Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಪ್ ಉಲ್ಲಂಘನೆ: ಬಿಜೆಪಿ ಬೆಂಬಲಿಸಿದ...

ವಿಪ್ ಉಲ್ಲಂಘನೆ: ಬಿಜೆಪಿ ಬೆಂಬಲಿಸಿದ ಅರಸೀಕೆರೆ ನಗರಸಭೆಯ 7 ಮಂದಿ ಜೆಡಿಎಸ್ ಸದಸ್ಯರ ಸದಸ್ಯತ್ವ ಅನರ್ಹ

ವಾರ್ತಾಭಾರತಿವಾರ್ತಾಭಾರತಿ19 Nov 2021 9:21 PM IST
share
ವಿಪ್ ಉಲ್ಲಂಘನೆ: ಬಿಜೆಪಿ ಬೆಂಬಲಿಸಿದ ಅರಸೀಕೆರೆ ನಗರಸಭೆಯ 7 ಮಂದಿ ಜೆಡಿಎಸ್ ಸದಸ್ಯರ ಸದಸ್ಯತ್ವ ಅನರ್ಹ

ಹಾಸನ: ಜೆಡಿಎಸ್ ಪಕ್ಷದಿಂದ ಗೆದ್ದು ಬಿಜೆಪಿಗೆ ಬೆಂಬಲ ನೀಡಲು ಮುಂದಾಗಿದ್ದ ಅರಸೀಕೆರೆ ನಗರಸಭೆಯ ಏಳು ಜೆಡಿಎಸ್‌ ಸದಸ್ಯರನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯ ಅನರ್ಹಗೊಳಿಸಿ ಆದೇಶ ಹೊರಡಿಸಿದೆ.

ಜೆಡಿಎಸ್ ಚಿಹ್ನೆಯಡಿ ಸ್ಪರ್ಧಿಸಿ ಆಯ್ಕೆಗೊಂಡಿದ್ದ ಎಂ.ಎಸ್‌. ಹರ್ಷವರ್ಧನರಾಜ್ (ವಾರ್ಡ್ ನಂ.1), ಚಂದ್ರಶೇಖರಯ್ಯ (ವಾರ್ಡ್ ನಂ.9), ಎನ್‌.ಕವಿತಾದೇವಿ (ವಾರ್ಡ್ ನಂ. 18), ಎ.ವಿ. ದರ್ಶನ್ (ವಾರ್ಡ್ ನಂ.19), ಬಿ.ಎನ್.ವಿದ್ಯಾಧರ್ (ವಾರ್ಡ್ ನಂ.25), ಆಯಿಷಾ (ವಾರ್ಡ್ ನಂ.28), ಪುಟ್ಟಸ್ವಾಮಿ ನಂ.15), 'ಕಲೈ ಅರಸಿ (ವಾರ್ಡ್ ನಂ.2), ಜೂನ್ 22ರಂದು ಜೆಡಿಎಸ್ ಶಾಸಕ ಶಿವಲಿಂಗೇಗೌಡರ ವಿರುದ್ಧ ಬಹುಮತ ಇಲ್ಲದಿದ್ದರೂ ನಗರಸಭೆ ಅಧ್ಯಕ್ಷಗಾದಿಗೆ ಏರಿದ್ದ ಬಿಜೆಪಿಗೆ ನೆರವಾಗೋ ನಿರ್ಧಾರದೊಂದಿಗೆ ಪ್ರತ್ಯೇಕ ಆಸನಕ್ಕಾಗಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರು.

