Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಮಾಮ್ ಇನ್‌ಸ್ಪೈರ್ ಅವಾರ್ಡ್’ಗೆ ಮೂವರು...

‘ಮಾಮ್ ಇನ್‌ಸ್ಪೈರ್ ಅವಾರ್ಡ್’ಗೆ ಮೂವರು ವಿದ್ಯಾರ್ಥಿನಿಯರ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ18 Nov 2021 8:01 PM IST
share
‘ಮಾಮ್ ಇನ್‌ಸ್ಪೈರ್ ಅವಾರ್ಡ್’ಗೆ ಮೂವರು ವಿದ್ಯಾರ್ಥಿನಿಯರ ಆಯ್ಕೆ

ಮಂಗಳೂರು, ನ.18: ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್(ಮಾಮ್) ಆಫ್ ಮಂಗಳಗಂಗೋತ್ರಿ ಸಂಘಟನೆಯ ವತಿಯಿಂದ ನೀಡಲಾಗುವ ‘ಮಾಮ್ ಇನ್‌ಸ್ಪೈರ್ ಅವಾರ್ಡ್’ಗೆ ಶ್ರೀರಕ್ಷಾ ರಾವ್ ಪುನರೂರು ಮತ್ತು ದುರ್ಗಾ ಪ್ರಸನ್ನ ಹಾಗೂ ಪ್ರಜ್ಞಾ ಒಡಿಲ್ನಾಳ ಆಯ್ಕೆಯಾಗಿದ್ದಾರೆ.

ಸ್ನಾತಕೋತ್ತರ ಪದವಿ ವಿಭಾಗದ ಶ್ರೀರಕ್ಷಾ ರಾವ್ ಪುನರೂರು ಸ್ನಾತಕೋತ್ತರ ಪದವಿ ಅಧ್ಯಯನದ ವೇಳೆ ಉತ್ತಮ ಬರಹಗಾರಿಕೆ ಮೂಲಕ ಗುರುತಿಸಿಕೊಂಡವರು. ಆಳ್ವಾಸ್ ಸಂಸ್ಥೆಯಲ್ಲಿ ಸಾಂಸ್ಕೃತಿಕ ದತ್ತು ಸ್ವೀಕಾರ ಯೋಜನೆಯಡಿ ಪತ್ರಿಕೋದ್ಯಮ ಕೋರ್ಸ್‌ಗೆ ಆಯ್ಕೆಯಾಗಿದ್ದರು. ಆಳ್ವಾಸ್ ರಂಗ ಅಧ್ಯಯನದ ವಿದ್ಯಾರ್ಥಿನಿಯಾಗಿರುವ ಶ್ರೀರಕ್ಷಾ ರಾವ್ ಚಂಡೀಘಡದಲ್ಲಿ 2019ರಲ್ಲಿ ನಡೆದ ರಾಷ್ಟ್ರ ಮಟ್ಟದ ಯುವ ಜನೋತ್ಸವದಲ್ಲಿ ಭಾಗವಹಿಸಿ ನಾಟಕದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಬೀದಿ ನಾಟಕ, ತುಳು, ಕನ್ನಡ ನಾಟಕಗಳಲ್ಲಿ ಅಭಿನಯಿಸಿ ದವರು. ಇದೀಗ ಬೆಂಗಳೂರಿನ ಮಸ್ತ್ ಮಗಾ ಡಾಟ್ ಕಾಂ ಡಿಜಿಟಲ್ ಮಾಧ್ಯಮದಲ್ಲಿ ನಿರೂಪಕಿಯಾಗಿದ್ದಾರೆ.

ಪದವಿ ವಿಭಾಗದ ದುರ್ಗಾ ಪ್ರಸನ್ನ ಕಾಸರಗೋಡು ಜಿಲ್ಲೆಯ ಪೆರ್ಲದವರು. ಪ್ರಸ್ತುತ ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿನಿ. ಪದವಿ ವಿದ್ಯಾಭ್ಯಾಸವನ್ನು ಆಳ್ವಾಸ್‌ನಲ್ಲಿಯೇ ಪೂರೈಸಿದ್ದಾರೆ.ವಿವಿಧ ಪತ್ರಿಕೆಗಳಲ್ಲಿ 60ಕ್ಕೂ ಅಧಿಕ ಲೇಖನ ಬರೆದಿದ್ದಾರೆ. ಕನ್ನಡ ಹಾಗೂ ತುಳು ವಿಕಿಪೀಡಿಯದ ಸಕ್ರಿಯ ಸಂಪಾದಕಿ ಹಾಗೂ ತರಬೇತುದಾರರಾಗಿದ್ದಾರೆ. ಸುದ್ದಿವಾಣಿ ವೆಬ್‌ಸೈಟ್‌ನ ಸಂಪಾದಕಿಯಾಗಿದ್ದಾರೆ.

ಪ್ರಜ್ಞಾ ಓಡಿಲ್ನಾಳ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದರು. ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿನಿ. ಪ್ರಸ್ತುತ ಪುತ್ತೂರಿನ ವಿವೇಕಾನಂದ ಕಾಲೇಜಿನ ಸ್ನಾತಕೋತ್ತರ ಪದವಿ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿ. ಪುತ್ತೂರಿನ ಸ್ಥಳೀಯ ವಾಹಿನಿ ಝೂಮ್ ಇನ್ ಟಿವಿಯಲ್ಲಿ ನಿರೂಪಕಿ ಹಾಗೂ ವರದಿಗಾರ್ತಿ. ನಿರೂಪಕಿ, ಬರಹಗಾರ್ತಿಯಾಗಿ ಗುರುತಿಸಿಕೊಂಡವರು.

ನ.22ರಂದು ಬೆಳಗ್ಗೆ 10:30ಕ್ಕೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಪ್ರಶಸ್ತಿ ಪ್ರದಾನ ಮಾಡಲಿದ್ದು, ಅತಿಥಿಯಾಗಿ ಪತ್ರಕರ್ತ ಗುರುವಪ್ಪಎನ್.ಟಿ.ಬಾಳೇಪುಣಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X