ನೇಣು ಬಿಗಿದು ಆತ್ಮಹತ್ಯೆ
ಉಡುಪಿ, ನ.19: ಮದ್ಯಪಾನದ ಚಲ ಹೊಂದಿದ್ದು, ಕಳೆದೊಂದು ವರ್ಷದಿಂದ ಮಾನಸಿಕ ಖಾಯಿಲೆಗಾಗಿ ಚಿಕಿತ್ಸೆ ಪಡೆಯುತಿದ್ದ ಕಂದಾವರ ಗ್ರಾಮ ಮೂಡ್ಲಕಟ್ಟೆಯ ಗಿರೀಶ್ ದೇವಾಡಿಗ (59) ಎಂಬವರು ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಮನೆಯ ಮಲಗುವ ಕೋಣೆಯ ಸೀಲಿಂಗ್ ಪ್ಯಾನ್ ಹುಕ್ಕಿಗೆ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





