Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮಹಾ ದುರಂತದ ಅಂಚಿನಲ್ಲಿ ಅಫ್ಘಾನಿಸ್ತಾನ:...

ಮಹಾ ದುರಂತದ ಅಂಚಿನಲ್ಲಿ ಅಫ್ಘಾನಿಸ್ತಾನ: ವಿಶ್ವಸಂಸ್ಥೆ ಪ್ರತಿನಿಧಿ ಕಳವಳ‌

ವಾರ್ತಾಭಾರತಿವಾರ್ತಾಭಾರತಿ18 Nov 2021 10:12 PM IST
share
ಮಹಾ ದುರಂತದ ಅಂಚಿನಲ್ಲಿ ಅಫ್ಘಾನಿಸ್ತಾನ: ವಿಶ್ವಸಂಸ್ಥೆ ಪ್ರತಿನಿಧಿ ಕಳವಳ‌

ವಿಶ್ವಸಂಸ್ಥೆ, ನ.18: ಅಫ್ಘಾನಿಸ್ತಾನವು ಮಾನವೀಯ ದುರಂತದ ಅಂಚಿನಲ್ಲಿದ್ದು , ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಅನಾಥಪ್ರಜ್ಞೆಯಲ್ಲಿರುವ ದೇಶದ ಜನರಿಗೆ ಆರ್ಥಿಕ ನೆರವು ಒದಗಿಸುವ ವಿಧಾನಗಳನ್ನು ಅಂತರಾಷ್ಟ್ರೀಯ ಸಮುದಾಯ ರೂಪಿಸಬೇಕು ಎಂದು ಅಫ್ಘಾನಿಸ್ತಾನಕ್ಕೆ ವಿಶ್ವಸಂಸ್ಥೆಯ ಪ್ರತಿನಿಧಿ ಡೆಬೋರ ಲಿಯೋನ್ಸ್ ಆಗ್ರಹಿಸಿದ್ದಾರೆ.

ಅಫ್ಘಾನ್‌ನಲ್ಲಿ ಆಹಾರದ ಕೊರತೆ ತೀವ್ರವಾಗಿದ್ದು ದೇಶದ 38 ಮಿಲಿಯನ್ ಜನಸಂಖ್ಯೆಯ 60%ದಷ್ಟು ಜನತೆಗೆ ಆಹಾರದ ಸಮಸ್ಯೆ ಎದುರಾಗಿದೆ. ಇದೀಗ ಚಳಿಗಾಲ ಆರಂಭವಾಗಿದ್ದು ಈ ಸಮಸ್ಯೆ ಇನ್ನಷ್ಟು ಬಿಗಡಾಯಿಸಲಿದೆ. ಇದು ಅಫ್ಘಾನ್ ಜನರಿಂದ ಮುಖ ತಿರುಗಿಸುವ ಸಮಯವಲ್ಲ ಎಂದವರು ಎಚ್ಚರಿಸಿದ್ದಾರೆ.

ಈ ಸಮಯದಲ್ಲಿ ಅಫ್ಘಾನ್ ಜನರನ್ನು ಕೈಬಿಟ್ಟರೆ ಅದೊಂದು ಚಾರಿತ್ರಿಕ ಪ್ರಮಾದವಾಗಲಿದೆ- ಈ ಹಿಂದೆ ದುರಂತ ಪರಿಣಾಮಕ್ಕೆ ಕಾರಣವಾಗಿದ್ದ ಪ್ರಮಾದ ಮರುಕಳಿಸಲಿದೆ ಎಂದು ವಿಶ್ವಸಂಸ್ಥೆಯಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಲಿಯೋನ್ಸ್ ಹೇಳಿದ್ದಾರೆ.

