Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು: ಗುಂಡಿನ ಚಕಮಕಿಯಲ್ಲಿ ನಾಗರಿಕರು...

ಜಮ್ಮು: ಗುಂಡಿನ ಚಕಮಕಿಯಲ್ಲಿ ನಾಗರಿಕರು ಸಾವು ಪ್ರಕರಣ; ನ್ಯಾಯಾಂಗ ತನಿಖೆ ಕೋರಿ ರಾಷ್ಟ್ರಪತಿಗೆ ಗುಪ್ಕರ್ ಅಲಯನ್ಸ್ ಪತ್ರ

ವಾರ್ತಾಭಾರತಿವಾರ್ತಾಭಾರತಿ19 Nov 2021 8:27 PM IST
share
ಜಮ್ಮು: ಗುಂಡಿನ ಚಕಮಕಿಯಲ್ಲಿ ನಾಗರಿಕರು ಸಾವು ಪ್ರಕರಣ; ನ್ಯಾಯಾಂಗ ತನಿಖೆ ಕೋರಿ ರಾಷ್ಟ್ರಪತಿಗೆ ಗುಪ್ಕರ್ ಅಲಯನ್ಸ್ ಪತ್ರ

ಶ್ರೀನಗರ, ನ. 19: ಇಬ್ಬರು ನಾಗರಿಕರು ಸಾವನ್ನಪ್ಪಿದ ಶ್ರೀನಗರದ ಹೈದರ್‌ಪೋರಾದಲ್ಲಿ ನಡೆದ ಎನ್‌ಕೌಂಟರ್ ಕುರಿತು ಸಮಯ ಮಿತಿಯಲ್ಲಿ ನ್ಯಾಯಾಂಗ ತನಿಖೆ ನಡೆಸುವಂತೆ ಆಗ್ರಹಿಸಿ ಜಮ್ಮು ಹಾಗೂ ಕಾಶ್ಮೀರದ ಗುಪ್ಕರ್ ಮೈತ್ರಿಕೂಟ ಗುರುವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಪತ್ರಬರೆದಿದೆ. ತನಿಖೆಯಲ್ಲಿ ಕಂಡು ಬರುವ ಸತ್ಯವನ್ನು ಸಾರ್ವಜನಿಕರೆದುರು ಬಹಿರಂಗಗೊಳಿಸಬೇಕು ಎಂದು ಗುಪ್ಕರ್ ಮೈತ್ರಿ ಕೂಟ ಆಗ್ರಹಿಸಿದೆ. ಇಂತಹ ದುರಾದೃಷ್ಟಕರ ಘಟನೆಗಳು ಜಮ್ಮು ಕಾಶ್ಮೀರದ ಜನರು ಹಾಗೂ ಕೇಂದ್ರ ಸರಕಾರದ ನಡುವಿನ ಕಂದಕವನ್ನು ಹೆಚ್ಚಿಸುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದ ಗುಪ್ಕರ್ ಮೈತ್ರಿಕೂಟ ರಾಷ್ಟ್ರಪತಿ ಅವರಿಗೆ ಬರೆದೆ ಪತ್ರದಲ್ಲಿ ಹೇಳಿದೆ.

ಶ್ರೀನಗರದ ಹೈದರ್‌ಪೋರಾದ ವಾಣಿಜ್ಯ ಸಂಕೀರ್ಣದಲ್ಲಿ ಸೋಮವಾರ ಭದ್ರತಾ ಪಡೆ ನಡೆಸಿದ ಕಾರ್ಯಾಚರಣೆ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ ಹಾರ್ಡ್‌ವೇರ್ ಅಂಗಡಿಯ ಮಾಲಕ ಮುಹಮ್ಮದ್ ಅಲ್ತಾಫ್ ಭಟ್ ಹಾಗೂ ಉದ್ಯಮಿಯಾಗಿ ಪರಿವರ್ತನೆಯಾದ ದಂತವೈದ್ಯ ಡಾ. ಮುದಸ್ಸಿರ್ ಗುಲ್ ಮೃತಪಟ್ಟಿದ್ದರು. 

