರಿಪುರಾ ಹಿಂಸಾಚಾರ ಪ್ರಕರಣ: ಪತ್ರಕರ್ತ ಮತ್ತು ವಕೀಲರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಸುಪ್ರೀಂ ಸೂಚನೆ

ಹೊಸದಿಲ್ಲಿ,ನ.17: ತ್ರಿಪುರಾದಲ್ಲಿ ಸಂಭವಿಸಿದ್ದ ಕೋಮು ಹಿಂಸಾಚಾರ ಕುರಿತು ತಮ್ಮ ಸತ್ಯಶೋಧನಾ ವರದಿ ಮತ್ತು ಟ್ವೀಟ್‌ಗಳಿಗಾಗಿ ಅಕ್ರಮ ಚಟುವಟಿಕೆಗಳ (ತಡೆ) ಕಾಯ್ದೆ,1967 (ಯುಎಪಿಎ) ಅಡಿ ಪ್ರಕರಣ ದಾಖಲಿಸಲ್ಪಟ್ಟಿರುವ ಇಬ್ಬರು ವಕೀಲರು ಮತ್ತು ಓರ್ವ ಪತ್ರಕರ್ತನ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ಜರುಗಿಸದಂತೆ ಸವೋಚ್ಚ ನ್ಯಾಯಾಲಯವು ಬುಧವಾರ ರಾಜ್ಯದ ಪೊಲೀಸರಿಗೆ ನಿರ್ದೇಶ ನೀಡಿದೆ.

 ತಮ್ಮ ವಿರುದ್ಧದ ಎಫ್‌ಐಆರ್‌ನ್ನು ರದ್ದುಗೊಳಿಸುವಂತೆ ಕೋರಿ ಮತ್ತು ಯುಎಪಿಎದ ಕೆಲವು ನಿಬಂಧನೆಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ವಕೀಲರಾದ ಪಿಯುಸಿಎಲ್ ಸದಸ್ಯ ಮುಕೇಶ ಮತ್ತು ಮಾನವ ಹಕ್ಕುಗಳ ಸಂಘಟನೆಯ ರಾಷ್ಟ್ರೀಯ ಒಕ್ಕೂಟದ ಕಾರ್ಯದರ್ಶಿ ಅನ್ಸಾರ್ ಇಂದೋರಿ ಹಾಗೂ ನ್ಯೂಸ್‌ಕ್ಲಿಕ್‌ನ ಪತ್ರಕರ್ತ ಶ್ಯಾಮ ಮೀರಾಸಿಂಗ್ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ಪೀಠವು ನೋಟಿಸನ್ನು ಹೊರಡಿಸಿತು.

#ಈ ಇಬ್ಬರು ವಕೀಲರು ‘ತ್ರಿಪುರಾದಲ್ಲಿ ಮಾನವತೆಯ ಮೇಲೆ ದಾಳಿ ಮುಸ್ಲಿಂ ಲೈವ್ಸ್ ಮ್ಯಾಟರ್ ’ಶೀರ್ಷಿಕೆಯಡಿ ಬಿಡುಗಡೆಗೊಳಿಸಿರುವ ಸತ್ಯಶೋಧನಾ ವರದಿಯನ್ನು ಹತ್ತಿಕ್ಕಲು ಮತ್ತು ಕೇವಲ ‘ತ್ರಿಪುರಾ ಹೊತ್ತಿ ಉರಿಯುತ್ತಿದೆ ’ಎಂದು ಟ್ವೀಟ್ ಮಾಡಿದ್ದಕ್ಕಾಗಿ ಮೀರಾಸಿಂಗ್ ವಿರುದ್ಧ ಯುಎಪಿಎಯನ್ನು ಹೇರಲಾಗಿದೆ ಎಂದು ಅರ್ಜಿಯಲ್ಲಿ ವಾದಿಸಲಾಗಿದೆ.

ತ್ರಿಪುರಾದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರದ ಕುರಿತು ವಾಸ್ತವಾಂಶಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಮುನ್ನೆಲೆಗೆ ತರಲು ಪ್ರಯತ್ನಿಸಿದ್ದ ವಕೀಲರು ಮತ್ತು ಪತ್ರಕರ್ತರು ಸೇರಿದಂತೆ ನಾಗರಿಕ ಸಮಾಜದ ಸದಸ್ಯರ ವಿರುದ್ಧ ಯುಎಪಿಎ ಹೇರುವ ಮೂಲಕ ಪೀಡಿತ ಪ್ರದೇಶಗಳಿಂದ ಮಾಹಿತಿಗಳು ಮತ್ತು ವಾಸ್ತವಾಂಶಗಳು ಹೊರಬರುವುದನ್ನು ತಡೆಯಲು ಸರಕಾರವು ಯತ್ನಿಸುತ್ತಿದೆ ಎಂದು ಅರ್ಜಿದಾರರು ಹೇಳಿದ್ದಾರೆ.

 ಸತ್ಯಶೋಧನೆ ಮತ್ತು ವರದಿಗಾರಿಕೆಯನ್ನು ಅಪರಾಧೀಕರಿಸಲು, ಅದೂ ನಿರೀಕ್ಷಣಾ ಜಾಮೀನನ್ನು ನಿಷೇಧಿಸಲಾಗಿರುವ ಮತ್ತು ಜಾಮೀನು ದೂರದ ಸಾಧ್ಯತೆಯಾಗಿರುವ ಯುಎಪಿಎಯ ಕಠಿಣ ನಿಬಂಧನೆಗಳಡಿ ಸರಕಾರಕ್ಕೆ ಅವಕಾಶ ನೀಡಿದರೆ,ನಾಗರಿಕ ಸಮಾಜದ ಸದಸ್ಯರ ವಾಕ್‌ಸ್ವಾತಂತ್ರ ಮತ್ತು ಅಭಿವ್ಯಕ್ತಿ ಸ್ವಾತಂತ್ರಕ್ಕೆ ತೀವ್ರ ಹೊಡೆತ ಬೀಳುತ್ತದೆ ಮತ್ತು ಸರಕಾರಕ್ಕೆ ಅನುಕೂಲಕರವಾದ ಅಂಶಗಳು ಮಾತ್ರ ಹೊರಬರುತ್ತವೆ. ಸತ್ಯದ ಅನ್ವೇಷಣೆ ಮತ್ತು ಅದರ ವರದಿಗಾರಿಕೆಯನ್ನು ಅಪರಾಧೀಕರಿಸಿದರೆ ಈ ಪ್ರಕ್ರಿಯೆಯಲ್ಲಿ ನ್ಯಾಯದ ಪರಿಕಲ್ಪನೆಯು ಬಲಿಪಶುವಾಗುತ್ತದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

 ಯುಎಪಿಎದ ಕಲಂ 13ರ ಜೊತೆಗೆ ಓದಲಾಗುವ ಕಲಂ 2(1)( ಒ ) ಮತ್ತು ಕಲಂ 45(ಡಿ)(5) ಅನ್ನು ಅಸಾಂವಿಧಾನಿಕವೆಂದು ಘೋಷಿಸಲು ನಿರ್ದೇಶವನ್ನೂ ಅರ್ಜಿಯು ಕೋರಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X