Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್...

ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಎಲ್ಲಿದ್ದಾರೆ? ಎಂದು ಕೇಳಿದ ಸುಪ್ರೀಂ ಕೋರ್ಟ್

ಸುಲಿಗೆ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ನಿರಾಕರಿಸಿದ ನ್ಯಾಯಾಲಯ

ವಾರ್ತಾಭಾರತಿವಾರ್ತಾಭಾರತಿ18 Nov 2021 1:14 PM IST
share
ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬೀರ್ ಸಿಂಗ್ ಎಲ್ಲಿದ್ದಾರೆ? ಎಂದು  ಕೇಳಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ,ನ.18: ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮಬೀರ್ ಸಿಂಗ್ ಅವರಿಗೆ ಹಫ್ತಾ ವಸೂಲಿ ಪ್ರಕರಣದಲ್ಲಿ ಬಂಧನದ ವಿರುದ್ಧ ರಕ್ಷಣೆ ನೀಡಲು ಗುರುವಾರ ನಿರಾಕರಿಸಿದ ಸರ್ವೋಚ್ಚ ನ್ಯಾಯಾಲಯವು,ನೀವು ಎಲ್ಲಿದ್ದೀರಿ ಎನ್ನುವುದನ್ನು ಮೊದಲು ಬಹಿರಂಗಗೊಳಿಸಿ ಎಂದು ತಾಕೀತು ಮಾಡಿತು.

ಸಿಂಗ್ ಕನಿಷ್ಠ ನಾಲ್ಕು ಹಫ್ತಾ ವಸೂಲಿ ಪ್ರಕರಣಗಳನ್ನು ಎದುರಿಸುತ್ತಿದ್ದು,ದೇಶ ಬಿಟ್ಟು ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಸಿಂಗ್ ಎಲ್ಲಿದ್ದಾರೆ ಎಂದು ಸರ್ವೋಚ್ಚ ನ್ಯಾಯಾಲಯವು ಅವರ ಪರ ವಕೀಲರನ್ನು ಪ್ರಶ್ನಿಸಿತು.

‘ನೀವು ಎಲ್ಲಿದ್ದೀರಿ? ಈ ದೇಶದಲ್ಲಿ ಅಥವಾ ವಿದೇಶದಲ್ಲಿ? ಯಾವುದಾದರೂ ರಾಜ್ಯದಲ್ಲಿ? ಎಲ್ಲಿದ್ದೀರಿ ನೀವು? ಉಳಿದ ವಿಷಯವನ್ನು ನಾವು ನಂತರ ನೋಡುತ್ತೇವೆ. ನೀವು ಎಲ್ಲಿದ್ದೀರಿ ಎನ್ನುವುದು ಮೊದಲು ನಮಗೆ ಗೊತ್ತಾಗಬೇಕಿದೆ ’ಎಂದು ನ್ಯಾ.ಎಸ್.ಕೆ.ಕೌಲ್ ನೇತೃತ್ವದ ಪೀಠವು ಸಿಂಗ್ ಅವರನ್ನು ಗುರಿಯಾಗಿಸಿಕೊಂಡು ಹೇಳಿತು.

ತನ್ನ ಕಕ್ಷಿದಾರರಿಗೆ ‘ಉಸಿರಾಡಿಸಲು ಅವಕಾಶ’ ನೀಡಿದರೆ ಅವರು ‘ಬಿಲದಿಂದ’ ಹೊರಬರುತ್ತಾರೆ ಎಂದು ವಾದಿಸಿದ ಸಿಂಗ್ ಪರ ವಕೀಲರನ್ನು ತರಾಟೆಗೆತ್ತಿಕೊಂಡ ಸರ್ವೋಚ್ಚ ನ್ಯಾಯಾಲಯವು, ‘ವ್ಯವಸ್ಥೆಯಲ್ಲಿ ವಿಶ್ವಾಸದ ಕೊರತೆಯತ್ತ ನೋಡಿ. ಅವರು ಪೊಲೀಸ್ ಆಯುಕ್ತರಾಗಿದ್ದವರು,ಆದರೆ ನಾವು ಅವರನ್ನು ಭಿನ್ನರಾಗಿ ಪರಿಗಣಿಸುವುದಿಲ್ಲ. ಅವರು ರಕ್ಷಣೆಯನ್ನು ಕೋರುತ್ತಿದ್ದಾರೆ. ನ್ಯಾಯಾಲಯಗಳು ರಕ್ಷಣೆ ನೀಡಿದರೆ ಮಾತ್ರ ಅವರು ಭಾರತಕ್ಕೆ ಬರುತ್ತಾರೆ ಎಂದು ನೀವು ಹೇಳುತ್ತಿದ್ದೀರಾ ’ ಎಂದು ಪ್ರಶ್ನಿಸಿತು.

ರಕ್ಷಣೆಯನ್ನು ಕೋರಿ ಪವರ್ ಆಫ್ ಅಟಾರ್ನಿ ಮೂಲಕ ಅರ್ಜಿಯನ್ನು ಸಲ್ಲಿಸಿದ್ದನ್ನು ಆಕ್ಷೇಪಸಿದ ಪೀಠವು,ನೀವು ರಕ್ಷಣೆ ಆದೇಶವನ್ನು ಕೋರಿದ್ದೀರಿ,ನೀವು ಎಲ್ಲಿದ್ದೀರಿ ಎನ್ನುವುದು ಯಾರಿಗೂ ತಿಳಿದಿಲ್ಲ. ನೀವು ವಿದೇಶದಲ್ಲಿ ಕುಳಿತುಕೊಂಡು ಕಾನೂನು ನೆರವಿಗಾಗಿ ಪವರ್ ಆಫ್ ಅಟಾರ್ನಿ ಮೂಲಕ ಅರ್ಜಿ ಸಲ್ಲಿಸಿದರೆ ಏನಾಗುತ್ತದೆ? ನ್ಯಾಯಾಲಯವು ನಿಮ್ಮ ಪರವಾಗಿ ಆದೇಶ ಹೊರಡಿಸಿದರೆ ನೀವು ಭಾರತಕ್ಕೆ ಬರುತ್ತೀರಿ. ನಿಮ್ಮ ಮನಸ್ಸಿನಲ್ಲಿ ಏನಿದೆ ಎನ್ನುವದು ನಮಗೆ ಗೊತ್ತಿಲ್ಲ. ನೀವು ಎಲ್ಲಿದ್ದೀರಿ ಎನ್ನುವುದು ತಿಳಿಯದೆ ನಿಮಗೆ ರಕ್ಷಣೆ ನೀಡಲು ಸಾಧ್ಯವಿಲ್ಲ ಎಂದು ಹೇಳಿತು.

ಮುಂದಿನ ವಿಚಾರಣೆ ನ.22ರಂದು ನಡೆಯಲಿದೆ.

ಸಿಂಗ್ ಅವರನ್ನು ‘ತಲೆಮರೆಸಿಕೊಂಡ ಆರೋಪಿ’ಎಂದು ಘೋಷಿಸಬಹುದು ಎಂದು ಮುಂಬೈ ನ್ಯಾಯಾಲಯವೊಂದು ಬುಧವಾರ ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X