ಆರಂಭದಲ್ಲಿ ಪೊಲೀಸರು ಭಟ್ ಹಾಗೂ ಗುಲ್ ರನ್ನು ಶಂಕಿತ ಉಗ್ರರು ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪ್ರತಿಪಾದಿಸಿದ್ದರು. ಆದರೆ ಅನಂತರ, ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಸಂದರ್ಭ ನಡೆದ ಗುಂಡಿನ ಚಕಮಕಿಯಲ್ಲಿ ಅವರು ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಿದ್ದರು. ಆದರೆ, ಭಟ್ ಅವರ ಸೊಸೆ ಪೊಲೀಸರು ಅವರನ್ನು ಹತ್ಯೆಗೈದಿದ್ದಾರೆ ಎಂದು ಆರೋಪಿಸಿದ್ದರು. 

ಜಮ್ಮು ಹಾಗೂ ಕಾಶ್ಮೀರದ ಆಡಳಿತ ಗುರುವಾರ ಈ ಎನ್‌ಕೌಂಟರ್ ಕುರಿತು ನ್ಯಾಯಾಂಗ ತನಿಖೆಗೆ ಆದೇಶ ನೀಡಿತು. ಈ ಗುಂಡಿನ ಚಕಮಕಿ ಕುರಿತು ಮಾಹಿತಿ ನೀಡುವಂತೆ ಜನರನ್ನು ಆಗ್ರಹಿಸಿ ಶ್ರೀನಗರದ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಖುರ್ಷಿದ್ ಅಹ್ಮದ್ ಶಾ ಅವರು ನೋಟಿಸು ಜಾರಿ ಮಾಡಿದ್ದರು. ಹೈದರ್‌ಪೋರಾ ಎನ್‌ಕೌಂಟರ್ ಹಾಗೂ ಇಂತಹ ಇತರ ಹಲವು ಘಟನೆಗಳಲ್ಲಿ ಮೃತಪಟ್ಟವರ ಮೃದೇಹವನ್ನು ಸೂಕ್ತ ಸಮಯದಲ್ಲಿ ಅವರ ಕುಟುಂಬಕ್ಕೆ ಹಸ್ತಾಂತರಿಸುತ್ತಿಲ್ಲ. ಸಂಪ್ರದಾಯಕ್ಕೆ ಅನುಗುಣವಾಗಿ ಸೂಕ್ತ ರೀತಿಯಲ್ಲಿ ದಫನ ಮಾಡುವಲ್ಲಿ ಕುಟುಂಬದವರು ವಂಚಿತರಾಗುವಂತೆ ಮಾಡಲಾಗುತ್ತಿದೆ ಎಂದು ಗುಪ್ಕರ್ ಅಲೆಯನ್ಸ್ ಗುರುವಾರ ಗಮನ ಸೆಳೆದಿತ್ತು. ಭಾರತದ ಸಂವಿಧಾನ ಹಾಗೂ ಅಂತಾರಾಷ್ಟ್ರೀಯ ಮಾನವೀಯತೆಯ ಕಾನೂನಿನಲ್ಲಿ ಯೋಗ್ಯ ರೀತಿಯಲ್ಲಿ ದಫನ ಮಾಡುವ ಹಕ್ಕು ನೀಡಲಾಗಿದೆ. ಕಾನೂನು ಹಾಗೂ ಸುವ್ಯವಸ್ಥೆ ಸೇರಿದಂತೆ ಯಾವುದೇ ಸಂದರ್ಭಗಳಲ್ಲಿ ಮೃತದೇಹದ ದಫನದ ಹಕ್ಕನ್ನು ನಿರಾಕರಿಸುವಂತಿಲ್ಲ ಎಂದು ಗುಪ್ಕರ್ ಅಲಯನ್ಸ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X