ಹಾಸನ ಜಿಲ್ಲಾಧಿಕಾರಿ ಎದುರು ಕಚೇರಿಯಲ್ಲಿ ಪ್ರತ್ಯಕ್ಷವಾಗಿದ್ದ ಜೆಡಿಎಸ್‌ನ 7 ನಗರಸಭೆ ಸದಸ್ಯರು ಅರಸೀಕೆರೆ ಜೆಡಿಎಸ್‌ ನಲ್ಲಿ ಶಾಸಕರಿಂದ ತಮಗೆ ಉಸಿರುಗಟ್ಟಿಸೋ ವಾತಾವರಣ ಇದೆ. ನಾವು ಗೆದ್ದಿರೋ ಮೂರನೇ ಒಂದು ಭಾಗ ಸದಸ್ಯರು ಪಕ್ಷ ತೊರೆದು ಹೊರ ಬರುತ್ತಿದ್ದೇವೆ, ನಮಗೆ ಕೂರೋಕೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕು. ಹಾಗೆಯೇ ನಾವು ವಿಷಯಾಧರಿತವಾಗಿ ಬಿಜೆಪಿಯಿಂದ ಅಧ್ಯಕ್ಷರಾಗಿರೋ ಗಿರೀಶ್ ರನ್ನ ಬೆಂಬಲಿಸುತ್ತೇವೆ ಎಂದು ಹೇಳಿ ಮನವಿ ಸಲ್ಲಿಸಿದ್ದರು. ಮರುದಿನವೇ 2ನೇ ವಾರ್ಡ್ ಸದಸ್ಯೆ ಕಲೆ ಅರಸಿ ವಾಪಸ್ ಜೆಡಿಎಸ್ ನಾಯಕರ ಬಳಿ ಬಂದಿದ್ದರು. ನಮಗೆ 10 ಲಕ್ಷದ ಆಮಿಷವೊಡ್ಡಿದರು, ಅಂದು ಸಿಎಂ ಯಡಿಯೂರಪರ ರಾಜಕೀಯ ಕಾರ್ಯದರ್ಶಿ ಸಂತೋಷ್ ಬಲವಂತವಾಗಿ ಅವರ ಆಪ್ತರ ಮೂಲಕ 10 ಲಕ್ಷ ಹಣವನ್ನೂ ಮನೆಯಲ್ಲಿ ಇಟ್ಟು ಹೋಗಿದ್ದರು ಎಂದು ಆಪರೇಷನ್ ಕಮಲದ ಬಾಂಬ್ ಸಿಡಿಸಿದರು.

7 ಸದಸ್ಯರ ಮನವಿ ಸ್ವೀಕಾರ ಮಾಡಿದ್ದ ಜಿಲ್ಲಾಧಿಕಾರಿಗಳು ಈ ಬಗ್ಗೆ ಜೆಡಿಎಸ್ ರಾಜ್ಯಾಧ್ಯಕ್ಷ, ಜಿಲ್ಲಾಧ್ಯಕ್ಷ, ತಾಲೂಕು ಅಧ್ಯಕ್ಷರಿಗೆ ನೋಟೀಸ್ ನೀಡಿದರು. ಈ ನೊಟೀಸ್ ನೀಡಿ ಜೆಡಿಎಸ್ ಬಂಡಾಯ ಸದಸ್ಯರ ವಿರುದ್ಧ ಅನರ್ಹತೆಯ ಬಾಣ ಪ್ರಯೋಗಿಸಿತ್ತು. ಪಕ್ಷಾಂತರ ನಿಷೇಧ ಕಾಯಿದೆಯ ಉಲ್ಲಂಘನೆ ಎಂದು ಡಿಸಿ ಕೋರ್ಟ್‌ನಲ್ಲಿ ದೂರು ನೀಡಿತ್ತು. ಮಂಡ್ಯ, ಹುಣಸೂರು, ಚಾಮರಾಜನಗರಗಳಲ್ಲಿಯೂ ಹೀಗೆ ಸದಸ್ಯರು ಬಂಡಾಯವೆದ್ದು ಹೋದಾಗ ಕೋರ್ಟ್ ಕೊಟ್ಟ ತೀರ್ಪು ಉಲ್ಲೇಖಿಸಿ ವಾದ ಮಂಡಿಸಿತ್ತು. ಎರಡೂ ಕಡೆಯವರ ವಾದ ವಿವಾದ ಆಲಿಸಿರೋ ಡಿಸಿಯವರು ತೀರ್ಪು ನೀಡಿ ಎಲ್ಲಾ ಏಳು ಜನರನ್ನೂ ಅನರ್ಹಗೊಳಿಸಿ ಆದೇಶ ನೀಡಿದ್ದಾರೆ.

ನಗರಸಭೆ ಚುನಾವಣೆಯಲ್ಲಿ ಗೆದ್ದ 21 ಜನ ಸದಸ್ಯರಲ್ಲಿ 7 ಜನರು ಹೊರ ಹೋದರೆ ಪಕ್ಷಾಂತರ ನಿಷೇಧ ಕಾಯಿದೆ ಅಡ್ಡಿಯಾಗಲ್ಲ ಎನ್ನುವ ಲೆಕ್ಕಾಚಾರದಿಂದ ಪಕ್ಷ ತೊರೆಯೋಕೆ ಮುಂದಾಗಿದ್ದವರು ಇದೀಗ ಅನ ರ್ಹಗೊಂಡಿದ್ದಾರೆ. ಒಟ್ಟು 31 ಸದಸ್ಯಬಲದ ಅರಸೀಕೆರೆ ನಗರಸಭೆಯಲ್ಲಿ ಜೆಡಿಎಸ್ ಬರೊಬ್ಬರಿ 21 ಸ್ಥಾನ ಗೆದ್ದು ಸ್ಪಷ್ಟ ಬಹುಮತ ಪಡೆದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X