ಮಾನವೀಯ ದುರಂತವನ್ನು ತಡೆಯಬಹುದಾಗಿದೆ. ಯಾಕೆಂದರೆ ಆ ದೇಶ ಎದುರಿಸುತ್ತಿರುವ ಆರ್ಥಿಕ ಬಿಕ್ಕಟ್ಟಿಗೆ ಪ್ರಮುಖ ಕಾರಣವೆಂದರೆ ತಾಲಿಬಾನ್ ವಿರುದ್ಧ ವಿಧಿಸಿರುವ ಆರ್ಥಿಕ ದಿಗ್ಬಂಧನ. ಆರ್ಥಿಕ ದಿಗ್ಬಂಧನವು ಬ್ಯಾಂಕಿಂಗ್ ವ್ಯವಸ್ಥೆಯನ್ನು ನಿಷ್ಕ್ರಿಯಗೊಳಿಸಿದ್ದು ಆರ್ಥಿಕತೆಯ ಎಲ್ಲಾ ಕ್ಷೇತ್ರದ ಮೇಲೆಯೂ ಪರಿಣಾಮ ಬೀರಿದೆ. ಈಗ ಅಂತರಾಷ್ಟ್ರೀಯ ಸಮುದಾಯ ಆರ್ಥಿಕ ನೆರವು ಒದಗಿಸಿದರೆ ಅದು ತಾಲಿಬಾನ್‌ಗಳ ಕೈತಲುಪದಂತೆ ವಿಶ್ವಸಂಸ್ಥೆ ಎಲ್ಲಾ ಪ್ರಯತ್ನ ನಡೆಸಲಿದೆ ಎಂದವರು ಹೇಳಿದರು.

ತಾಲಿಬಾನ್ ಅಫ್ಘಾನ್‌ನ ಮೇಲೆ ನಿಯಂತ್ರಣ ಸಾಧಿಸಿದ ಬಳಿಕ ಆ ದೇಶದ ಜಿಡಿಪಿ ಸುಮಾರು 40%ದಷ್ಟು ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ. ಅಫ್ಘಾನಿಸ್ತಾನ ತಾಲಿಬಾನ್ ವಶಕ್ಕೆ ಬರುತ್ತಿದ್ದಂತೆಯೇ ಆ ದೇಶಕ್ಕೆ ಬಿಡುಗಡೆಯಾಗಿದ್ದ 450 ಮಿಲಿಯನ್ ಡಾಲರ್ ನಿಧಿಯನ್ನು ಐಎಂಎಫ್ ಹಲವು ಸಮಯದವರೆಗೆ ತಡೆಹಿಡಿದಿತ್ತು. ಜೊತೆಗೆ, ಅಮೆರಿಕ ಸಹಿತ ವಿದೇಶದ ಬ್ಯಾಂಕ್‌ಗಳಲ್ಲಿ  ಜಮೆಯಾಗಿರುವ ಅಫ್ಘಾನ್ ಸೆಂಟ್ರಲ್ ಬ್ಯಾಂಕ್ ನ 9 ಬಿಲಿಯನ್ ಡಾಲರ್ ಮೀಸಲು ನಿಧಿಯನ್ನು ಸ್ಥಂಭನಗೊಳಿಸಲಾಗಿದೆ.

ಸ್ಥಂಭನಗೊಳಿಸಿರುವ ಹಣ ಬಿಡುಗಡೆಗೊಳಿಸಿದರೆ ಅಫ್ಘಾನ್ ಈಗ ಎದುರಿಸುತ್ತಿರುವ ಬಿಕ್ಕಟ್ಟು ತುಸು ಕಡಿಮೆಯಾಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಲಿಯೋನ್ಸ್ ‘ ಅಂತರಾಷ್ಟ್ರೀಯ ದಾನಿಗಳು ಮಾನವೀಯ ನೆರವಿನ ಉಪಕ್ರಮಗಳಿಗೆ ಘೋಷಿಸಿರುವ ದೇಣಿಗೆಯನ್ನು ನಾವು ಎದುರು ನೋಡುತ್ತಿದ್ದೇವೆ. ಈ ಹಣವನ್ನು ಸೂಕ್ತವಾಗಿ ವಿನಿಯೋಗಿಸುವ ವ್ಯವಸ್ಥೆ ರೂಪಿಸುವ ಬಗ್ಗೆ ಆದ್ಯತೆ ನೀಡುತ್ತೇವೆ’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X